ಕುಂದಗೋಳ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹ: ತಹಶೀಲ್ದಾರ್ಗೆ ರೈತ ಸಂಘದಿಂದ ಮನವಿ
ಕುಂದಗೋಳ: ತಾಲೂಕಿನ ರೈತರು ಎದುರಿಸುತ್ತಿರುವ ಮೆಕ್ಕೆಜೋಳ ಹಾಗೂ ಕಡಲೆ ಖರೀದಿ ಕೇಂದ್ರದ ಸಮಸ್ಯೆ ಸೇರಿದಂತೆ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ರಾಜು ಮಾವರಕರ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಗುರುಪಾದಪ್ಪ ಬಸಪ್ಪ ಬಂಕದ ಅವರ ನೇತೃತ್ವದಲ್ಲಿ ನಡೆದ ಈ ನಿಯೋಗವು, ರೈತರ ಜ್ವಲಂತ ಸಮಸ್ಯೆಗಳ ಕುರಿತು ತಹಶೀಲ್ದಾರ್ ಅವರ ಗಮನ ಸೆಳೆಯಿತು. ‘ನಮ್ಮ ಹೊಲ ನಮ್ಮ ದಾರಿ’…

