ಕುಂದಗೋಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಶೋಕ ಘೋರ್ಪಡೆ ಆಯ್ಕೆ
ಕುಂದಗೋಳ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಗೋಳ ತಾಲ್ಲೂಕು ಘಟಕದ ಪದಾಧಿಕಾರಿಗಳ ಚುನಾವಣೆ ಬುಧವಾರ ಪಟ್ಟಣದಲ್ಲಿ ಜರುಗಿದ್ದು, ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅಶೋಕ ಘೋರ್ಪಡೆ ಅವರು ಆಯ್ಕೆಯಾಗಿದ್ದಾರೆ. ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಶೋಕ ಘೋರ್ಪಡೆ ಹಾಗೂ ಖಾದರಸಾಬ ಡಗಲಿ ಅವರು ನಾಮಪತ್ರ ಸಲ್ಲಿಸಿದ್ದರು. ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಶೋಕ ಘೋರ್ಪಡೆ 04 ಮತಗಳನ್ನು ಪಡೆದು ಜಯಶಾಲಿಯಾದರು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ದೀಪಾವಳಿ ಹಾಗೂ ಖಜಾಂಚಿಯಾಗಿ ಶೇಖಪ್ಪ ಕುಂದಗೋಳ ಅವರು ಅವಿರೋಧವಾಗಿ…

