ಧಾರವಾಡ ಜಿಲ್ಲೆಯಲ್ಲಿ ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ಪರಿಶೀಲನೆ: 47 ಮಂದಿಗೆ ಎಚ್ಚರಿಕೆ

ಧಾರವಾಡ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೌಡಿ ಸ್ಕ್ವಾಡ್ ವತಿಯಿಂದ ಬುಧವಾರ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ., ಸಿ.ಪಿ.ಐ., ಪಿ.ಐ., ಪಿ.ಎಸ್.ಐ. ಹಾಗೂ ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪರಿಶೀಲನೆ ವೇಳೆ ರೌಡಿ ಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರಗಳು ಸೇರಿದಂತೆ ಅನುಮಾನಾಸ್ಪದ ವಸ್ತುಗಳಿಗಾಗಿ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ…

Read More

ಧಾರವಾಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ; ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ

ಧಾರವಾಡ, ಜೂ. 8: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳವರೆಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹಾಗೂ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ಈ ಕುರಿತು…

Read More

ಧಾರವಾಡದಲ್ಲಿ ಲೋಕಾಯುಕ್ತ ಭಾರಿ ಬೇಟೆ: ಸಣ್ಣ ನೀರಾವರಿ ಇಲಾಖೆ ಇ.ಇ ಸೇರಿ ಮೂವರ ಕಚೇರಿಗಳ ಮೇಲೆ ದಾಳಿ, ದಾಖಲೆ ಜಪ್ತಿ

ಧಾರವಾಡ: ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ (ಇ.ಇ) ದೇವರಾಜ ಶಿಗ್ಗಾಂವಿ ಹಾಗೂ ಅವರ ಆಪ್ತರ ಕಚೇರಿಗಳ ಮೇಲೆ ಶನಿವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. 2018 ರಿಂದ 2023ರ ಅವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ವಿವಿಧ ಕಾಮಗಾರಿಗಳಲ್ಲಿ ವ್ಯಾಪಕ ಅವ್ಯವಹಾರ ಎಸಗಿರುವ ಹಾಗೂ ಸರ್ಕಾರಕ್ಕೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಉಂಟು ಮಾಡಿರುವ ಗಂಭೀರ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಅವರ…

Read More

ಮುಂಗಾರು ಮುನ್ನೆಚ್ಚರಿಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ತಡೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಮಳೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಹಾಗೂ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ…

Read More

ಮೆಕ್ಕೆಜೋಳ ಖರೀದಿ ವಂಚನೆಯಲ್ಲಿ ಕುಂದಗೋಳ ಪಿಎಸ್ಐ ( ಪೋಲಿಸ್ ಸಬ್ ಇನ್ಸಪೆಕ್ಟರ) ಶಾಮೀಲು ಆರೋಪ

ಕುಂದಗೋಳ : ದಾವಣಗೆರೆ ಮೂಲದ ವ್ಯಕ್ತಿಯೊಬ್ಬ ಸ್ಥಳೀಯ ರೈತರೊಬ್ಬರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಖರೀದಿಸಿ ವಂಚಿಸಿರುವ ಪ್ರಕರಣದಲ್ಲಿ ಕುಂದಗೋಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರೇ ಆರೋಪಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ರೈತಪರ ಹೋರಾಟಗಾರ ಮಹೇಶ ಬ. ಕಲಘಟಗಿ ಗಂಭೀರ ಆರೋಪ ಮಾಡಿದ್ದಾರೆ. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ದಾವಣಗೆರೆ ಮೂಲದ ಕೆ.ಎಸ್. ಪ್ರಶಾಂತ ಎಂಬ ವ್ಯಕ್ತಿಯು ಕಳೆದ ಜನವರಿ 4, 2026 ರಂದು ಸಂಶಿ ಗ್ರಾಮದ…

Read More

ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಮರುನೇಮಕ: ಹಿರೇಹರಕುಣಿ ಗ್ರಾಮಸ್ಥರಲ್ಲಿ ಮೂಡಿದ ಹರ್ಷ

ಕುಂದಗೋಳ: ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರ ಅಮಾನತು ಆದೇಶವನ್ನು ಖಂಡಿಸಿ ಗ್ರಾಮಸ್ಥರು, ಪಾಲಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಬುದುವಾರದಂದು ಶಾಲಾ ಆವರಣದಲ್ಲಿ ಮಹನೀಯರ ಭಾವಚಿತ್ರಗಳನ್ನು ಇರಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಮಹಾದೇವಿ ಮಾಡಲಗೇರಿ ಹಾಗೂ ತಹಶೀಲ್ದಾರ ರಾಜು ಮಾವರಕರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ…

Read More

ಮುಖ್ಯ ಶಿಕ್ಷಕಿ ಅಮಾನತು: ಕುಂದಗೋಳದ ತಾ ಹಿರೇಹರಕುಣಿ ಸ.ಹಿ.ಪ್ರಾ.ಶಾಲೆ ಮುಂಭಾಗ ತೀವ್ರ ಪ್ರತಿಭಟನೆ,

ಕುಂದಗೋಳ: ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರನ್ನು ಏಕಾಏಕಿ ಅಮಾನತು ಮಾಡಿರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ಬುಧವಾರ ವಿದ್ಯಾರ್ಥಿಗಳು, ಪಾಲಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ನೆಚ್ಚಿನ ಶಿಕ್ಷಕಿಯ ಅಮಾನತಿನಿಂದ ಆಕ್ರೋಶಗೊಂಡ ನೂರಾರು ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಯಿಸಿದ್ದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಶಾಂತಾ ಹೂಗಾರ ಅವರನ್ನು ಮರಳಿ ತಮ್ಮ ಶಾಲೆಗೆ ನಿಯೋಜನೆ ಮಾಡಬೇಕು ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ರಾತ್ರಿಯವರೆಗೂ…

Read More

ಕುಂದಗೋಳ ತಾಲೂಕು ಗ್ಯಾರಂಟಿ ಅಧ್ಯಕ್ಷ ಸ್ಥಾನಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ…!

ವರದಿ: ಪಬ್ಲಿಕ್ ಸಮಾಚಾರ ಕುಂದಗೋಳ: ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದ ಬಳಿಕ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಡಜನ್‌ಗಟ್ಟಲೆ ಮುಖಂಡರ ನಡುವಿನ ಒಳಜಗಳದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆಯೇ ಹಾವು-ಏಣಿ ಆಟಕ್ಕೆ ಸಾಕ್ಷಿಯಾಗಿದೆ. ಹೌದು, ಇಲ್ಲಿನ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ನಾಯಕರು ಪ್ರಭಾವ ಹೊಂದಿರುವ ಕಾರಣ ಇಂತಹ ಬೆಳವಣಿಗೆಗಳು ನಿರಂತರವಾಗಿ ನಡೆಯುತ್ತಿವೆ. ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆ ಕಳೆದ ಮೂರು ವರ್ಷಗಳಲ್ಲಿ ಮೂರು ಬಾರಿ ಬದಲಾಗಿರುವುದು ಇದಕ್ಕೆ ಸ್ಪಷ್ಟ…

Read More

ಗುಡಿಸಾಗರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ವಿದ್ಯಾರ್ಥಿಗಳಿಗೆ ಪುಸ್ತಕ, ಸಿಹಿ ವಿತರಣೆ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಜೂನ್ 1ರ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಸುದೀರ್ಘ ಬೇಸಿಗೆ ರಜೆಯ ಮಜಾವನ್ನು ಮುಗಿಸಿ ಮರಳಿ ಶಾಲೆಗೆ ಹೆಜ್ಜೆ ಇಟ್ಟ ಮುದ್ದು ಮಕ್ಕಳಿಗೆ ಶಾಲೆಯ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ​ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ್ದರಿಂದ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದು ವಿಶೇಷವಾಗಿತ್ತು. ಶಾಲೆಗೆ ಬಂದ…

Read More

ಕುಂದಗೋಳ ಪಟ್ಟಣ ಪಂಚಾಯಿತಿಗೆ ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ನೇಮಕ

ಕುಂದಗೋಳ: ರಾಜ್ಯ ಸರ್ಕಾರದ ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಕುಂದಗೋಳ ಪಟ್ಟಣ ಪಂಚಾಯಿತಿಯ ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ಅವರನ್ನು ನೇಮಕ ಮಾಡಲಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾಗಿದ್ದ ಸಿ.ವಿ. ಕುಲಕರ್ಣಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಮೇ 31ರಂದು ಈ ಹುದ್ದೆ ತೆರವಾಗಿತ್ತು. ತೆರವಾದ ಹುದ್ದೆಗೆ ರಾಜ್ಯ ಸರ್ಕಾರವು ಮೇ 27ರಂದು ಹೊರಡಿಸಿದ ಆದೇಶದ ಅನ್ವಯ ಗಂಗಾಧರ ಸಾನಕ್ಯಾನವರ ಅವರನ್ನು ಮುಖ್ಯಾಧಿಕಾರಿಯಾಗಿ ನೇಮಕಗೊಳಿಸಿದೆ. ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ಅವರು ಜೂನ್ 1ರಂದು ಅಧಿಕಾರ ಸ್ವೀಕರಿಸಿದ್ದಾರೆ….

Read More