​ನಾಳೆ ಕುಂದಗೋಳಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ: ಸಾರ್ವಜನಿಕ ಅಹವಾಲು ಸ್ವೀಕಾರ

ಕುಂದಗೋಳ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ನಾಳೆ ಕುಂದಗೋಳ ತಾಲೂಕಿಗೆ ಭೇಟಿ ನೀಡಲಿದ್ದಾರೆ. ದಿನಾಂಕ 19.02.2026ರ ಗುರುವಾರದಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ​ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಭೂ ದಾಖಲೆಗಳ ಸಮಸ್ಯೆ, ಪಡಿತರ ಚೀಟಿ, ಪಿಂಚಣಿ ಸೌಲಭ್ಯ ಸೇರಿದಂತೆ ಇಲಾಖಾವಾರು ದೂರುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು…

Read More

ಅಳ್ನಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಿಲನಕ್ಷೆ; ಹಿರೇಕೆರೆ ಒತ್ತುವರಿ ತೆರವು ಮಾಡಿ, ಕೆರೆ ಸ್ವಚ್ಛಗೊಳಿಸಲು ಕ್ರಮ : ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ: ಅಳ್ನಾವರ ತಾಲೂಕಿನ ಮೂಲಭೂತ ಸೌಕರ್ಯಗಳ ಉನ್ನತಿಕರಣಕ್ಕೆ ಆದ್ಯತೆ ನೀಡಿ ತಾಲೂಕಿನ ಸಮಗ್ರಭಿವೃದ್ಧಿಗೆ ನಿಲನಕ್ಷೆ ರೂಪಿಸಲಾಗುವುದು ಮತ್ತು ಅಳ್ನಾವರ ಪಟ್ಟಣದ ಹಿರೇಕೆರೆಯ ಒತ್ತುವರಿಯನ್ನು ತೆರವುಗೊಳ್ಳಿಸಿ, ಕೆರೆಯಲ್ಲಿನ ಅಂತರಗಂಗೆ ಸೇರಿದಂತೆ ಮುಳ್ಳು ಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ನಿರ್ದೇಶಿಸಿದರು. ಅವರು (ಫೆ.17) ಮಧ್ಯಾಹ್ನ ಅಳ್ಳಾವರ ಪಟ್ಟಣದ ಉಮಾಮಹೆಶ್ವರ ಭವನದಲ್ಲಿ ತಾಲೂಕಾ ಆಡಳಿತದಿಂದ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ, ಜನರ ಸಮಸ್ಯೆಗಳನ್ನು ಆಲಿಸಿ,…

Read More

ಧಾರವಾಡದಲ್ಲಿ ‘ಮಾಯಾಂಗಿ’ಯ ಹನಿಟ್ರ್ಯಾಪ್‌: ಪ್ರೀತಿಯ ನಾಟಕವಾಡಿ ಲಕ್ಷಾಂತರ ರೂಪಾಯಿ ಪಂಗನಾಮ!

ಧಾರವಾಡ: ಪ್ರೀತಿ, ಮದುವೆಯೆಂಬ ಆಮಿಷವೊಡ್ಡಿ ಯುವಕರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಕಿಲಾಡಿ ಲೇಡಿಯೊಬ್ಬಳ ಅಸಲಿ ಮುಖವಾಡ ಕಳಚಿದೆ. ಅರೋಹಿ, ರೇಣುಕಾ ಹಾಗೂ ಐಶ್ವರ್ಯ ಎಂಬ ಮೂರು ಹೆಸರುಗಳನ್ನು ಬಳಸಿಕೊಂಡು ಯುವಕರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಈ ‘ಮಾಯಾಂಗಿ’ಯ ಜಾಲಕ್ಕೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ​ನಡೆದಿದ್ದೇನು? ​ಬಂಧಿತ ಯುವತಿಯನ್ನು ಐಶ್ವರ್ಯ ಎಂದು ಗುರುತಿಸಲಾಗಿದ್ದು, ಈಕೆ ತನ್ನ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಯುವಕರನ್ನು ಟಾರ್ಗೆಟ್ ಮಾಡುತ್ತಿದ್ದಳು. ಧಾರವಾಡದ ಗುರು ವಕ್ಕುಂದ್ ಎಂಬ ಯುವಕನಿಗೆ ಮದುವೆಯಾಗುವುದಾಗಿ…

Read More

ಧಾರವಾಡ: 565 ಲೇವಾದೇವಿಗಾರರಿಗೆ ಸಹಕಾರ ಇಲಾಖೆ ಎಚ್ಚರಿಕೆ; 15 ದಿನಗಳಲ್ಲಿ ದಾಖಲೆ ಸಲ್ಲಿಸದಿದ್ದರೆ ಭದ್ರತಾ ಠೇವಣಿ ಮುಟ್ಟುಗೋಲು

​ಧಾರವಾಡ: ಜಿಲ್ಲೆಯಲ್ಲಿ ಪರವಾನಗಿ ನವೀಕರಿಸದೆ ಹಾಗೂ ನಿಯಮಾನುಸಾರ ವರದಿ ಸಲ್ಲಿಸದೆ ನಿಷ್ಕ್ರಿಯವಾಗಿರುವ 565 ಲೇವಾದೇವಿ ಸಂಸ್ಥೆಗಳ ವಿರುದ್ಧ ಸಹಕಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂದಿನ 15 ದಿನಗಳೊಳಗಾಗಿ ಸೂಕ್ತ ದಾಖಲೆ ಹಾಗೂ ವಿವರಣೆ ನೀಡದಿದ್ದಲ್ಲಿ ಅಂತಹ ಸಂಸ್ಥೆಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ನಿಂಗರಾಜ ಬೆಣ್ಣಿ ಅವರು ಎಚ್ಚರಿಕೆ ನೀಡಿದ್ದಾರೆ. ​ನಿಯಮ ಉಲ್ಲಂಘನೆ ಹಿನ್ನೆಲೆ: ​ಧಾರವಾಡ ಜಿಲ್ಲೆಯಲ್ಲಿ ಸದ್ಯ 814 ಲೇವಾದೇವಿಗಾರರು, 112 ಗಿರವಿದಾರರು ಹಾಗೂ 286 ಫೈನಾನ್ಸ್…

Read More

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಭಯಮುಕ್ತರಾಗಿ ಪರೀಕ್ಷೆ ಎದುರಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕಿವಿಮಾತು

ಧಾರವಾಡ: “ವಿದ್ಯಾರ್ಥಿಗಳು ಪರೀಕ್ಷಾ ಒತ್ತಡಕ್ಕೆ ಒಳಗಾಗದೆ, ಆತ್ಮವಿಶ್ವಾಸದಿಂದ ಮತ್ತು ಭಯಮುಕ್ತರಾಗಿ ಪರೀಕ್ಷೆಯನ್ನು ಎದುರಿಸಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ​2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಇಂದು (ಫೆ.16) ಆಯೋಜಿಸಲಾಗಿದ್ದ ‘ಜ್ಞಾನ ಸಿಂಚನ’ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಉತ್ತಮ ಅಂಕ ಗಳಿಸಲು ಹೇಗೆ ವ್ಯವಸ್ಥಿತವಾಗಿ ಅಧ್ಯಯನ ಮಾಡಬೇಕು ಎಂಬುದರ ಕುರಿತು ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ​ತಜ್ಞರಿಂದ ಸಮಸ್ಯೆಗಳಿಗೆ…

Read More

​ಧಾರವಾಡ ಉದ್ಯೋಗ ಮೇಳ: ನೋಂದಣಿಗೆ ಕ್ಯೂ.ಆರ್ ಕೋಡ್ ಸೌಲಭ್ಯ – ಫೆಬ್ರವರಿ 21 ಕೊನೆಯ ದಿನ!

ಧಾರವಾಡ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 22 ರಂದು ಕರ್ನಾಟಕ ಕಾಲೇಜು (ಕೆ.ಸಿ.ಡಿ) ಆವರಣದಲ್ಲಿ ಆಯೋಜಿಸಿರುವ ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಕ್ಯೂ.ಆರ್ ಕೋಡ್ (QR Code) ಸ್ಕ್ಯಾನ್ ಮಾಡುವ ಮೂಲಕ ಸುಲಭವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ತಮ್ಮ ಹೆಸರು ನೋಂದಾಯಿಸಲು ಫೆಬ್ರವರಿ 21 ಕೊನೆಯ ದಿನ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಜಿಲ್ಲಾ ಕೌಶಲ್ಯ ಮಿಷನ್ ಹಾಗೂ…

Read More

ಫೆಬ್ರುವರಿ 22 ರಂದು ಧಾರವಾಡದಲ್ಲಿ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ ಹಾಗೂ ಬೀದಿ ನಾಯಿ ಮರಿಗಳ ದತ್ತು ಕಾರ್ಯಕ್ರಮ: ಜಿ.ಪಂ. ಸಿಇಓ ಭುವನೇಶ ಪಾಟೀಲ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಫೆಬ್ರವರಿ 22 ರಂದು ಕರ್ನಾಟಕ ಕಾಲೇಜು (ಕೆ.ಸಿ.ಡಿ) ಆವರಣದಲ್ಲಿ ಜಿಲ್ಲಾ ಮಟ್ಟದ ಶ್ವಾನಗಳ ಪ್ರದರ್ಶನ, ಪೆಟ್ ಫ್ಯಾಶನ್ ಶೋ ಹಾಗೂ ಬೀದಿ ಶ್ವಾನ ಮರಿಗಳನ್ನು ದತ್ತು ಪಡೆಯುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ಬೆಳಿಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ…

Read More

ಜನಮನ ಸೂರೆಗೊಂಡ ‘ಶಿವಾಮೃತ’: ಕುಂದಗೋಳದಲ್ಲಿ ನಿರಾಮಯ ಫೌಂಡೇಶನ್ ವತಿಯಿಂದ ಅದ್ಧೂರಿ ಶಿವರಾತ್ರಿ ಉತ್ಸವ

ಕುಂದಗೋಳ: ಪಟ್ಟಣದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಿರಾಮಯ ಫೌಂಡೇಶನ್ ಹಮ್ಮಿಕೊಂಡಿದ್ದ ಸಂಗೀತ, ನೃತ್ಯ ಹಾಗೂ ಜಾನಪದ ಒಳಗೊಂಡ ‘ಶಿವಾಮೃತ’ ಕಾರ್ಯಕ್ರಮವು ಜನಮನ ಸೂರೆಗೊಂಡಿತು. ಭಾನುವಾರ ಸಂಜೆ 7 ಗಂಟೆಗೆ ಆರಂಭವಾದ ಈ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಉತ್ಸವವು ಸೋಮವಾರ ಬೆಳಗಿನ ಜಾವ 7 ಗಂಟೆಯವರೆಗೆ ನಿರಂತರವಾಗಿ ಜರುಗುವ ಮೂಲಕ ಭಕ್ತರನ್ನು ಭಕ್ತಿಭಾವದಲ್ಲಿ ತೇಲಿಸಿತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕಲ್ಯಾಣಪುರದ ಶ್ರೀ ಅಭಿನವ ಬಸವಣ್ಣಜ್ಜನವರು ಮಾತನಾಡಿ, ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ನಿರಾಮಯ ಫೌಂಡೇಶನ್ ಕಾರ್ಯ…

Read More

ಧಾರವಾಡ ಹೈಕೋರ್ಟ್ ಬೆಂಚ್‌ಗೆ ಬಾಂಬ್ ಬೆದರಿಕೆ – ಸ್ಥಳದಲ್ಲಿ ಹೈ ಅಲರ್ಟ್!

ಧಾರವಾಡ: ಇಲ್ಲಿನ ಹೈಕೋರ್ಟ್ ಪೀಠಕ್ಕೆ ಇಂದು ಮಧ್ಯಾಹ್ನ 1:30ಕ್ಕೆ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತರಿಂದ ಇ-ಮೇಲ್ ಬಂದಿದ್ದು, ಇಡೀ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ​ತಕ್ಷಣದ ಪೊಲೀಸ್ ಕಾರ್ಯಾಚರಣೆ: ​ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ತಕ್ಷಣವೇ ಹೈಕೋರ್ಟ್ ಆವರಣಕ್ಕೆ ಧಾವಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್‌ನ ಎಲ್ಲಾ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿಗಳನ್ನು ಸದ್ಯಕ್ಕೆ ಕಟ್ಟಡದಿಂದ ಹೊರಗೆ ಕಳುಹಿಸಲಾಗಿದೆ. ​ಶ್ವೇತದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ​ಸ್ಥಳಕ್ಕೆ ಆಗಮಿಸಿರುವ ಶ್ವಾನ…

Read More

ನವಲಗುಂದ: ಬಂಜಾರ ಸಮುದಾಯದಿಂದ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಅದ್ದೂರಿ ಆಚರಣೆ

ನವಲಗುಂದ: ಪಟ್ಟಣದ ಬಸವೇಶ್ವರ ನಗರದಲ್ಲಿ ಬಂಜಾರ ಸಮಾಜದ ವತಿಯಿಂದ ಸಂತ ಸೇವಾಲಾಲ್ ಮಹಾರಾಜ ಅವರ ಜಯಂತಿಯನ್ನು ಅತ್ಯಂತ ಭಕ್ತಿಭಾವ ಹಾಗೂ ಸಡಗರದಿಂದ ಆಚರಿಸಲಾಯಿತು. ಸಮಾಜದ ಸುಧಾರಕ, ಅಹಿಂಸಾ ಮಾರ್ಗದರ್ಶಕ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಸ್ಮರಿಸಲಾಯಿತು. ​ಈ ಸಮಯದಲ್ಲಿ ಉಪಸ್ಥಿತರಿದ್ದ ಧಾರವಾಡ ಲೋಕಸಭಾ ಅಭ್ಯರ್ಥಿ ಹಾಗೂ ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ಅವರು ಮಾತನಾಡಿ, ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ಶಿಸ್ತು ಮತ್ತು…

Read More