‘ಸುರಂಗ ರಸ್ತೆ ಕೇವಲ ದೋಚುವ ತಂತ್ರ’: ರುದ್ರಭೂಮಿ ಕಾರ್ಮಿಕರಿಗೆ ಸಂಬಳ ಕೊಡಲಾಗದ ಸರ್ಕಾರದಿಂದ ಸಾವಿರಾರು ಕೋಟಿ ಯೋಜನೆ ಏಕೆ? – ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು: ನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸುರಂಗ ಮಾರ್ಗ (ಟನೆಲ್ ರೋಡ್) ಮಾಡುವ ಮಾತುಗಳ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆ ಕೇವಲ ‘ದೋಚುವ ತಂತ್ರ’ ಅಷ್ಟೇ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸುರಂಗ ಮಾರ್ಗ ಆಮೇಲೆ ಮಾಡೋಣ. ಆದರೆ, ರುದ್ರಭೂಮಿಯಲ್ಲಿ ಕೆಲಸ ಮಾಡುವ 147 ಜನ ಕಾರ್ಮಿಕರಿಗೆ ಸಂಬಳ ಕೊಡೋ ಯೋಗ್ಯತೆ ಈ ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ ಇಲ್ಲವೇ?” ಎಂದು ನೇರವಾಗಿ ಪ್ರಶ್ನಿಸಿದರು….

