​ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಊಟ-ಉಪಹಾರ ಪೂರೈಕೆಗೆ ದರಪಟ್ಟಿ ಆಹ್ವಾನ

ಧಾರವಾಡ: ನಗರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ವತಿಯಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಆಯೋಜಿಸಲಾಗುವ ರೈತರ ಮತ್ತು ಅಧಿಕಾರಿಗಳ ತರಬೇತಿ ಕಾರ್ಯಕ್ರಮಗಳಿಗೆ ಊಟ ಹಾಗೂ ಉಪಹಾರವನ್ನು ಪೂರೈಸಲು ಅರ್ಹ ಕೆಟರಿಂಗ್ ಮಾಲೀಕರಿಂದ ಮುಚ್ಚಿದ ಲಕೋಟೆಯಲ್ಲಿ ದರಪಟ್ಟಿಗಳನ್ನು ಆಹ್ವಾನಿಸಲಾಗಿದೆ. ​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಹಾಯಕ ಕೃಷಿ ನಿರ್ದೇಶಕರು, ತರಬೇತಿ ಕೇಂದ್ರದಲ್ಲಿ ನಡೆಯುವ ವರ್ಷಪೂರ್ತಿ ಕಾರ್ಯಕ್ರಮಗಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡುವ ಆಸಕ್ತಿಯುಳ್ಳ ಕೆಟರಿಂಗ್ ಸಂಸ್ಥೆಗಳು ತಮ್ಮ ದರಪಟ್ಟಿಯನ್ನು ಸಲ್ಲಿಸಬಹುದಾಗಿದೆ….

Read More

​ಕುಂದಗೋಳ ತಹಸೀಲ್ದಾರ್ ಕಚೇರಿ ನವೀಕರಣದಲ್ಲಿ ಭ್ರಷ್ಟಾಚಾರದ ಆರೋಪ: ಲೋಕಾಯುಕ್ತ ಮೆಟ್ಟಿಲೇರಲು RTI ಕಾರ್ಯಕರ್ತ ಮಂಜುನಾಥ ಸಜ್ಜು

ಕುಂದಗೋಳ: ಪಟ್ಟಣದ ತಹಸೀಲ್ದಾರ್ ಕಚೇರಿಯ ನವೀಕರಣ ಕಾಮಗಾರಿಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಮಂಜುನಾಥ ತಾಯಿತಂದೆ ಅವರು ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಲಕ್ಷಾಂತರ ರೂಪಾಯಿ ಅನುದಾನ ದುರ್ಬಳಕೆಯಾಗುತ್ತಿದ್ದು, ಇದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಅವರು ಎಚ್ಚರಿಸಿದ್ದಾರೆ. ​RTI ಕಾರ್ಯಕರ್ತ ಮಂಜುನಾಥ ಅವರ ಪ್ರಮುಖ ಆರೋಪಗಳು: ​ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ ಅವರು, ಕಚೇರಿ ನವೀಕರಣದ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಒಂದೊಂದಾಗಿ ಬಿಚ್ಚಿಟ್ಟರು: ​”ಈ 10 ಲಕ್ಷ ರೂಪಾಯಿ ಕಾಮಗಾರಿಯ ಪೂರ್ಣ ತನಿಖೆಯಾಗಬೇಕು….

Read More

ಧಾರವಾಡ ಕವಲಗೇರಿ ಮಠದ ಸ್ವಾಮಿ ವಿಡಿಯೋ ವಿವಾದ: 10 ಲಕ್ಷಕ್ಕೆ ಡೀಲ್, 7 ಲಕ್ಷ ಪಾವತಿ – ಬಾಕಿ ಹಣಕ್ಕಾಗಿ ಬ್ಲ್ಯಾಕ್‌ಮೇಲರ್‌ಗಳ ಕೃತ್ಯ?

ಧಾರವಾಡ: ವಿದ್ಯಾಕಾಶಿ ಧಾರವಾಡದ ಪವಿತ್ರ ನೆಲದಲ್ಲಿ ಧಾರ್ಮಿಕ ಕೇಂದ್ರವೊಂದು ಈಗ ಅಪಚಾರದ ಕೇಂದ್ರವಾಗಿ ಸುದ್ದಿಯಾಗುತ್ತಿದೆ. ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿ ಅವರದ್ದೆನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಮಠದ ಘನತೆ ಹಾಗೂ ಭಕ್ತರ ನಂಬಿಕೆಗೆ ತೀವ್ರ ಧಕ್ಕೆ ತಂದಿದೆ. ಆದರೆ, ಈ ವಿಡಿಯೋ ವೈರಲ್ ಆಗಿರುವ ಹಿಂದೆ ಕೇವಲ ನೈತಿಕ ಪತನವಷ್ಟೇ ಅಲ್ಲದೆ, ಲಕ್ಷಾಂತರ ರೂಪಾಯಿಗಳ ಬ್ಲ್ಯಾಕ್‌ಮೇಲ್ ದಂಧೆ ಅಡಗಿರುವುದು ಈಗ ಸ್ಫೋಟಕ ಮಾಹಿತಿಯೊಂದಿಗೆ ಹೊರಬಿದ್ದಿದೆ. ​ಘಟನೆಯ ಕರಾಳ…

Read More

ಟ್ರ್ಯಾಕ್ ಸಂಗೀತದ ಮೂಲಕ ಹೊಸ ಸಂಚಲನ; ಗ್ರಾಮೀಣ ಭಾಗಕ್ಕೂ ಕರೋಕೆ ಸಂಗೀತ ತಲುಪಲಿ: ಸತೀಶ ತುರಮರಿ

​ಧಾರವಾಡ: ಕರೋಕೆ ಸಂಗೀತವು ಕೇವಲ ಹವ್ಯಾಸವಾಗಿ ಉಳಿಯದೆ, ಇಂದು ಒಂದು ಪ್ರಬಲ ಸಂಗೀತ ಮಾಧ್ಯಮವಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷರಾದ ಸತೀಶ ತುರಮರಿ ಅವರು ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸಂಗೀತ ವರ್ಷಿಣಿ ಕಲಾ ಸಂಸ್ಥೆಯು ಆಯೋಜಿಸಿದ್ದ ರಾಜ್ಯಮಟ್ಟದ ಕರೋಕೆ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ​ಕರೋಕೆ ಸಂಗೀತಗಾರರು ಹುಟ್ಟಿನಿಂದ ಸಂಗೀತಾಭ್ಯಾಸ ಮಾಡದಿದ್ದರೂ, ತಮ್ಮ ವೃತ್ತಿ ಜೀವನದ ಒತ್ತಡದ ನಡುವೆ ಸಂಗೀತವನ್ನು ಹವ್ಯಾಸವಾಗಿ ಬೆಳೆಸಿಕೊಂಡಿದ್ದಾರೆ. ಯಾವುದೇ…

Read More

​ಧಾರವಾಡದಲ್ಲಿ ಡಿ. 23 ರಂದು ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಧಾರವಾಡ: ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗುತ್ತಿರುವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025-26 ರ ಪೂರ್ವಭಾವಿಯಾಗಿ ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ (Land Races Products) ಪಾಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಮಟ್ಟದ ಸ್ಪರ್ಧೆಗೆ ಪೂರಕವಾಗಿ ನಡೆಯುತ್ತಿರುವ ಈ ವಿಶಿಷ್ಟ ಸ್ಪರ್ಧೆಯು ಡಿಸೆಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಲಿದೆ. ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳ ಬಳಕೆ ಹಾಗೂ ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ….

Read More

ಕೆಐಎಡಿಬಿ ಬಹುಕೋಟಿ ಹಗರಣ: ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆಯೇ ಸರ್ಕಾರ? ಸಾಮಾಜಿಕ ಹೋರಾಟಗಾರ ಬಸವರಾಜ ಕೋರವರ ಪ್ರಶ್ನೆ

​ಧಾರವಾಡ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಡೆದಿದೆ ಎನ್ನಲಾದ ಭೂಪರಿಹಾರ ಹಗರಣದ ಕುರಿತು ಜನಜಾಗೃತಿ ಸಂಘದ ಬಸವರಾಜ ಕೋರವರ ಅವರು ಮಾಧ್ಯಮದೊಂದಿಗೆ ಮಾತನಾಡಿ ಗಂಭೀರ ಆರೋಪಗಳನ್ನು ಮಾಡಿದ್ದು, ಸರ್ಕಾರದ ಮೌನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಜಾರಿ ನಿರ್ದೇಶನಾಲಯ (ಇ.ಡಿ) ಈಗಾಗಲೇ ದೋಷಾರೋಪಣ ಪಟ್ಟಿಯಲ್ಲಿ ಹಗರಣದ ಭೀಭತ್ಸ ರೂಪವನ್ನು ಬಯಲಿಗೆಳೆದಿದ್ದರೂ, ಕೆಐಎಡಿಬಿಯ ಹಿರಿಯ ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಗರಣದ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಅವರು ದೂರಿದ್ದಾರೆ. ಈ ಹಗರಣದಲ್ಲಿ ದಯಾನಂದ ಭಂಡಾರಿ ಅವರಿಗೆ…

Read More

ಯಶಸ್ಸಿಗೆ ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸ ಅತೀ ಅಗತ್ಯ: ಮಡಿವಾಳಗೌಡ್ರು ಪಾಟೀಲ ಅಭಿಮತ

ಧಾರವಾಡ: ಗರಗ :ವಿದ್ಯಾರ್ಥಿಗಳ ಜೀವನದಲ್ಲಿ ಯಶಸ್ಸು ಎಂಬುದು ಆಕಸ್ಮಿಕವಾಗಿ ಸಿಗುವಂಥದ್ದಲ್ಲ; ಅದಕ್ಕೆ ನಿರಂತರ ಪ್ರಯತ್ನ, ಅಚಲ ಆತ್ಮವಿಶ್ವಾಸ ಹಾಗೂ ಶ್ರದ್ಧೆ ಅತ್ಯಂತ ಮುಖ್ಯ ಎಂದು ಗರಗದ ಎಸ್.ಜಿ.ಎಂ. ಟ್ರಸ್ಟ್ ಅಧ್ಯಕ್ಷ ಮಡಿವಾಳಗೌಡ್ರು ಪಾಟೀಲ ತಿಳಿಸಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ತಾಲೂಕಿನ ಗರಗದ ಎಸ್.ಜಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಪರೀಕ್ಷೆಗಳು ಅಂದು-ಇಂದು’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ವಿನಾಕಾರಣ ಭಯಪಡುವ ಅಗತ್ಯವಿಲ್ಲ. ಅತಿಯಾದ ಭಯವು ಏಕಾಗ್ರತೆಯನ್ನು…

Read More

ಶಲವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ರಥೋತ್ಸವ ವಿಜೃಂಭಣೆ: ಭಕ್ತಸಾಗರದಲ್ಲಿ ಜರುಗಿದ ಸಡಗರ

ನವಲಗುಂದ: ತಾಲೂಕಿನ ಸಮೀಪದ ಶಲವಡಿ ಗ್ರಾಮದ ಪ್ರಸಿದ್ಧ ಹಾಗೂ ಐತಿಹಾಸಿಕ ಶ್ರೀ ವೀರಭದ್ರೇಶ್ವರ ದೇವಾಲಯದ ವಾರ್ಷಿಕ ರಥೋತ್ಸವವು ಮಂಗಳವಾರ ಭಕ್ತಾದಿಗಳ ಅಪಾರ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಥೋತ್ಸವದ ಅಂಗವಾಗಿ ಬೆಳ್ಳಂಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಪುನಸ್ಕಾರಗಳು, ರುದ್ರಾಭಿಷೇಕ ಹಾಗೂ ಪುಷ್ಪಾಲಂಕಾರ ಸೇವೆಗಳು ಶಾಸ್ತ್ರೋಕ್ತವಾಗಿ ನೆರವೇರಿದವು. ಸಂಜೆ ಸಕಲ ವಾದ್ಯಗೋಷ್ಠಿಗಳೊಂದಿಗೆ ಆರಂಭವಾದ ರಥೋತ್ಸವಕ್ಕೆ ವಿರಕ್ತಮಠದ ಶ್ರೀ ಗುರುಶಾಂತೇಶ್ವರ ಸ್ವಾಮಿಗಳು ಚಾಲನೆ ನೀಡಿ ಆಶೀರ್ವಚನ ನೀಡಿದರು. ​ಹೂವುಗಳಿಂದ ಹಾಗೂ ರಂಗುರಂಗಿನ ಬಟ್ಟೆಗಳಿಂದ ಸಿಂಗಾರಗೊಂಡ ಭವ್ಯ ರಥದಲ್ಲಿ…

Read More

ಧಾರವಾಡ: ಭಾವೈಕ್ಯತೆಯ ಬೆಸುಗೆಯಾಗಿ ಮೂಡಿಬಂದ ‘ಕನ್ನಡ ಗಾನ ಕೌಸ್ತುಭ-2025’ ಸಂಗೀತ ಸಂಭ್ರಮ

ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಜೊತೆಗೆ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಧಾರವಾಡ ಕರೋಕೆ ತಂಡದ ಸೇವೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಬೇಲೂರು ಶಿವಾನಂದ ಮಠದ ಶ್ರೀ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧಾರವಾಡ ಕರೋಕೆ ತಂಡ ಹಮ್ಮಿಕೊಂಡಿದ್ದ ‘ಕನ್ನಡ ಗಾನ ಕೌಸ್ತುಭ-2025’ ರ ಏಳನೇ ಆವೃತ್ತಿಯ ಕನ್ನಡ ಗೀತೆಗಳ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಒಂದು…

Read More

ನವಲಗುಂದ ಪ್ರಾಧ್ಯಾಪಕ ಬಸವರಾಜ ಸೂಡಿ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ

ನವಲಗುಂದ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ಏಳು ವರ್ಷಗಳ ಕಾಲ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸವರಾಜ ಜಿ. ಸೂಡಿ ಅವರು ಪ್ರತಿಷ್ಠಿತ ಪಿಎಚ್.ಡಿ ಪದವಿಗೆ ಭಾಜನರಾಗಿದ್ದಾರೆ. ಮಧ್ಯಪ್ರದೇಶದ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯವು ಇವರ ಸಂಶೋಧನಾ ಪ್ರಬಂಧವನ್ನು ಅಂಗೀಕರಿಸಿ ಈ ಉನ್ನತ ಪದವಿಯನ್ನು ಪ್ರಧಾನ ಮಾಡಿದೆ. ​ಬಸವರಾಜ ಸೂಡಿ ಅವರು “ಕರ್ನಾಟಕದ ಧಾರವಾಡ ಜಿಲ್ಲೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆದಾರರ ವಿಶೇಷ ಉಲ್ಲೇಖದೊಂದಿಗೆ ಗ್ರಾಹಕರ…

Read More