ವಿಶ್ವದ ಟಾಪ್ 100 ಅತ್ಯುತ್ತಮ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿಗೆ ಹೆಮ್ಮೆಯ 29ನೇ ಸ್ಥಾನ!

​ಬೆಂಗಳೂರು: ಪ್ರತಿಷ್ಠಿತ ಜಾಗತಿಕ ಸಲಹಾ ಸಂಸ್ಥೆಯಾದ ರೆಸೋನೆನ್ಸ್ ಕನ್ಸಲ್ಟೆನ್ಸಿ (Resonance Consultancy) ಸಂಸ್ಥೆಯು ಇತ್ತೀಚೆಗೆ ಪ್ರಪಂಚದಾದ್ಯಂತ ವಾಸಿಸಲು, ಕೆಲಸ ಮಾಡಲು ಮತ್ತು ಭೇಟಿ ನೀಡಲು ಯೋಗ್ಯವಾದ ಟಾಪ್ 100 ಅತ್ಯುತ್ತಮ ನಗರಗಳ (World’s Best Cities) ವಾರ್ಷಿಕ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಮಹಾನಗರವು ಹೆಮ್ಮೆಯ 29ನೇ ಸ್ಥಾನ ಗಳಿಸುವ ಮೂಲಕ ಗಮನ ಸೆಳೆದಿದೆ. ​ಭಾರತದಿಂದ ಈ ಅಗ್ರ 30ರ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ನಗರ ಬೆಂಗಳೂರು ಎಂಬುದು ವಿಶೇಷ. ಇನ್ನು, ಭಾರತದ…

Read More

ಮನುವಾದಿಗಳು ಸಂವಿಧಾನ ವಿರೋಧಿಸಲು ಮನುಸ್ಮೃತಿಯೇ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಸಮಾನತೆ ನಿವಾರಣೆಗಾಗಿಯೇ ಸರ್ಕಾರದಿಂದ ‘ಭಾಗ್ಯ’ ಮತ್ತು ‘ಗ್ಯಾರಂಟಿ’ ಯೋಜನೆಗಳ ಜಾರಿ; ವಸಂತನಗರದಲ್ಲಿ ಸಂವಿಧಾನ ದಿನಾಚರಣೆ ​ಬೆಂಗಳೂರು: ನವೆಂಬರ್ 26: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಷ್ಯ ವಿರೋಧಿ ಮತ್ತು ಸಮಾನತೆ ವಿರೋಧಿ ನಿಯಮಗಳಿದ್ದ ಮನುಸ್ಮೃತಿಯ ಆಶಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಗಿದೆ. ಅದಕ್ಕಾಗಿಯೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಅಭಿಪ್ರಾಯ ವ್ಯಕ್ತಪಡಿಸಿದರು. ​ಅವರು ಬುದುವಾರದಂದು (ನ.26) ವಸಂತನಗರದ ಡಾ….

Read More

ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರಿನಲ್ಲಿ ‘ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು ಮತ್ಸ್ಯ ಮೇಳ’ ಉದ್ಘಾಟನೆ; ರಾಜ್ಯ ಮೀನು ಉತ್ಪಾದನೆಯಲ್ಲಿ 3ನೇ ಸ್ಥಾನ ​ಬೆಂಗಳೂರು, ನವೆಂಬರ್ 22: ಮೀನುಗಾರಿಕಾ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಮೀನುಗಾರ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಮೀನುಗಾರಿಕಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ​ಅವರು ಇಂದು ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಮೀನುಗಾರಿಕೆ ಇಲಾಖೆಯು ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ವನ್ನು ಉದ್ಘಾಟಿಸಿ ಶುಭ ಹಾರೈಸಿದರು….

Read More

ಶಿಕ್ಷಣ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿರಲಿ; ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನ. 21: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನವಿಲ್ಲ. ಶಿಕ್ಷಣವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶುಕ್ರವಾರದಂದು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ “ಸಂಘದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ, ದೇವರಾಜ ಅರಸು ಮತ್ತು ಎಲ್.ಜಿ. ಹಾವನೂರು ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ​🏫 ಉಚಿತ ಶಿಕ್ಷಣ, ಸಮಾನತೆಗಾಗಿ ಹಾಸ್ಟೆಲ್‌ಗಳು ​ಸರ್ಕಾರ…

Read More

7 ಕೋಟಿ ದರೋಡೆ ಕೇಸ್‌ಕ್ಕೆ ಪೊಲೀಸಪ್ಪನೇ ಮಾಸ್ಟರ್‌ಮೈಂಡ್: ಗೋವಿಂದಪುರ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ ಬಂಧನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದ್ದ 7 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹಗಲು ದರೋಡೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ದರೋಡೆಯ ಹಿಂದಿನ ಮಾಸ್ಟರ್‌ಮೈಂಡ್ ಪೊಲೀಸ್ ಸಿಬ್ಬಂದಿಯೇ ಎಂಬ ಸಂಗತಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ ಅವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಅಣ್ಣಪ್ಪ ನಾಯ್ಕ ಅವರೇ ದರೋಡೆಯ ಸಂಚು ರೂಪಿಸಿ, ಕಮ್ಮನಹಳ್ಳಿ–ಕಲ್ಯಾಣನಗರ ಪ್ರದೇಶದ ಯುವಕರನ್ನು ಸೇರಿಸಿ ತಂಡ ಸಿದ್ಧಗೊಳಿಸಿದ್ದರು. ದರೋಡೆ ಹೇಗೆ ಮಾಡಬೇಕು, ಸ್ಥಳದಿಂದ…

Read More

ಸಂಚಾರ ಇ-ಚಲನ್ ದಂಡ ಬಾಕಿಗೆ ಭರ್ಜರಿ ರಿಯಾಯಿತಿ: ಶೇ. 50ರಷ್ಟು ವಿನಾಯಿತಿ ಘೋಷಣೆ

​ಬೆಂಗಳೂರು: ಟ್ರಾಫಿಕ್ ಇ-ಚಲನ್‌ಗಳಲ್ಲಿ ದಾಖಲಾಗಿದ್ದರೂ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಸೂಚನೆಯ ಮೇರೆಗೆ, ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿಯನ್ನು ನೀಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ (ಬಿಟಿಪಿ) ವಿಭಾಗವು ಪ್ರಕಟಣೆ ಮೂಲಕ ತಿಳಿಸಿದೆ. ​ಸರ್ಕಾರದ ಆದೇಶ ಸಂಖ್ಯೆ: ಟಿಡಿ 27 ಟಿಡಿಓ 2023 ರನ್ವಯ ಈ ರಿಯಾಯಿತಿ ಅವಕಾಶವನ್ನು ಕಲ್ಪಿಸಲಾಗಿದ್ದು, ಇದು ದಿನಾಂಕ 21.11.2025 ರಿಂದ 12.12.2025 ರವರೆಗೆ ಜಾರಿಯಲ್ಲಿರುತ್ತದೆ….

Read More

ಜಾತಿ ಗಣತಿ ಜಾರಿಗೆ ಬದ್ಧ: ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯದ ಪರ – ಮುಖ್ಯಮಂತ್ರಿ ಸಿದ್ದರಾಮಯ್ಯ

​ಬೆಂಗಳೂರು: ಹಿಂದುಳಿದ ವರ್ಗಗಳಿಗೆ ‘ಹಾವನೂರು ವರದಿಯು ಬೈಬಲ್’ ಇದ್ದಂತೆ. ಅಂಬೇಡ್ಕರ್ ಕನಸಿನ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ನನ್ನ ಕೊನೆಯುಸಿರು ಇರುವವರೆಗೂ ಬದ್ಧನಾಗಿರುತ್ತೇನೆ. ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಗಣತಿಯ ವರದಿಯನ್ನು ಒಪ್ಪಿಕೊಂಡು ಜಾರಿಗೊಳಿಸಲು ಸಿದ್ಧವಿದ್ದು, ಮೀಸಲಾತಿ ಪ್ರಮಾಣವನ್ನು ಶೇ 70-75ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ “ಎಲ್.ಜಿ. ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ​ಹಿಂದುಳಿದವರು, ದಲಿತರು ಸೇರಿದಂತೆ…

Read More

ತಿಮ್ಮಕ್ಕ ಹೆಸರಿನಲ್ಲಿ ಪರಿಸರ ಪ್ರಶಸ್ತಿ, ₹1 ಕೋಟಿ ದತ್ತಿ ನಿಧಿ: ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಮುಖ್ಯಮಂತ್ರಿ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸ್ಥಾಪನೆಯಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಂಡಳಿಯಲ್ಲಿ ಒಂದು ಕೋಟಿ ರೂಪಾಯಿಗಳ ದತ್ತಿ ನಿಧಿಯನ್ನು ಸ್ಥಾಪಿಸುವುದಾಗಿ ಘೋಷಿಸಿದರು. ಈ ನಿಧಿಯ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಪರಿಸರ ಸಂರಕ್ಷಣೆಗಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಮತ್ತು ಕನಿಷ್ಠ ಐದು ಪರಿಸರವಾದಿಗಳಿಗೆ ‘ಸಾಲು ಮರದ ತಿಮ್ಮಕ್ಕ’ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು. ​ಇದೇ ದಿನ ಮಾಜಿ…

Read More

ಸಾಲುಮರದ ತಿಮ್ಮಕ್ಕ ನಿಧನ: ರಾಜ್ಯಾದ್ಯಂತ ರಜೆ ಇಲ್ಲ — ಸುಳ್ಳು ಆದೇಶ ವೈರಲ್; ಸರಕಾರದ ಅಧಿಕೃತ ಸ್ಪಷ್ಟನೆ

ಬೆಂಗಳೂರು: ವೃಕ್ಷಮಾತೆ, ನಾಡೋಜ ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ, ಕರ್ನಾಟಕ ಸರ್ಕಾರ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ರಾಜ್ಯಾದ್ಯಂತ ಯಾವುದೇ ಸರ್ಕಾರಿ ರಜೆ ಇರುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ವೈರಲ್ ಆದೇಶ ಪತ್ರವು ನಿಜವಾದದ್ದಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಅದು ಮಾಜಿ ಸಚಿವ ಎಸ್. ಎಂ. ಕೃಷ್ಣ ಅವರ ನಿಧನದ ಸಂದರ್ಭದಲ್ಲಿ…

Read More

🌳 ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ: ರಾಜ್ಯಾದ್ಯಂತ ನಾಳೆ ಶನಿವಾರ ಸಾರ್ವಜನಿಕ ರಜೆ ಘೋಷಣೆ

ಬೆಂಗಳೂರು:ನಾಡಿನ ಹೆಮ್ಮೆಯ ಪರಿಸರವಾದಿ ಹಾಗೂ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ (14.11.2025) ಬೆಳಗಿನ ಜಾವ 02:30ಕ್ಕೆ ನಿಧನರಾದ ಕುರಿತು ಕರ್ನಾಟಕ ಸರ್ಕಾರವು ಗಂಭೀರ ಸಂತಾಪ ಸೂಚಿಸಿದೆ. ಈ ಬಗ್ಗೆ ಸಚಿವಾಲಯ, ವಿಧಾನ ಸೌಧದಿಂದ ಸಂಖ್ಯೆ: ಸಿಆಸುಇ 35 ಹಚ್‌ಹಚ್ಚಲ್ 2024ರ ಅಧಿಸೂಚನೆ ಹೊರಡಿಸಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ಅಪಾರ ಕೊಡುಗೆ ನೀಡಿದ ದಿವಂಗತ ತಿಮ್ಮಕ್ಕ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಪ್ರಕಟಿಸಿದೆ. ಅವರ ಅಂತ್ಯಕ್ರಿಯೆಯನ್ನು ಶನಿವಾರ ರಂದು, ಮಂಡ್ಯ ಜಿಲ್ಲೆಯ ಮದ್ದೂರು…

Read More