ಧಾರವಾಡ: ನಾಳೆ ಹಿರಿಯ ಸಂಗೀತಗಾರ ಡಾ. ಅಶೋಕ ಹುಗ್ಗನ್ನವರ ಅವರಿಗೆ ‘ನುಡಿ ನಮನ’
ಧಾರವಾಡ: ಇತ್ತೀಚೆಗೆ ನಿಧನರಾದ ಹಿರಿಯ ಸಂಗೀತಗಾರ ಹಾಗೂ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನ ಸದಸ್ಯ ಡಾ. ಅಶೋಕ ಹುಗ್ಗನ್ನವರ ಅವರಿಗೆ ಗೌರವ ಸಲ್ಲಿಸಲು ಜನೆವರಿ 06ರಂದು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ: ಗಣ್ಯರ…

