ಸಾಧಕರ ಸನ್ಮಾನ ಸಮಾಜಮುಖಿ ಸೇವೆಗೆ ಮತ್ತಷ್ಟು ಸ್ಫೂರ್ತಿ: ಡಾ. ಎಂ.ಬಿ. ಬಾಗಡಿ

ನವಲಗುಂದ: ಸಾಧಕರಿಗೆ ಸನ್ಮಾನ ಹಾಗೂ ಪುರಸ್ಕಾರ ನೀಡುವುದರಿಂದ ಸಮಾಜಮುಖಿಯಾಗಿ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆ ದೊರೆಯುತ್ತದೆ. ಇಂತಹ ಸನ್ಮಾನಗಳು ಸಾಧಕರ ಸಾಧನೆಯನ್ನು ಇತರರಿಗೆ ಮಾದರಿಯಾಗಿ ರೂಪಿಸಿ, ಯುವಜನರಲ್ಲಿ ಹೊಸ ಉತ್ಸಾಹ ತುಂಬುತ್ತವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ.ಬಿ. ಬಾಗಡಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರೊ. ಬಸವರಾಜ ಸೂಡಿ ಅವರನ್ನು ಸನ್ಮಾನಿಸಿ ಮಾತನಾಡಿದರು. ಪ್ರೊ. ಬಸವರಾಜ ಸೂಡಿಯವರು “ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆದಾರರು” ಎಂಬ…

Read More

ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ 3 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಜೆಡಿಯು ಆಗ್ರಹ

ಧಾರವಾಡ: ಸಾಂಸ್ಕೃತಿಕ ಹಾಗೂ ವಿದ್ಯಾನಗರಿ ಎಂದೇ ಪ್ರಸಿದ್ಧಿಯಾದ ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 2026–27ರ ರಾಜ್ಯ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಕಾಯ್ದಿರಿಸಬೇಕು ಎಂದು ಜನತಾದಳ (ಸಂಯುಕ್ತ) ಧಾರವಾಡ ಜಿಲ್ಲಾ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ಜಿಲ್ಲಾಧಿಕಾರಿಗಳ ಮುಖಾಂತರ ಈ ಮನವಿ ಸಲ್ಲಿಸಲಾಗಿದ್ದು, ಹಿಂದಿನ ಬಜೆಟ್‌ಗಳಲ್ಲಿ ಧಾರವಾಡ ಜಿಲ್ಲೆಗೆ ಸೂಕ್ತ ಆದ್ಯತೆ ಸಿಗದ ಕಾರಣ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ. ಹುಬ್ಬಳ್ಳಿ–ಧಾರವಾಡ ಮಹಾನಗರವು ವೇಗವಾಗಿ ಬೆಳೆಯುತ್ತಿದ್ದರೂ, ಮೂಲಭೂತ ಸೌಕರ್ಯಗಳ…

Read More

ಕುಂದಗೋಳ ತಾ.ಪಂ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿ ಬೇಕೇ?ಚರಂಡಿಗಿಂತ ಕಡೆಯಾದ ಸರ್ಕಾರಿ ಕಚೇರಿಗಳ ಸ್ಥಿತಿ ಕಂಡು ಸಾರ್ವಜನಿಕರ ಆಕ್ರೋಶ!

ಕುಂದಗೋಳ:ತಾಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ಸಂಕೀರ್ಣ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ಹಾಗೂ ಅಲ್ಲಿಗೆ ಬರುವ ಸಾರ್ವಜನಿಕರು ಕಲುಷಿತ ನೀರಿನಿಂದ ರೋಗಪೀಡಿತರಾಗುವ ಭೀತಿಯಲ್ಲಿದ್ದಾರೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಭವ್ಯ ಕಟ್ಟಡವು, ಸಮರ್ಪಕ ನಿರ್ವಹಣೆಯಿಲ್ಲದೆ ಇದೀಗ ರೋಗಗಳ ಕಾರ್ಖಾನೆಯಾಗಿ ಪರಿವರ್ತನೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾದ ತಾಲೂಕು ಪಂಚಾಯಿತಿ ವ್ಯಾಪ್ತಿಯ ಈ ಸರ್ಕಾರಿ ಸಂಕೀರ್ಣದಲ್ಲಿ ಅರಣ್ಯ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ…

Read More

ನವಲಗುಂದದಲ್ಲಿ ಅಯ್ಯಪ್ಪ ಸ್ವಾಮಿಯ ಮಹಾ ಪೂಜೆ ಹಾಗೂ ಜ್ಯೋತಿ ಮೆರವಣಿಗೆ ವೈಭವ

​ನವಲಗುಂದ: ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಅಯ್ಯಪ್ಪ ಸ್ವಾಮಿಯ ಮಹಾ ಪೂಜೆ ಹಾಗೂ ಭವ್ಯ ಜ್ಯೋತಿ ಮೆರವಣಿಗೆ ಕಾರ್ಯಕ್ರಮವು ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಿತು. ​ದಿನದ ಆರಂಭದಲ್ಲಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ, ನಯನಮನೋಹರ ಅಲಂಕಾರ ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು. ಮಧ್ಯಾಹ್ನ ಭಕ್ತಾದಿಗಳಿಗಾಗಿ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ವೇಳೆಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮಾಲಾಧಾರಿಗಳು ಜ್ಯೋತಿಯನ್ನು ಹೊತ್ತು ಸಾಗಿದರೆ, ಮಹಿಳೆಯರು ಮಂಗಲ ಆರತಿಗಳನ್ನು…

Read More

ಅಣ್ಣಿಗೇರಿ ದಾಸೋಹ ಮಠದ 62ನೇ ಜಾತ್ರಾ ಮಹೋತ್ಸವ ಸಂಪನ್ನ: ಮಠದ ಜೀರ್ಣೋದ್ಧಾರಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಚಾಲನೆ

ಅಣ್ಣಿಗೇರಿ: ಪಟ್ಟಣದ ಪ್ರಸಿದ್ಧ ದಾಸೋಹ ಮಠದ 62ನೇ ವರ್ಷದ ಜಾತ್ರಾ ಮಹೋತ್ಸವವು ಶನಿವಾರ ಹಾಗೂ ರವಿವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಭಕ್ತರ “ಹರಹರ ಮಹಾದೇವ”, “ಶಿವಕುಮಾರ ಮಹಾರಾಜ ಕೀ ಜೈ” ಹಾಗೂ “ಶಂಕರೇಂದ್ರ ಮಹಾರಾಜ ಕೀ ಜೈ” ಎಂಬ ಜೈಘೋಷಗಳ ನಡುವೆ ಶ್ರೀ ಮಠದ ವೈಭವಯುತ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಶನಿವಾರ ಮುಂಜಾನೆ ಶ್ರೀ ಮಠದ ಕರ್ತೃ ಗದ್ದಿಗೆಗೆ ವಿಶೇಷ ಅಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿಸಲಾಯಿತು. ಸಂಜೆ ಮಠದ ಆವರಣದಿಂದ…

Read More

ಶಾಲಾ ಮಕ್ಕಳ ಪೌಷ್ಟಿಕ ಆಹಾರ ಯೋಜನೆಯಲ್ಲಿ ಅವ್ಯವಹಾರ ಆರೋಪ: ನವಲಗುಂದ ಬಿಇಒಗೆ ಮಾಬುಸಾಬ ಎಮ್. ಯರಗುಪ್ಪಿ ದೂರು

ನವಲಗುಂದ: ತಾಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಪೂರಕ ಪೌಷ್ಟಿಕ ಆಹಾರ ಯೋಜನೆಯಲ್ಲಿ ವ್ಯಾಪಕ ಅಕ್ರಮಗಳು ಹಾಗೂ ಕರ್ತವ್ಯಲೋಪ ನಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಮಾಬುಸಾಬ ಎಮ್. ಯರಗುಪ್ಪಿ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಲಿಖಿತ ದೂರು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಸುಧಾರಣೆಗಾಗಿ ವಾರದಲ್ಲಿ ಆರು ದಿನ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಯೋಜನೆ ಜಾರಿಯಲ್ಲಿದೆ. ಆದರೆ, ತಾಲೂಕಿನ…

Read More

​ಮಾದಕ ವ್ಯಸನದಿಂದ ದೂರವಿದ್ದು ಜೀವನದಲ್ಲಿ ಸಾಧನೆ ಮಾಡಿ: ಅಬಕಾರಿ ನಿರೀಕ್ಷಕ ರಾಮು ಆರೆನ್ನವರ ಕರೆ

ನವಲಗುಂದ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಅತ್ಯಮೂಲ್ಯವಾದ ಆರೋಗ್ಯ ಮತ್ತು ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಯುವಜನತೆ ಇಂತಹ ದುಶ್ಚಟಗಳಿಂದ ಹೊರಬಂದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಬಕಾರಿ ನಿರೀಕ್ಷಕ ರಾಮು ಆರೆನ್ನವರ ತಿಳಿಸಿದರು. ​ಪಟ್ಟಣದ ಶ್ರೀ ಶಂಕರ ಮಹಾವಿದ್ಯಾಲಯದಲ್ಲಿ ಅಬಕಾರಿ ಇಲಾಖೆಯ ವತಿಯಿಂದ ನವಲಗುಂದ ಹಾಗೂ ಅಣ್ಣಿಗೇರಿ ನಗರದ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಾನವ ಜನ್ಮವು ಅತ್ಯಂತ…

Read More

ಧಾರವಾಡ ಸಂಸದ ಕ್ರೀಡಾ ಮಹೋತ್ಸವ: ಕುಂದಗೋಳದಲ್ಲಿ ಕ್ರೀಡಾ ಹಬ್ಬದ ಸಮಾಪ್ತಿ

ಕುಂದಗೋಳ: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ‘ಧಾರವಾಡ ಸಂಸದ ಕ್ರೀಡಾ ಮಹೋತ್ಸವ–2025’ರ ಕುಂದಗೋಳ ವಿಧಾನಸಭಾ ಕ್ಷೇತ್ರ ಮಟ್ಟದ ಪಂದ್ಯಾವಳಿಗಳು ಅತ್ಯಂತ ಯಶಸ್ವಿಯಾಗಿ ಜರುಗಿದವು. ಪಟ್ಟಣದ ಹರಭಟ್ಟ ಹೈಸ್ಕೂಲ್ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಈ ಕ್ರೀಡಾಕೂಟವು ಇಡೀ ಪಟ್ಟಣದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು. ರಾತ್ರಿ ವೇಳೆ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಗಳಿಗಾಗಿ ಇಡೀ ಕ್ರೀಡಾಂಗಣವನ್ನು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕರಿಸಲಾಗಿತ್ತು. ಈ ಕ್ರೀಡೋತ್ಸವದಲ್ಲಿ ಕಬಡ್ಡಿಯ 120 ತಂಡಗಳು,…

Read More

ನೆಚ್ಚಿನ ಶಿಕ್ಷಕಿ ಜರಿನಾ ಎಮ್. ಸೌದಾಗರ ಅಗಲಿಕೆ: ಅಣ್ಣಿಗೇರಿಯಲ್ಲಿ ವಿದ್ಯಾರ್ಥಿಗಳ ಕಣ್ಣೀರು, ಶಾಲೆಯಲ್ಲಿ ಶೋಕಸಾಗರ

ಅಣ್ಣಿಗೇರಿ: ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಸಾಕ್ಷಿಯಂತಿದ್ದ ಶಿಕ್ಷಕಿಯೊಬ್ಬರ ಅಕಾಲಿಕ ನಿಧನವು ಇಡೀ ಶಾಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಇಲ್ಲಿನ ಅಮೃತ ಕಲಾ ಕುಂಜ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 24 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದ ಬನಶಂಕರಿ ನಗರದ ನಿವಾಸಿ ಜರಿನಾ ಎಮ್. ಸೌದಾಗರ (46) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ದಶಕಗಳ ಕಾಲ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಜೊತೆಗೆ ಪ್ರೀತಿ-ಮಮತೆಯನ್ನು ಹಂಚಿದ್ದ ಶಿಕ್ಷಕಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಶಾಲಾ ಆವರಣದಲ್ಲಿ ಮೌನ ಆವರಿಸಿತು. ​ತಮ್ಮ ನೆಚ್ಚಿನ ಶಿಕ್ಷಕಿ…

Read More

ಪಿಎಚ್.ಡಿ ಸಂಶೋಧಕರಿಗೆ ಮಾಸಿಕ ವ್ಯಾಸಂಗ ವೇತನ: ಅರ್ಜಿ ಆಹ್ವಾನ

​ಧಾರವಾಡ: 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಆರಂಭಿಸಿರುವ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಹಾಗೂ ಫೆಲೋಶಿಪ್‌ಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ​ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅದರ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸಂಶೋಧನೆ ಆರಂಭಿಸಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ…

Read More