ಗುಡಿಸಾಗರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಸಡಗರ: ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಭಕ್ತಸಾಗರ
ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಭಕ್ತಿ ಮತ್ತು ಸೌಹಾರ್ದತೆಯ ಸಂಗಮದಂತಿದ್ದ ಈ ಜಾತ್ರಾ ಮಹೋತ್ಸವಕ್ಕೆ ನರಗುಂದ ಪತ್ರಿವನದ ಪೂಜ್ಯ ಅಜ್ಜರು ಆಗಮಿಸಿ, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು. ಮಂತ್ರಘೋಷಗಳ ನಡುವೆ ನೂತನ ವಧು-ವರರಿಗೆ ಅಕ್ಷತೆ ಹಾಕಿ ಹರಸಿದ ಪೂಜ್ಯರು, ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದರು. ಜಾತ್ರೆಯ ಅಂಗವಾಗಿ ವಿವಿಧ ಊರುಗಳಿಂದ ಆಗಮಿಸಿದ್ದ ಶ್ರೀ ಬೀರಲಿಂಗೇಶ್ವರನ ಪಲ್ಲಕ್ಕಿಗಳು ಗ್ರಾಮದ…

