ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ನಿಲ್ಲಿ: ಡಿಸ್ಟಿಲರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರ:ಮೆಕ್ಕೆಜೋಳ ಖರೀದಿ ಮತ್ತು ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ (ಶುಕ್ರವಾರ) ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಡಿಸ್ಟಿಲರಿಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಕೂಡಲೇ ಮೆಕ್ಕೆಜೋಳ ಖರೀದಿಗೆ ಮುಂದಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ನಿರ್ದೇಶನಗಳನ್ನು ನೀಡಿದೆ. ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು….

