ತಡಕೋಡ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮಿಲನ: ಸಾಂಸ್ಕೃತಿಕ ವೈಭವದೊಂದಿಗೆ ಯಶಸ್ವಿ ಸಮಾರೋಪ

ತಡಕೋಡ: ಇಲ್ಲಿನ ಸ್ಥಳೀಯ ಶಾಲೆಯು ಜ್ಞಾನಾರ್ಜನೆಯ ಹಾದಿಯಲ್ಲಿ ಮತ್ತೊಂದು ಯಶಸ್ವಿ ವರ್ಷವನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ “ವಾರ್ಷಿಕ ಸ್ನೇಹ ಸಮ್ಮಿಲನ ಮತ್ತು ಸಾಂಸ್ಕೃತಿಕ ವೈಭವ” ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಡಿವೈಎಸ್‌ಪಿ ವಿನೋದ ಮುಕ್ತೇದಾರ ಅವರು, ತಾವು ಬಾಲ್ಯದಲ್ಲಿ ಬಡತನದ ಬೇಗೆಯ ನಡುವೆಯೇ ಶಿಕ್ಷಣ ಪಡೆದು ಇಂದು ಪೊಲೀಸ್ ಅಧಿಕಾರಿಯಾಗಿರುವುದನ್ನು ಸ್ಮರಿಸಿದರು. ಸಂಕಷ್ಟಗಳು ಎಂದಿಗೂ ಸಾಧನೆಗೆ ಅಡ್ಡಿಯಾಗುವುದಿಲ್ಲ; ವಿದ್ಯಾರ್ಥಿಗಳಲ್ಲಿ ದೃಢಸಂಕಲ್ಪ ಮತ್ತು ಕಠಿಣ ಪರಿಶ್ರಮವಿದ್ದರೆ ಯಾವುದೇ ಉನ್ನತ ಗುರಿಯನ್ನು ತಲುಪಲು…

Read More

ಅನ್ನದಾನ ಮಹಾಪುಣ್ಯದ ಕೆಲಸವಾಗಿದೆ – ಶ್ರೀ ಸಿದ್ದರಾಮದೇವರು

ನವಲಗುಂದ: ಅನ್ನದಾನ ಮಹಾ ಪುಣ್ಯದ ಕೆಲಸವಾಗಿದೆ ಅದನ್ನು ಜೀವನದಲ್ಲಿ ಗುರಿಯಾಗಿಸಿಕೊಂಡು ಶ್ರೀ ಮಠದಲ್ಲಿ ವೀರಬಸವ ದೇವರು ಆರಂಭ ಮಾಡಿದ್ದು ಬಹಳ ಸಂತೋಷ ತಂದಿದೆ ಎಂದು ಶಿರಹಟ್ಟಿಯ ಫಕ್ಕಿರೇಶ ಮಠದ ಫಕ್ಕೀರ ಸಿದ್ದರಾಮದೇವರು ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಶ್ರೀ ಸಂಸ್ಥಾನ ಪಂಚಗ್ರಹ ಹಿರೇಮಠದಲ್ಲಿ ಶ್ರೀ ಸಿದ್ದೇಶ್ವರ ಪ್ರಸಾದ ನಿಲಯ ಉದ್ಘಾಟನೆ ಮಾಡಿ ಮಾತನಾಡಿದ ಅವರು ಜಗದ್ಗುರುಗಳ ಆಶೀರ್ವಾದದಿಂದ ಇನ್ನಷ್ಟು ಕಾರ್ಯಕ್ರಮಗಳು ಈ ಪಂಚಗ್ರಹ ಹಿರೇಮಠದಲ್ಲಿ ನಡೆಯಲಿ, ನೂತನ ಪೀಠಾಧಿಕಾರಿಗಳ ಮೇಲೆ ಶಿರಹಟ್ಟಿಯ ಶ್ರೀಗಳ ಆಶೀರ್ವಾದ ಯಾವತ್ತೂ ಇರುತ್ತೆ ಎಂದರು….

Read More

ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ಮಾರ್ಚ ಅಂತ್ಯದೊಳಗೆ ಪೂರ್ಣಗೊಳಿಸಬೇಕು:ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ: ಫೆ.19: ಬೇಸಿಗೆ ಕಾಲ ಪ್ರಾರಂಭವಾಗುತ್ತೀರುವದರಿಂದ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಾಗದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ಮತ್ತು ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ನಿಯಮಾನುಸಾರ ಬರುವ ಮಾರ್ಚ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. ಅವರು ಇಂದು (ಫೆ. 19) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ…

Read More

ಶಿವಾಜಿ ಮಹಾರಾಜರ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆ ಮಾದರಿಯಾಗಿತ್ತು: ವಿಧಾನ ಪರಿಷತ್ ಶಾಸಕ ಎಫ್.ಎಚ್.ಜಕ್ಕಪ್ಪನವರ

ಧಾರವಾಡ:ಫೆ.19: ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಬ್ಬ ಶೂರ ಯೋಧರು ಮಾತ್ರವಲ್ಲದೇ, ಇಡೀ ಸಮಾಜಕ್ಕೆ ದಾರಿ ತೋರಿದ ಸಾಮಾಜಿಕ ಹರಿಕಾರರು. ತಮ್ಮ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಮೆರೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದ ದಿಕ್ಕಿನಲ್ಲಿ ಹೆಜ್ಜೆ ಇಟ್ಟವರು ಎಂದು ವಿಧಾನ ಪರಿಷತ್ ಶಾಸಕರಾದ ಎಫ್.ಎಚ್.ಜಕ್ಕಪ್ಪನವರ ಅವರು ಹೇಳಿದರು. ಅವರು ಇಂದು (ಫೆ.19) ಮಧ್ಯಾಹ್ನ ಭಾರತ ಪ್ರೌಢಶಾಲಾ ಆವರಣದಲ್ಲಿರುವ ಮರಾಠ ವಿದ್ಯಾ ಪ್ರಸಾರಕ ಮಂಡಳದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ…

Read More

ಸುಧಾ ಪ್ರಕಾಶ ಪಟ್ಟಣಶೆಟ್ಟಿ ಸಿವಿಲ್ ನ್ಯಾಯಾಧೀಶರಾಗಿ ನೇಮಕ: ಗುರುಕುಲ ಸಂಸ್ಥೆಯಿಂದ ಸನ್ಮಾನ

ನವಲಗುಂದ: ಬ್ಯಾಲಿಳ ಗ್ರಾಮದ ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಗತಿಪರ ರೈತರಾದ ದಿ. ಪ್ರಕಾಶ ಪಟ್ಟಣಶೆಟ್ಟಿ ಅವರ ಪುತ್ರಿ ಸುಧಾ ಪ್ರಕಾಶ ಪಟ್ಟಣಶೆಟ್ಟಿ ಅವರು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುಕುಲ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ದೇವರಾಜ್ ಬಿ. ದಾಡಿಬಾವಿ ಅವರು ಅವರನ್ನು ಸನ್ಮಾನಿಸಿದರು. ಸನ್ಮಾನ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಗುರಪ್ಪ ಈರೆಶನವರ, ಉಮೇಶ ಧಾರವಾಡ, ಪರಮೇಶ್ವರ ಪಟ್ಟಣಶೆಟ್ಟಿ, ಸಂಗಮೇಶ ಮುತ್ತಗಿ, ಬಸನಗೌಡ ಪಾಟೀಲ, ಬಸವರಾಜ ಸವದಿ, ರಾಜಣ್ಣ ಶಿವಪ್ಪಯ್ಯನವರ, ಗಂಗಪ್ಪ ತಳವಾರ, ಈರಣ್ಣ…

Read More

ಶಾರದಾ ಶಿಕ್ಷಣ ಸಂಸ್ಥೆಯ 10 ವರ್ಷಗಳ ಸೇವೆ ಶ್ಲಾಘನೀಯ: ಶೌಕತ್ತಲಿ ಲಂಬೂನವರ

ನವಲಗುಂದ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ 10 ವರ್ಷಗಳ ಸಾಧನೆ ಗೈದ ನಾಗನೂರು ಗ್ರಾಮದ ಶಾರದಾ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಪ್ರಗತಿಪರ ರೈತ ಶೌಕತ್ತಲಿ ಲಂಬೂನವರ ಅಭಿಪ್ರಾಯಪಟ್ಟರು. ತಾಲೂಕಿನ ನಾಗನೂರು ಗ್ರಾಮದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ 10ನೇ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣಕ್ಕಾಗಿ ದೂರದ ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೋಗುವಂತಹ ಸಂದರ್ಭಗಳು ಇರುತ್ತಿದ್ದವು. ಈ…

Read More

ನಿರಂತರ ಪ್ರಯತ್ನದಿಂದ ದೊಡ್ಡ ಸಂಸ್ಥೆ ಕಟ್ಟಲು ಸಾಧ್ಯ- ಶಿವಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು

ನವಲಗುಂದ: ಒಂದು ಶಿಕ್ಷಣ ಸಂಸ್ಥೆ ದೊಡ್ಡ ಮಟ್ಟದಲ್ಲಿ ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಳಗದ ನಿರಂತರ ಪ್ರಯತ್ನದಿಂದ ಮಾತ್ರ ಸಾದ್ಯ ಎಂದು ಸುಳ್ಳ ಹಾಗೂ ಹೂಲಿಯ ಪಂಚಗ್ರಹ ಹಿರೇಮಠದಷ. ಬ್ರ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.. ಪಟ್ಟಣದ ಬಸ್ತಿ ಪ್ಲಾಟನಲ್ಲಿರುವ ಶ್ರೀ ವಿದ್ಯಾಜ್ಯೋತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ದಶಮಾನೋತ್ಸವ ಸಂಭ್ರಮ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆ ಮಾಡಿ ಮಾತನಾಡಿದ ಅವರು ಈ ಸಂಸ್ಥೆಯು ಉತ್ತರೋತ್ತರ ಬೆಳಯಲಿ, ಗಿಡಗಳಿಗೆ ಯಾವ…

Read More

ಕುಂದಗೋಳ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕುಂದಗೋಳ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಿಂದೂ ಸಾಮ್ರಾಜ್ಯೋತ್ಸವದ ಪ್ರತೀಕ, ಧರ್ಮೋದ್ಧಾರಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ನಂತರ ಮಾತನಾಡಿದ ತಹಶೀಲ್ದಾರ್ ರಾಜು ಮಾವರಕರ ಅವರು, “ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ ಮತ್ತು ನೀತಿವಂತ ಆಡಳಿತಕ್ಕೆ ಹೆಸರಾದವರು. ಅವರ ಶೌರ್ಯ, ಹೋರಾಟದ ಹಾದಿ ಹಾಗೂ ಅವರ ಜೀವನದ ಆದರ್ಶಗಳು…

Read More

​ರೈತರ ಹೊಲಗಳಿಗೆ ಏಳು ತಾಸು ವಿದ್ಯುತ್ ನೀಡಿ: ಶ್ರೀಶೈಲಗೌಡ ಕಮತರ ಆಗ್ರಹ

ಧಾರವಾಡ: ಸರ್ಕಾರ ಮತ್ತು ಹೆಸ್ಕಾಂ ಅಧಿಕಾರಿಗಳು ರೈತರ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸದ ಕಾರಣ ಅನ್ನದಾತರು ಕೃಷಿಯಿಂದಲೇ ವಿಮುಖರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀಶೈಲಗೌಡ ಕಮತರ ಆತಂಕ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆಗಳಿಗೆ ಅತ್ಯಗತ್ಯವಾಗಿರುವ ನೀರಾವರಿಗಾಗಿ ಸಮರ್ಪಕ ವಿದ್ಯುತ್ ಪೂರೈಸಬೇಕೆಂದು ಆಗ್ರಹಿಸಿ, ಮನಗುಂಡಿ ಹಾಗೂ ಬೆಳ್ಳಿಗಟ್ಟಿ ಸುತ್ತಮುತ್ತಲಿನ ರೈತರೊಂದಿಗೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ​ಕಳೆದ 15 ದಿನಗಳಿಂದ ರೈತರ ಹೊಲಗಳಿಗೆ ವಿದ್ಯುತ್ ವಿತರಣೆಯಲ್ಲಿ ತೀವ್ರ ವ್ಯತ್ಯಯ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ….

Read More

ಧಾರವಾಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಾಧಿಕಾರಿಗಳ ನೇಮಕ: ಫೆ. 23 ರಂದು ನೇರ ಸಂದರ್ಶನ

ಧಾರವಾಡ: ಜಿಲ್ಲೆಯ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಉತ್ತಮ ಸೇವೆಯ ಹಿತದೃಷ್ಟಿಯಿಂದ, ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 07 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವೈದ್ಯಕೀಯ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಸದವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ​ಈ ನೇಮಕಾತಿಗಾಗಿ ಫೆಬ್ರವರಿ 23, 2026 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ…

Read More