ಕಬ್ಬು ಬೆಲೆ ಬಿಕ್ಕಟ್ಟು: ‘ಎಫ್.ಆರ್.ಪಿ. ನಿಗದಿ ಕೇಂದ್ರದ ಹೊಣೆ’ – ಸಮಸ್ಯೆ ಪರಿಹರಿಸಲು ಪ್ರಧಾನಿ ಭೇಟಿಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ
ಬೆಂಗಳೂರು: ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಉದ್ಭವಿಸಿರುವ ಕಬ್ಬು ಬೆಳೆಗಾರರ ಬಿಕ್ಕಟ್ಟಿಗೆ ಕೇಂದ್ರದ ನೀತಿಗಳೇ ಮೂಲ ಕಾರಣವೆಂದು ಸ್ಪಷ್ಟವಾಗಿ ಘೋಷಿಸಿದರು. ರೈತರ ಉತ್ಪನ್ನಕ್ಕೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್.ಆರ್.ಪಿ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರವಾಗಿದೆ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿ.ಜೆ.ಪಿ ನಾಯಕರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಅವರು ಮನವಿ ಮಾಡಿದರು. ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ…

