ಹಿರೇ​ಮಠದ ಆಸ್ತಿ ವಂಶಪಾರಂಪರ್ಯ; ಸಾರ್ವಜನಿಕರ ದೂರಿಗೆ ಕಿವಿಗೊಡಬೇಡಿ: ಶ್ರೀ ಶಿತಿಕಂಠೇಶ್ವರ ಸ್ವಾಮೀಜಿ ಸ್ಪಷ್ಟನೆ

​ಕುಂದಗೋಳ: ಪಟ್ಟಣದ ಐತಿಹಾಸಿಕ ಪಂಚಗ್ರಹ ಹಿರೇಮಠವು 1517ರಲ್ಲಿ ಸ್ಥಾಪಿತವಾದ ಪುತ್ರವರ್ಗ ಮಠವಾಗಿದ್ದು, ಇದರ ಚರಾಸ್ತಿ ಮತ್ತು ಸ್ಥಿರಾಸ್ತಿಗಳ ಮೇಲೆ ಮಠದ ಪರಂಪರೆಯ ಜಂಗಮ ವಂಶಸ್ಥರಿಗೆ ಮಾತ್ರ ಸಂಪೂರ್ಣ ಹಕ್ಕಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ಸಲ್ಲಿಸಿರುವ ಮನವಿಯನ್ನು ಜಿಲ್ಲಾಧಿಕಾರಿಗಳು ಪುರಸ್ಕರಿಸಬಾರದು ಎಂದು ಪಂಚಗ್ರಹ ಹಿರೇಮಠದ ಶ್ರೀ ಶಿತಿಕಂಠೇಶ್ವರ ಸ್ವಾಮೀಜಿ ಆಗ್ರಹಿಸಿದರು. ​ಶುಕ್ರವಾರ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಮೇತ ಮಾತನಾಡಿದ ಅವರು, ಮಠದ ಆಸ್ತಿಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದರು. ಏಪ್ರಿಲ್ 22 ರಂದು…

Read More

ನವಲಗುಂದ:ದಾಖಲೆ ನೀಡುವ ‘ದಣಿ’ಗೇ ಇಲ್ಲ ದಾಖಲೆ: ಪುರಸಭೆ ಅತಿಕ್ರಮಣ ಬಯಲು, ಲೋಕಾಯುಕ್ತ ಮೆಟ್ಟಿಲೇರಿದ ಪ್ರಕರಣ

ನವಲಗುಂದ: ಸಾರ್ವಜನಿಕರ ಮನೆಗಳಿಗೆ ಸಣ್ಣ ದಾಖಲೆ ತಪ್ಪಾದರೂ ಅದು ಅಕ್ರಮ ಎಂದು ದಂಡ ವಿಧಿಸಿ ಜಪ್ತಿ ಮಾಡುವ ನವಲಗುಂದ ಪುರಸಭೆಯು, ತಾನು ಕಾರ್ಯಾಲಯ ನಡೆಸುತ್ತಿರುವ ಜಾಗಕ್ಕೆ ಯಾವುದೇ ಅಧಿಕೃತ ದಾಖಲೆ ಹೊಂದಿಲ್ಲ ಎಂಬ ಆಘಾತಕಾರಿ ಅಂಶ ಇದೀಗ ಬಯಲಾಗಿದೆ. ಈ ಸಂಬಂಧ ಪುರಸಭೆಯ ಆಡಳಿತಾತ್ಮಕ ವೈಫಲ್ಯ ಮತ್ತು ಅಧಿಕಾರ ದುರ್ಬಳಕೆಯನ್ನು ಖಂಡಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಮಾಬುಸಾಬ ಯರಗುಪ್ಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ​ಸಾರ್ವಜನಿಕರಿಗೆ ಆಸ್ತಿಗಳ ಇ-ಸ್ವತ್ತು ಉತಾರ ನೀಡುವ ಕೇಂದ್ರವೇ…

Read More

ಹಿರೇನರ್ತಿ ಗ್ರಾಮದಲ್ಲಿ ಜಾಗದ ಕಿರಿಕ್: ಕರಿಯಪ್ಪನ ಮೇಲೆ ಭೀಕರ ಹಲ್ಲೆ

ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ ಹಾಗೂ ಶಿವನಗೌಡ…

Read More

ಗುಡಿಸಾಗರ್ ಶಾಲೆಯಲ್ಲಿ ನಾಲ್ಕು ದಿನಗಳ ಬೇಸಿಗೆ ಶಿಬಿರದ ಯಶಸ್ವಿ ಸಮಾರೋಪ

ನವಲಗುಂದ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಸಾಗರ್ ಹಾಗೂ ಧಾರವಾಡದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಬೇಸಿಗೆ ಶಿಬಿರವು ಶುಕ್ರವಾರದಂದು ಸಂಭ್ರಮದ ಸಮಾಪ್ತಿ ಕಂಡಿತು. ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಈರಣ್ಣ ಗುಳೆದ್ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯು ಶಾಲೆಯಲ್ಲಿ ನಿರಂತರವಾಗಿ ಇಂತಹ ಸೃಜನಶೀಲ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮಕ್ಕಳು ಶಿಬಿರದಲ್ಲಿ ಪಡೆದ ಜ್ಞಾನವನ್ನು ಕೇವಲ ನಾಲ್ಕು ದಿನಕ್ಕೆ ಸೀಮಿತಗೊಳಿಸದೆ, ಅದನ್ನು…

Read More

ಆತ್ಮನಿರ್ಭರ ಯೋಜನೆಯಡಿ 540 ಘಟಕಗಳಿಗೆ ಸಾಲ ಮಂಜೂರು: ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ

ಧಾರವಾಡ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳ ಯೋಜನೆ (PMFME) ಜಿಲ್ಲೆಯ ರೈತರು ಹಾಗೂ ಉದ್ಯಮ ಆಕಾಂಕ್ಷಿಗಳ ಸಶಕ್ತೀಕರಣಕ್ಕೆ ವರದಾನವಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 540 ಘಟಕಗಳಿಗೆ ಸಾಲ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು. ​ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮನಿರ್ಭರ ಭಾರತ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2020-21 ರಿಂದ ಜಾರಿಯಲ್ಲಿರುವ ಈ ಯೋಜನೆಯು ಸ್ವಯಂ ಉದ್ಯೋಗ ಮಾಡುವವರಿಗೆ ಅತ್ಯಂತ ಉಪಯುಕ್ತವಾಗಿದ್ದು,…

Read More

ಧಾರವಾಡ: ಕೃಷಿ ಸಮಸ್ಯೆಗಳ ಕುರಿತು ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಸಭೆ – ರಸಗೊಬ್ಬರಕ್ಕೆ ಎಫ್‌ಐಡಿ ಕಡ್ಡಾಯ

ಧಾರವಾಡ: ಜಿಲ್ಲೆಯ ರೈತರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ​ರೈತರ ಅಹವಾಲುಗಳು: ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ರೈತ ಸಂಘಟನೆಗಳ ಮುಖಂಡರು ಕಡಲೆ, ಗೋವಿನಜೋಳ, ಸೂರ್ಯಕಾಂತಿ ಹಾಗೂ ಕುಸಬೆ ಖರೀದಿ ಕೇಂದ್ರಗಳ ಆರಂಭ, ಸಕ್ಕರೆ ಕಾರ್ಖಾನೆಗಳ ಕಾರ್ಯಚಟುವಟಿಕೆ, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಗುಣಮಟ್ಟದ ಬೀಜ-ರಸಗೊಬ್ಬರ…

Read More

​ಕೋಲ್ಕತ್ತಾದಲ್ಲಿ ಶಿರೂರ ಬಿಎಸ್‌ಎಫ್ ಯೋಧ ನಿಧನ: ನಾಳೆ ಸಂಜೆ ಶಿರೂರ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮನದ ನಿರೀಕ್ಷೆ

​ಕುಂದಗೋಳ: ತಾಲ್ಲೂಕಿನ ಶಿರೂರ ಗ್ರಾಮದ ಹೆಮ್ಮೆಯ ಪುತ್ರ, ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧ ಸಂತೋಷ ರಾಮಪ್ಪ ಹೊನ್ನಪ್ಪನವರ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕರ್ತವ್ಯದಲ್ಲಿದ್ದಾಗ ಬುಧವಾರ ರಾತ್ರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ​ಕಳೆದ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂತೋಷ ಅವರು, ದೇಶದ ವಿವಿಧ ಗಡಿ ಭಾಗಗಳಲ್ಲಿ ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದರು. ಸದ್ಯ ಕೋಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂಬ ಸುದ್ದಿ ತಿಳಿದು ಗ್ರಾಮಸ್ಥರು ಹಾಗೂ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ​ಕುಟುಂಬದ…

Read More

ಕುಂದಗೋಳ : ಪಟ್ಟಣ ಪಂಚಾಯತ ಸರ್ಕಾರಿ ಕಡತ ಖಾಸಗಿ ಕೈಗೆ ! ಕುರ್ಚಿ ಟೇಬಲ್ ಮೇಲೆ ದರ್ಬಾರ್

ಕುಂದಗೋಳ : ಸರ್ಕಾರಿ ಕಚೇರಿಯಲ್ಲಿ ಯಾರ್‍ಯಾರು ಬಂದು ಅಧಿಕಾರಿಗಳಂತೆ ಜಬರ್ದಸ್ತ್ ಟೇಬಲ್ ಮೇಲೆ ಕುಳಿತು ಕೆಲಸ ಮಾಡುತ್ತಲಿದ್ದರೂ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಮತ್ತು ಮುಖ್ಯಾಧಿಕಾರಿ ಗಪ್ ಚುಪ್ ಇದ್ದಾರೆ. ಎಸ್..! ವೀಕ್ಷಕರೇ ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೀಗೆ ಟೇಬಲ್ ಮೇಲೆ ಕುಳಿತು ಪೈಲ್ ಮೆಂಟೈನ್ ಮಾಡ್ತಾ ಇರೋ ಈ ಯುವತಿ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಹೋಗಬೇಕಾದವರು. ಇಂತಹ ವಿದ್ಯಾವಂತ ಯುವತಿಯನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹೊರಗುತ್ತಿಗೆ ನೇಮಕವೂ ಅಲ್ಲಾ, ಯಾವುದೇ ಆದೇಶವೂ ಇಲ್ಲದೆ ಸರ್ಕಾರಿ ಕಚೇರಿ…

Read More

ಗುಡಿಸಾಗರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಬೇಸಿಗೆ ಶಿಬಿರಕ್ಕೆ ಚಾಲನೆ

ನವಲಗುಂದ: ತಾಲ್ಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಧಾರವಾಡದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಲಾಯಿತು. ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಕ್ಕೀರೇಶ ಪಡೆಸೂರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿದ್ದು, ಇಂತಹ ಶಿಬಿರಗಳಲ್ಲಿ ಆಯೋಜಿಸುವ ಚಟುವಟಿಕೆಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ಎಸ್‌ವಿವೈಎಂ ಸಂಸ್ಥೆಯು ನಮ್ಮ ಶಾಲೆಗೆ…

Read More

ಧಾರವಾಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಮೆರವಣಿಗೆ: ಸಚಿವ ಸಂತೋಷ ಲಾಡ್ ಚಾಲನೆ

​ಧಾರವಾಡ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಚಾಲನೆ ನೀಡಿದರು. ಮೆರವಣಿಗೆಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರೊಂದಿಗೆ ಚಾಲನೆ ನೀಡಿದ ಸಚಿವರು, ಮಹಾನ್ ಮಾನವತಾವಾದಿಯ ಸ್ಮರಣೆ ಮಾಡಿದರು. ​ವಿವಿಧ ಜಾನಪದ ಕಲಾತಂಡಗಳೊಂದಿಗೆ…

Read More