ಅಣ್ಣಿಗೇರಿಯಲ್ಲಿ ತಕ್ಷಣವೇ ಕಡಲೆ ಖರೀದಿ ಕೇಂದ್ರ ಆರಂಭಿಸಿ: ಭಾರತೀಯ ಕಿಸಾನ್ ಸಂಘದ ಆಗ್ರಹ

ಅಣ್ಣಿಗೇರಿ: “ರೈತರು ಬೆಳೆದ ಬೆಳೆಗೆ ಸರ್ಕಾರ ಸೂಕ್ತ ಮಾನ್ಯತೆ ನೀಡಬೇಕು ಹಾಗೂ ತಕ್ಷಣವೇ ನಗರದಲ್ಲಿ ಕಡಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಿ ಪ್ರತಿ ಎಕರೆಗೆ ಕನಿಷ್ಠ 8 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಬೇಕು,” ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಉಪಾಧ್ಯಕ್ಷ ಪಂಚಾಕ್ಷರಿ ಬೆಳೆಬಾಳ ಒತ್ತಾಯಿಸಿದರು. ​ಭಾರತೀಯ ಕಿಸಾನ್ ಸಂಘದ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿ ಅವರು ಮಾತನಾಡಿದರು. ಬೆಳೆ ಕಟಾವಿಗೆ ಬರುವ ಮೊದಲೇ ಸರ್ಕಾರ ಕನಿಷ್ಠ ಬೆಂಬಲ…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಬಾಕಿ ಇರುವ ಮಾಹಿತಿ ಅಪ್‌ಡೇಟ್ ಮಾಡಲು ಜ. 31 ಕೊನೆಯ ದಿನ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ಪಡೆಯಲು ತಾಂತ್ರಿಕ ತೊಂದರೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಮಾಹಿತಿ ಅಪ್‌ಡೇಟ್ ಮಾಡಲು ಜನವರಿ 31 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ​2020-21 ರಿಂದ 2025-26ನೇ ಸಾಲಿನವರೆಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಮೂಲಕ ಅರ್ಜಿ ಸಲ್ಲಿಸಿರುವ ಅನೇಕ ವಿದ್ಯಾರ್ಥಿಗಳಿಗೆ ಇನ್ನು ಸಹ ವಿದ್ಯಾರ್ಥಿವೇತನ ಪಾವತಿಯಾಗಿಲ್ಲ. ಇದಕ್ಕೆ ಪ್ರಮುಖವಾಗಿ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡದಿರುವುದು, ಶೈಕ್ಷಣಿಕ ದತ್ತಾಂಶ ಹಾಗೂ ತಂತ್ರಾಂಶದಲ್ಲಿರುವ…

Read More

ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಆದ್ಯತೆ: ಶೇಖರಗೌಡ ರಾಮತ್ನಾಳ

ಧಾರವಾಡ: ಇಂದಿನ ಮಕ್ಕಳೇ ನಾಳೆಯ ಪ್ರಜೆಗಳಾಗಿದ್ದು, ಪ್ರತಿಯೊಂದು ಮಗುವು ತನ್ನ ಹಕ್ಕುಗಳು ಮತ್ತು ಸಂರಕ್ಷಣಾ ಕಾಯ್ದೆಗಳ ಬಗ್ಗೆ ಅರಿವು ಹೊಂದಿರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು. ನಗರದ ಪ್ರೆಸೆಂಟೇಶನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ‘ಮಕ್ಕಳ ಹಕ್ಕುಗಳ ರಕ್ಷಣೆ, ಸುರಕ್ಷತೆ ಮತ್ತು ಪೋಕ್ಸೋ ಕಾಯ್ದೆಯ ಅನುಷ್ಠಾನ’ ಕುರಿತ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲನ್ಯಾಯ ಕಾಯ್ದೆಯನ್ವಯ 18 ವರ್ಷದೊಳಗಿನ ಪ್ರತಿಯೊಬ್ಬರೂ ಮಕ್ಕಳಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಮಗು…

Read More

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪುನರ್ವಸತಿ ಕಾರ್ಯಕರ್ತರು ಶ್ರಮಿಸಲಿ: ಶೇಖರಗೌಡ ರಾಮತ್ನಾಳ

ಧಾರವಾಡ: ಸಮಾಜದ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪುನರ್ವಸತಿ ಕಾರ್ಯಕರ್ತರು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹೆಚ್ಚಿನ ಗಮನ ಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ತಿಳಿಸಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ‘ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆ’ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ…

Read More

ಪತ್ರಿಕಾರಂಗವು ಸರ್ಕಾರದ ತಪ್ಪುಗಳನ್ನು ತಿದ್ದುವ ಶಕ್ತಿ ಹೊಂದಿದೆ: ಶಾಸಕ ಎಂ.ಆರ್. ಪಾಟೀಲ್

​ಕುಂದಗೋಳ: ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾರಂಗಕ್ಕೆ ಸರ್ಕಾರದ ಕಿವಿ ಹಿಂಡಿ ತಪ್ಪುಗಳನ್ನು ತಿದ್ದುವ ಶಕ್ತಿಯಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಹೇಳಿದರು. ​ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಘೋರ್ಪಡೆ ಅವರನ್ನು ಶಾಸಕರ ನಿವಾಸದಲ್ಲಿ ಶಾಸಕರು ಹಾಗೂ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ​ಪತ್ರಕರ್ತರು ಕೇವಲ ಸುದ್ದಿಯನ್ನು ನೀಡುವವರಾಗದೆ, ವಸ್ತುನಿಷ್ಠ ವರದಿಗಳ ಮೂಲಕ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನಸಾಮಾನ್ಯರ ಧ್ವನಿಯಾಗಿ ಕೆಲಸ…

Read More

ಧಾರವಾಡ: ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆ ವಿತರಿಸಿದ ಸಚಿವ ಸಂತೋಷ್ ಲಾಡ್

ಧಾರವಾಡ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ನೀಡಲಾಗುವ ವಿವಿಧ ಸಾಧನ ಸಲಕರಣೆಗಳನ್ನು 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅವರು ಸೋಮವಾರ ಬೆಳಿಗ್ಗೆ ವಿತರಿಸಿದರು. ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಅಗತ್ಯ ಸಲಕರಣೆಗಳನ್ನು ನೀಡಿ ಸಬಲೀಕರಣಕ್ಕೆ ಒತ್ತು ನೀಡಲಾಯಿತು. ​ಧಾರವಾಡ ಕಲಕೇರಿಯ ಅಕ್ಕಮಹಾದೇವಿ ಅಂಗಡಿ ಅವರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್, ಕರಡಿಗುಡ್ಡದ ಉಜೇಫ ಶೌಕತಲಿ ನಾಯ್ಕರ ಅವರಿಗೆ…

Read More

ಸಂವಿಧಾನವು ದೇಶದ ಮೌಲ್ಯಗಳನ್ನು ಸಾಕಾರಗೊಳಿಸುವ ಪವಿತ್ರ ಗ್ರಂಥ: ಸವಿತಾ ಚಿಕ್ಕಣ್ಣವರ

ನವಲಗುಂದ: ಭಾರತದ ಸಂವಿಧಾನವು ಕೇವಲ ಕಾನೂನುಗಳ ಸಂಕಲನವಲ್ಲ, ಅದು ನಮ್ಮ ದೇಶದ ಮೌಲ್ಯಗಳು, ತತ್ವಗಳು ಮತ್ತು ಆಡಳಿತಾತ್ಮಕ ಚೌಕಟ್ಟನ್ನು ಸಾಕಾರಗೊಳಿಸುವ ಪವಿತ್ರ ಗ್ರಂಥವಾಗಿದೆ ಎಂದು ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಸವಿತಾ ಚಿಕ್ಕಣ್ಣವರ ಅಭಿಪ್ರಾಯಪಟ್ಟರು. ​ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಜಗತ್ತಿನ ಅತಿ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸಂವಿಧಾನವು ದೇಶದ ಬಲಿಷ್ಠತೆಗೆ ಅಡಿಪಾಯವಾಗಿದೆ. ನೂರಾರು ಹೋರಾಟಗಾರರು ಬಲಿದಾನ ನೀಡಿ ತಂದುಕೊಟ್ಟ…

Read More

ಅಣ್ಣಿಗೇರಿಯಲ್ಲಿ ತಾಲೂಕು ಆಡಳಿತದಿಂದ ಸಡಗರದ ಗಣರಾಜ್ಯೋತ್ಸವ ಆಚರಣೆ

ಅಣ್ಣಿಗೇರಿ: ಪಟ್ಟಣದ ಶಾಸಕರ ಮಾದರಿ ಶಾಲೆಯ ಮೈದಾನದಲ್ಲಿ ಸೋಮವಾರ ಅಣ್ಣಿಗೇರಿ ತಾಲೂಕು ಆಡಳಿತದ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ​ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಣ್ಣಿಗೇರಿ ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ಅವರು, ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಏಕತೆ ಮತ್ತು ಪ್ರಜಾಪ್ರಭುತ್ವದ ಶಕ್ತಿಯನ್ನು ಸ್ಮರಿಸುವ ಮಹತ್ವದ ದಿನವಾಗಿದೆ. ದೇಶದ ಉನ್ನತ ಮೌಲ್ಯಗಳನ್ನು ಕಾಪಾಡುವ ಸಂಕಲ್ಪದೊಂದಿಗೆ ನಾವೆಲ್ಲರೂ ಮುನ್ನಡೆಯೋಣ ಎಂದು ಕರೆ ನೀಡಿದರು. ​ನಂತರ ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಮಾತನಾಡಿ, ಅಣ್ಣಿಗೇರಿ ನಗರವನ್ನು ಸ್ವಚ್ಛ ಮತ್ತು…

Read More

​ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಪ್ರತಿಯೊಬ್ಬರಿಗೂ ಸ್ಮರಣೀಯ: ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ

ನವಲಗುಂದ: 1950ರಲ್ಲಿ ಸಂವಿಧಾನ ಜಾರಿಗೆ ಬಂದ ಈ ದಿನದಂದು ಭಾರತವು ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಹೊರಹೊಮ್ಮಿತು. ಈ ಮಹತ್ವದ ದಿನದ ಹಿಂದೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವಿದ್ದು, ಅದನ್ನು ಪ್ರತಿಯೊಬ್ಬ ಭಾರತೀಯನೂ ಸದಾ ಸ್ಮರಿಸಬೇಕು ಎಂದು ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ ತಿಳಿಸಿದರು. ​ತಾಲೂಕಿನ ಗೊಬ್ಬಗುಂಪಿ ಗ್ರಾಮದ ರೇವಣಸಿದ್ದೇಶ್ವರ ಯುವಕ ಮಂಡಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಏಕತೆ ಮತ್ತು…

Read More

ಸಂವಿಧಾನದ ಆದರ್ಶಗಳು ನಮ್ಮನ್ನು ಉಜ್ವಲ ಭವಿಷ್ಯಕ್ಕೆ ಕೊಂಡೊಯ್ಯಲಿ: ಮುತ್ತಪ್ಪ ಬಿಸನಾಳ

ನವಲಗುಂದ: ಭಾರತವು ವಸಾಹತುಶಾಹಿ ಆಡಳಿತದಿಂದ ಮುಕ್ತವಾಗಿ, ಔಪಚಾರಿಕವಾಗಿ ಗಣರಾಜ್ಯವಾಗಿ ಘೋಷಿತವಾದ ಈ ದಿನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ. ಸಂವಿಧಾನದ ಉನ್ನತ ಆದರ್ಶಗಳು ನಮ್ಮನ್ನು ಉಜ್ವಲ ಭವಿಷ್ಯದತ್ತ ಕೊಂಡೊಯ್ಯಲಿ ಎಂದು ಎಸ್‌ಡಿಎಂಸಿ ಅಧ್ಯಕ್ಷ ಮುತ್ತಪ್ಪ ಬಿಸನಾಳ ಆಶಯ ವ್ಯಕ್ತಪಡಿಸಿದರು. ​ಪಟ್ಟಣದ ಹಳ್ಳದ ಓಣಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3 ರಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾರತೀಯರೆಲ್ಲರೂ ಏಕತೆಯ ಭಾವನೆಯೊಂದಿಗೆ ದೇಶದ ಪ್ರಗತಿಯ ಹಾದಿಯಲ್ಲಿ ಹೆಜ್ಜೆ ಹಾಕೋಣ ಎಂದು ಕರೆ…

Read More