ರಕ್ತದಾನ ಮಹಾದಾನ, ಸಮಾಜಮುಖಿ ಸೇವೆಯೇ ನಿಜವಾದ ಹುಟ್ಟುಹಬ್ಬದ ಆಚರಣೆ: ಪಂಚಗೃಹ ಹಿರೇಮಠದ ಇಮ್ಮಡಿ ಸಿದ್ದೇಶ್ವರ ಶ್ರೀ

ನವಲಗುಂದ: ರಕ್ತದಾನ ಮಹಾದಾನವಾಗಿದ್ದು, ರಕ್ತದಾನ ಮಾಡುವ ಪ್ರತಿಯೊಬ್ಬರೂ ಹಲವರ ಜೀವ ಉಳಿಸಲು ಕಾರಣರಾಗುತ್ತಾರೆ. ಇಂತಹ ಸೇವೆ ಅತ್ಯಂತ ಶ್ರೇಷ್ಠವಾದದ್ದು ಎಂದು ಪಂಚಗೃಹ ಹಿರೇಮಠದ ಇಮ್ಮಡಿ ಸಿದ್ದೇಶ್ವರ ಶ್ರೀಗಳು ಹೇಳಿದರು. ಶುಕ್ರವಾರ ಪಟ್ಟಣದ ಶ್ರೀ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ದೇವರಾಜ ದಾಡಿಬಾವಿ ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ಜನ್ಮದಿನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಹುಟ್ಟುಹಬ್ಬವನ್ನು ದುಂದುವೆಚ್ಚದಿಂದ ಆಚರಿಸುವ ಬದಲು ಸಮಾಜಕ್ಕೆ ಒಳಿತಾಗುವ ಸತ್ಕಾರ್ಯಗಳ ಮೂಲಕ…

Read More

ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 10 ಜನರಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 10 ಮಂದಿ ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯ ಆದೇಶಕ್ಕೆ ಉನ್ನತ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಹೈಕೋರ್ಟ್‌ನ ಈ ನಿರ್ಣಾಯಕ ಆದೇಶದಿಂದಾಗಿ ‘ದೋಷಿ’ ಎಂಬ ತೀರ್ಪಿಗೆ ತಡೆ ಬಿದ್ದಂತಾಗಿದ್ದು, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಿದೆ. ಪ್ರಕರಣದ…

Read More

ಬರಗಾಲದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಅಧಿಕಾರಿಗಳಿಗೆ ಸೂಚನೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ

ಧಾರವಾಡ:ಬರಗಾಲದ ಪರಿಸ್ಥಿತಿ ಇರುವುದರಿಂದ ಸಾರ್ವಜನಿಕರಿಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಉತ್ತಮ ಸೇವೆ ಒದಗಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ತುಳಸಿ ಮದ್ದಿನೇನಿ ಅವರು ಸೂಚಿಸಿದರು. ಅವರು ಗುರುವಾರದಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಜೂನ್ 2026ರ ಅಂತ್ಯದ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಆರೋಗ್ಯ ಇಲಾಖೆಯಿಂದ ನಡೆಯುತ್ತಿರುವ ಆರೋಗ್ಯ…

Read More

ಕುಂದಗೋಳ ಒಳಚರಂಡಿ ಯೋಜನೆಗೆ ₹96.60 ಕೋಟಿ ಅನುದಾನ ಮಂಜೂರಿಗೆ ನಗರಾಭಿವೃದ್ದಿ ಸಚಿವ ಯತ್ರಿಂದ್ರ ಸಿದ್ದರಾಮಯ್ಯನವರಿಗೆ ಮನವಿ

ಕುಂದಗೋಳ: ಕುಂದಗೋಳ ಪಟ್ಟಣದ ಬಹುನಿರೀಕ್ಷಿತ ಒಳಚರಂಡಿ ಯೋಜನೆಗೆ ₹96.60 ಕೋಟಿ (₹9,660 ಲಕ್ಷ) ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ ಎಸ್. ಶಿವಳ್ಳಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕುಂದಗೋಳ ಪಟ್ಟಣದ ಒಳಚರಂಡಿ ಯೋಜನೆಯ ಕಡತವನ್ನು ಮಾಜಿ ಸಚಿವ ದಿ. ಸಿ. ಎಸ್. ಶಿವಳ್ಳಿ ಅವರ ವಿಶೇಷ ಪರಿಶ್ರಮದಿಂದ ಸರ್ಕಾರದ ಸಚಿವಾಲಯದಲ್ಲಿ ಅಂತಿಮ ಹಂತದವರೆಗೆ ತಲುಪಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ…

Read More

ಧಾರವಾಡದಲ್ಲಿ ಜಾನಪದ ಉತ್ಸವ ಸಂಭ್ರಮ: ಗ್ರಾಮೀಣ ಜಾನಪದ ಕಲೆಗಳ ಉಳಿವಿಗೆ ಒತ್ತಾಯ

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಮರೆವಾಡ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಹಿಳಾ ಜಾನಪದ ಕಲಾ ಡೊಳ್ಳಿನ ಸಂಘದ ವತಿಯಿಂದ ಗ್ರಾಮೀಣ ಭಾಗದ ಜಾನಪದ ಕಲೆಗಳ ಸಂಭ್ರಮದ ಕಾರ್ಯಕ್ರಮ “ಜಾನಪದ ಉತ್ಸವ” ಧಾರವಾಡದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ಮರೆವಾಡ ಗ್ರಾಮದ ಪರಮಪೂಜ್ಯ ಶ್ರೀ ಶೇಖರಯ್ಯ ಹಿರೇಮಠ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಕರ್ನಾಟಕ ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ತವನಪ್ಪ ಅಷ್ಟಗಿ ಅವರು ಡೊಳ್ಳು…

Read More

ಪತ್ನಿಯನ್ನು ಕೊಡಲಿಯಿಂದ ಕೊಲೆ ಮಾಡಿದ ಗುರುಶಾಂತಪ್ಪನಿಗೆ ಜೀವಾವಧಿ ಶಿಕ್ಷೆ: ಧಾರವಾಡ ಜಿಲ್ಲಾ ನ್ಯಾಯಾಲಯ ತೀರ್ಪು

ಧಾರವಾಡ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಗುರುಶಾಂತಪ್ಪ ಅನವಾಲದನಿ ಎಂಬಾತ ತನ್ನ ಪತ್ನಿ ಪಾರವ್ವ ಹಾಗೂ ಮನೆಯ ಸದಸ್ಯರು ತನ್ನ ಮೇಲೆ ಮಾಟಮಂತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ನಿರಂತರ ಕಿರುಕುಳ ನೀಡುತ್ತಿದ್ದನು. ಇದೇ ವಿಚಾರವಾಗಿ 2024ರ ಮಾರ್ಚ್ 30ರಂದು ನಸುಕಿನ ವೇಳೆ ಮಲಗಿದ್ದ ಪತ್ನಿ ಪಾರವ್ವಳ ಮೇಲೆ…

Read More

ನವಲಗುಂದದಲ್ಲಿ ಸಾರ್ವಜನಿಕರ ಹಣ ನೀರು ಪಾಲು – ಜಲ ಮಂಡಳಿ ಕಳಪೆ ಕಾಮಗಾರಿ ವಿರುದ್ಧ ಜನಾಕ್ರೋಶ ಕೋಟಿ ಕೋಟಿ ಲೂಟಿ??

ನವಲಗುಂದ: ಪಟ್ಟಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಒಳಚರಂಡಿ (ಯುಜಿಡಿ) ಕಾಮಗಾರಿಯು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಡೆಯುತ್ತಿರುವ ಈ ಕಾಮಗಾರಿಯಲ್ಲಿ, ಅಭಿವೃದ್ಧಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ದುರುಪಯೋಗವಾಗುತ್ತಿರುವುದು ಅತ್ಯಂತ ಖಂಡನೀಯ. ವಿಶ್ವಾಸಾರ್ಹ ಮೂಲಗಳ ಪ್ರಕಾರ ಈ ಬೃಹತ್ ಯೋಜನೆಗಾಗಿ ಬರೋಬ್ಬರಿ 30 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದರೂ, ಸ್ಥಳದಲ್ಲಿ ನಡೆಯುತ್ತಿರುವ ಕೆಲಸದ ಸ್ಥಿತಿಯನ್ನು ನೋಡಿದರೆ…

Read More

ಕುಂದಗೋಳದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ: ಜನಸಂಖ್ಯಾ ಸ್ಫೋಟದ ಸವಾಲುಗಳ ಕುರಿತು ಜಾಗೃತಿ

ಕುಂದಗೋಳ: ತಾಲೂಕಿನ ಜೆ.ಎಸ್.ಎಸ್. ಕಾಲೇಜಿನಲ್ಲಿ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ವತಿಯಿಂದ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶ ಹಾಗೂ ಸಮಾಜ ಎದುರಿಸುತ್ತಿರುವ ಸವಾಲುಗಳ ಕುರಿತು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಧಿಕಾರಿಗಳು, ನಿಯಂತ್ರಣವಿಲ್ಲದ ಜನಸಂಖ್ಯಾ ಬೆಳವಣಿಗೆಯಿಂದ ಆಹಾರದ ಕೊರತೆ, ಕುಡಿಯುವ ನೀರಿನ ಅಭಾವ, ಗುಣಮಟ್ಟದ ಶಿಕ್ಷಣದ ಕೊರತೆ, ನಿರುದ್ಯೋಗ, ಪರಿಸರ ಮಾಲಿನ್ಯ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿಸಿದರು. ಜನಸಂಖ್ಯೆ…

Read More

ಸರ್ವಧರ್ಮ ಸೌಹಾರ್ದದ ಪ್ರತೀಕ: ಜುಲೈ 18, 19ರಂದು ನವಲಗುಂದದ ಅಜಾತ ನಾಗಲಿಂಗಜ್ಜರ ಜಾತ್ರಾ ಮಹೋತ್ಸವ

ನವಲಗುಂದ: ಮಠದಲ್ಲೊಂದು ಬೈಬಲ್ ಇದೆ, ಆದರೆ ಅದು ಚರ್ಚ್ ಅಲ್ಲ… ಮೊಹರಂನ ಪಂಜಾಗಳಿವೆ, ಆದರೆ ಅದು ದರ್ಗಾ ಅಲ್ಲ… ಸಿದಗಿಯಿದೆ, ಆದರೆ ಅದು ರುದ್ರಭೂಮಿಯಲ್ಲ… ಇಂತಹ ಅಪರೂಪದ ವೈಶಿಷ್ಟ್ಯಗಳ ಮೂಲಕ ಜಗತ್ತಿಗೆ ಸರ್ವಧರ್ಮ ಸಮಾನತೆ ಮತ್ತು ಮಾನವೀಯತೆಯ ಸಂದೇಶ ಸಾರುತ್ತಿರುವ ನವಲಗುಂದದ ಶ್ರೀ ಅಜಾತ ನಾಗಲಿಂಗೇಶ್ವರ ಮಠದಲ್ಲಿ ಈ ವರ್ಷದ 145ನೇ ಆರಾಧನಾ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಜುಲೈ 18 ಮತ್ತು 19ರಂದು ಅಜ್ಜನ ಆರಾಧನೆ ಹಾಗೂ ಪಲ್ಲಕ್ಕಿ ಮಹೋತ್ಸವವು ಭಕ್ತಾದಿಗಳ…

Read More

ಧಾರವಾಡದಲ್ಲಿ ಘೋರ ಕೃತ್ಯ: ಪತ್ನಿಯಿಂದಲೇ ವೈದ್ಯ ಪತಿಯ ಹತ್ಯೆ, ಮಗನ ಮೇಲೂ ಮಾರಣಾಂತಿಕ ಹಲ್ಲೆ!

ಧಾರವಾಡದಲ್ಲಿ ಘೋರ ಕೃತ್ಯ: ಪತ್ನಿಯಿಂದಲೇ ವೈದ್ಯ ಪತಿಯ ಹತ್ಯೆ, ಮಗನ ಮೇಲೂ ಮಾರಣಾಂತಿಕ ಹಲ್ಲೆ! ಧಾರವಾಡ: ಇಡೀ ಸಾಂಸ್ಕೃತಿಕ ನಗರಿಯನ್ನೇ ಬೆಚ್ಚಿಬೀಳಿಸುವ ಭೀಕರ ದುರಂತವೊಂದು ರಂಕಾ ಅಪಾರ್ಟ್‌ಮೆಂಟ್‌ನಲ್ಲಿ ವರದಿಯಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವೈದ್ಯರೊಬ್ಬರನ್ನು ಅವರ ಧರ್ಮಪತ್ನಿಯೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ನಲವತ್ತೈದು ವರ್ಷದ ಡಾ. ಕಿರಣ್ ಹೊನಣ್ಣವರ್ ಎಂದು ಗುರುತಿಸಲಾಗಿದೆ. ಆರೋಪ ಎದುರಿಸುತ್ತಿರುವ ಪತ್ನಿ ಪ್ರಿಯಾಂಕಾ ಅವರನ್ನು ಸದ್ಯ ಧಾರವಾಡ ನಗರ ಪೊಲೀಸರು ವಶಕ್ಕೆ ಪಡೆದು ತೀವ್ರ…

Read More