ಸಾಧಕರ ಸನ್ಮಾನ ಸಮಾಜಮುಖಿ ಸೇವೆಗೆ ಮತ್ತಷ್ಟು ಸ್ಫೂರ್ತಿ: ಡಾ. ಎಂ.ಬಿ. ಬಾಗಡಿ
ನವಲಗುಂದ: ಸಾಧಕರಿಗೆ ಸನ್ಮಾನ ಹಾಗೂ ಪುರಸ್ಕಾರ ನೀಡುವುದರಿಂದ ಸಮಾಜಮುಖಿಯಾಗಿ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆ ದೊರೆಯುತ್ತದೆ. ಇಂತಹ ಸನ್ಮಾನಗಳು ಸಾಧಕರ ಸಾಧನೆಯನ್ನು ಇತರರಿಗೆ ಮಾದರಿಯಾಗಿ ರೂಪಿಸಿ, ಯುವಜನರಲ್ಲಿ ಹೊಸ ಉತ್ಸಾಹ ತುಂಬುತ್ತವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ.ಬಿ. ಬಾಗಡಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರೊ. ಬಸವರಾಜ ಸೂಡಿ ಅವರನ್ನು ಸನ್ಮಾನಿಸಿ ಮಾತನಾಡಿದರು. ಪ್ರೊ. ಬಸವರಾಜ ಸೂಡಿಯವರು “ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆದಾರರು” ಎಂಬ…

