ಧಾರವಾಡ: ಅಪಾಯಕಾರಿ ಸ್ಥಿತಿಯಲ್ಲಿರುವ 18 ಮರಗಳ ತೆರವಿಗೆ ಫೆ. 10 ರಂದು ಬಹಿರಂಗ ಹರಾಜು

ಧಾರವಾಡ: ನಗರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿಗಳ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರುವುಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಒಟ್ಟು 18 ಮರಗಳು ಹಾಗೂ 7 ಮರದ ಟೊಂಗೆಗಳನ್ನು ತೆರವುಗೊಳಿಸುವ ಸಂಬಂಧ ಫೆಬ್ರವರಿ 10 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ​ಮರ ಸಂರಕ್ಷಣಾ ಕಾಯ್ದೆ 1976 ರ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದ್ದು,…

Read More

ಧಾರವಾಡ ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ 13,340 ಕ್ವಿಂಟಲ್ ಹೆಸರು ಖರೀದಿ: ರೈತರಿಗೆ 9.51 ಕೋಟಿ ರೂ. ಹಣ ಪಾವತಿ

ಧಾರವಾಡ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ 13,340.50 ಕ್ವಿಂಟಲ್ ಹೆಸರು ಕಾಳು ಉತ್ಪನ್ನವನ್ನು ಖರೀದಿಸಲಾಗಿದ್ದು, ಈವರೆಗೆ 1,512 ರೈತರಿಗೆ ಒಟ್ಟು 9,51,85,408 ರೂಪಾಯಿಗಳನ್ನು ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಪಾವತಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಉಪನಿರ್ದೇಶಕ ವಿ.ಎಮ್. ಲಮಾಣಿ ತಿಳಿಸಿದ್ದಾರೆ. ಬಾಕಿ ಇರುವ ಸುಮಾರು 210 ರೈತರಿಗೆ ಹಣ ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬರುವ ಶನಿವಾರದೊಳಗೆ ಬಾಕಿ ಮೊತ್ತ ಪಾವತಿಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಪ್ಟೆಂಬರ್…

Read More

ಗೃಹಲಕ್ಷ್ಮಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಶ್ಯಾನಪ್ಪಗೌಡ ಪಾಟೀಲ ಸೂಚನೆ

ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭವು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತಾಗಬೇಕು ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಮತ್ತು ಸ್ಥಳಾಂತರಗೊಂಡ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ನಿರಂತರವಾಗಿ ಪರಿಷ್ಕರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಗೃಹಲಕ್ಷ್ಮಿ…

Read More

ಬಾಲ್ಯ ವಿವಾಹ ತಡೆಗೆ ಕಲ್ಯಾಣ ಮಂಟಪಗಳ ಮಾಲೀಕರು ಸಹಕರಿಸಿ: ಧಾರವಾಡದಲ್ಲಿ ತರಬೇತಿ ಕಾರ್ಯಾಗಾರ

ಧಾರವಾಡ: ಬಾಲ್ಯ ವಿವಾಹ ಮುಕ್ತ ಭಾರತವನ್ನು ರೂಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ 100 ದಿನಗಳ ಜನಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲೆಯ ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಸಂಘದ ಮುಖ್ಯಸ್ಥರಿಗಾಗಿ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ.ವಾಯ್…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ನವಲಗುಂದದಲ್ಲಿ ಅಕ್ಷರ ದಾಸೋಹ ನೌಕರರಿಂದ ಮನವಿ ಸಲ್ಲಿಕೆ

ನವಲಗುಂದ: ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಾಧಾ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ​ಬಿಸಿಯೂಟ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ಮನವಿ ಸಲ್ಲಿಸಲಾಗಿದ್ದು, ಹಲವು ವರ್ಷಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಆಗ್ರಹಿಸಿದರು. ಒಂದು ವೇಳೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ, ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಗೆ ಓಗೊಟ್ಟು ಫೆಬ್ರವರಿ…

Read More

ನವಲಗುಂದ, ಅಣ್ಣಿಗೇರಿ 22 ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ: ಜಿಲ್ಲಾಧಿಕಾರಿಗಳ ಅಧಿಸೂಚನೆ

ನವಲಗುಂದ: ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕುಗಳ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಸುಗಮ ನಿರ್ವಹಣೆಗಾಗಿ ಒಟ್ಟು 22 ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ಅಧಿಸೂಚನೆ ಹೊರಡಿಸಿದ್ದಾರೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಿ.ಆರ್. ಬಡೇಖಾನವರ ತಿಳಿಸಿದ್ದಾರೆ. ​ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರನ್ವಯ ಈ ನೇಮಕಾತಿ ಮಾಡಲಾಗಿದ್ದು, ಚುನಾಯಿತ ಮಂಡಳಿಯ ಅವಧಿ ಮುಗಿದ ದಿನದಿಂದ ಹೊಸದಾಗಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗುವವರೆಗೆ ಈ ಅಧಿಕಾರಿಗಳು ಗ್ರಾಮ…

Read More

ಸನ್ಮಾರ್ಗದಲ್ಲಿ ಜೀವನ ಸಾಗಿಸಿ, ಧರ್ಮದ ಚ್ಯುತಿ ಬರದಂತೆ ಬದುಕಿ: ಮುನಿಶ್ರೀ ಪುಣ್ಯಸಾಗರ ಮಹಾರಾಜ ಕರೆ

ಕುಂದಗೋಳ: “ಮಾನವ ಜನ್ಮ ಅಮೂಲ್ಯವಾದುದು. ಶ್ರಾವಕರು ಮಾದಕ ವಸ್ತುಗಳು ಹಾಗೂ ಕಂದಮೂಲಗಳಿಂದ ದೂರವಿದ್ದು, ಜೈನ ಧರ್ಮದ ತತ್ವಗಳಿಗೆ ಚ್ಯುತಿ ಬರದಂತೆ ಸನ್ಮಾರ್ಗದಲ್ಲಿ ಜೀವನ ಸಾಗಿಸಬೇಕು” ಎಂದು 108 ಶ್ರೀ ಪುಣ್ಯಸಾಗರ ಮುನಿ ಮಹಾರಾಜರು ಕರೆ ನೀಡಿದರು. ​ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಮಂಗಳವಾರ ಜರುಗಿದ 1008 ಶ್ರೀ ಶಾಂತಿನಾಥ ತೀರ್ಥಂಕರ ನೂತನ ಬಸದಿಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಮೂರನೇ ದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಮೌಂಜಿ ಕಾರ್ಯಕ್ರಮ’ದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಕ್ಷಣಿಕ ಸುಖದ ಆಸೆಗಾಗಿ ಅನಾರೋಗ್ಯಕರ…

Read More

ಪಡೆಸೂರು ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ದೇವಪ್ಪ ಡಂಬಳ ಆಯ್ಕೆ

ನವಲಗುಂದ: ತಾಲೂಕಿನ ಪಡೆಸೂರು ಗ್ರಾಮದ ಪ್ರಾಥಮಿಕ ಕೃಷಿ ಸಹಕಾರಿ ಪತ್ತಿನ ನಿಯಮಿತ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ದೇವಪ್ಪ ಮಲ್ಲಪ್ಪ ಡಂಬಳ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ​ಸಂಘದ ಕಚೇರಿಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ದೊಡ್ಡಲಕ್ಷ್ಮಪ್ಪ ತಳವಾರ ಅವರು ಆಯ್ಕೆಯಾದರು. ಉಳಿದಂತೆ ಸಂಘದ ನಿರ್ದೇಶಕರುಗಳಾಗಿ ರಮೇಶ ನವಲಗುಂದ, ಸಕ್ರಪ್ಪ ತೋಟದ, ಚನ್ನಪ್ಪ ಅಣ್ಣಗೇರಿ, ಪರಮೇಶ್ವರ ಹಳ್ಳಿಕೇರಿ, ಸಂಗಪ್ಪ ಗಾಳಿ, ಮಂಜುನಾಥ ಗಾಳಿ, ಸಿದ್ರಾಮಪ್ಪ ಕಾಳಿ, ಬೀರಪ್ಪ ಕೊಂಗವಾಡ ಹಾಗೂ ಮಹಿಳಾ ಮೀಸಲಾತಿ ಅಡಿಯಲ್ಲಿ ನಿಂಗವ್ವ…

Read More

ಅಮ್ಮಿನಭಾವಿ, ಹೆಬ್ಬಳ್ಳಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭುವನೇಶ ಪಾಟೀಲ್ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

ಧಾರವಾಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಅವರು ಶನಿವಾರ ಧಾರವಾಡ ತಾಲೂಕಿನ ಅಮ್ಮಿನಭಾವಿ ಹಾಗೂ ಹೆಬ್ಬಳ್ಳಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ​ಅಮ್ಮಿನಭಾವಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ, ಜಲಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆ ಹಾಗೂ ಡಿಬಿಓಟಿ (DBOT) ಕುಡಿಯುವ ನೀರಿನ ಘಟಕದ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು. ನಂತರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ…

Read More

ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆ: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನಿಂದ ಅರ್ಜಿ ಆಹ್ವಾನ

ಧಾರವಾಡ: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಸಮಸ್ತ ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕಥೆ ಮತ್ತು ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಆಸಕ್ತಿಯುಳ್ಳ ಪತ್ರಕರ್ತರು ತಮ್ಮ ಸ್ವರಚಿತ ಕವನ ಹಾಗೂ ಕಥೆಗಳನ್ನು ಫೆಬ್ರವರಿ 25, 2026 ರೊಳಗಾಗಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅತ್ಯುತ್ತಮ ಕೃತಿಗಳನ್ನು ಪ್ರತ್ಯೇಕ ಪುಸ್ತಕಗಳ ರೂಪದಲ್ಲಿ ಪ್ರಕಟಿಸಲು ಸಂಘಟನೆ ನಿರ್ಧರಿಸಿದೆ. ​ಈ ಸಾಹಿತ್ಯಿಕ ಸ್ಪರ್ಧೆಯಲ್ಲಿ ವಿಜೇತರಾಗುವ ಕಥೆಗಾರರಿಗೆ ಪ್ರಥಮ ಬಹುಮಾನವಾಗಿ 10,000 ರೂ., ದ್ವಿತೀಯ ಬಹುಮಾನ 7,000…

Read More