ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ನೇರ ಸಂದರ್ಶನಕ್ಕೆ ಅವಕಾಶ

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕ ನೆಲೆಯದ್ದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಸಂದರ್ಶನಕ್ಕೆ ನೇರವಾಗಿ ಹಾಜರಾಗಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲಿದ್ದು, ಕೃಷಿ ಶಿಕ್ಷಣದಲ್ಲಿ ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ. ​ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ…

Read More

ಬಸ್ ಇಲ್ಲದೆ ವಿದ್ಯಾರ್ಥಿನಿಯರ ಪರದಾಟ, ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳ ಹಾವಳಿ – ಪೊಲೀಸ್ ಇಲಾಖೆಯ ಜಾಣ ಮೌನ!

ಕುಂದಗೋಳ: ತಾಲೂಕಿನ ದೇವನೂರು ಗ್ರಾಮದ ವಿದ್ಯಾರ್ಥಿನಿಯರು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದೆ ಸೋಮವಾರ ಸಂಜೆ ವೇಳೆಗೆ ಪರಿತಪಿಸುವಂತ ವಾತಾವರಣ ನಿರ್ಮಾಣವಾಗಿತ್ತು. ಇದಲ್ಲದೆ ಪ್ರತಿದಿನ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಜೊತೆಗೆ ಬಸ್ ನಿಲ್ದಾಣದಲ್ಲಿ ಪೊಲೀಸ್ ಸುರಕ್ಷತೆ ಇಲ್ಲದ ಕಾರಣ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿನಿಯರು ಭಯದ ನೆರಳಿನಲ್ಲಿ ದಿನ ಕಳೆಯುವಂತಾಗಿದೆ. ಈ ಗಂಭೀರ ಸಮಸ್ಯೆಯ ಕುರಿತು ಪೊಲೀಸ್ ಇಲಾಖೆಯು ತೋರುತ್ತಿರುವ “ಜಾಣ ಮೌನ” ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಿಗ್ಗೆ 7 ಗಂಟೆಗೆ ಮನೆ ಬಿಡುವ…

Read More

ಹಿರೇನರ್ತಿ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶಿರಸ್ತೆದಾರ ಗೆ ಮನವಿ

ಕುಂದಗೋಳ: ತಾಲೂಕಿನ ಹಿರೇನರ್ತಿ, ಬೆನಕನಹಳ್ಳಿ ಹಾಗೂ ಬಸಾಪೂರ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಮಲಪ್ರಭಾ ಕುಡಿಯುವ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತೀವ್ರ ಸಮಸ್ಯೆಯಿಂದ ಗ್ರಾಮಸ್ಥರ ಜೀವನ ಅಸ್ತವ್ಯಸ್ತಗೊಂಡಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು ಸೋಮವಾರ ತಾಲೂಕು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಶಿರಸ್ತೇದಾರ್ ಮಹೇಶ್ ಶ್ಯಾಮನಾಳ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕಳೆದ ಎರಡು ವಾರಗಳಿಂದ ಕುಡಿಯುವ ನೀರಿಲ್ಲದೆ…

Read More

ಕುಂದಗೋಳದಲ್ಲಿ ಡಿ. 25 ರಿಂದ ಸಂಸದರ ಕ್ರೀಡಾ ಮಹೋತ್ಸವ: ಶಾಸಕ ಎಂ.ಆರ್. ಪಾಟೀಲ್ ಮಾಹಿತಿ

ಕುಂದಗೋಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಹಾಗೂ ‘ಫಿಟ್ ಇಂಡಿಯಾ’ ಅಭಿಯಾನದ ಆಶಯದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಹತ್ವಾಕಾಂಕ್ಷೆಯ ‘ಧಾರವಾಡ ಸಂಸದ ಕ್ರೀಡಾ ಮಹೋತ್ಸವ 2025-26’ ಡಿಸೆಂಬರ್ 25 ಮತ್ತು 26 ರಂದು ಕುಂದಗೋಳ ಪಟ್ಟಣದಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ…

Read More

ಕುಂದಗೋಳದಲ್ಲಿ ಡಿ. 25 ರಿಂದ ಸಂಸದರ ಕ್ರೀಡಾ ಮಹೋತ್ಸವ: ಶಾಸಕ ಎಂ.ಆರ್. ಪಾಟೀಲ್ ಮಾಹಿತಿ

ಕುಂದಗೋಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಹಾಗೂ ‘ಫಿಟ್ ಇಂಡಿಯಾ’ ಅಭಿಯಾನದ ಆಶಯದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಹತ್ವಾಕಾಂಕ್ಷೆಯ ‘ಧಾರವಾಡ ಸಂಸದ ಕ್ರೀಡಾ ಮಹೋತ್ಸವ 2025-26’ ಡಿಸೆಂಬರ್ 25 ಮತ್ತು 26 ರಂದು ಕುಂದಗೋಳ ಪಟ್ಟಣದಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ…

Read More

ಪಶುಪತಿಹಾಳ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ದುರ್ವ್ಯವಸ್ಥೆ ಕರ್ತವ್ಯ ಲೋಪಕ್ಕೆ ಗ್ರಾಮಸ್ಥರ ತೀವ್ರ ಖಂಡನೆ

ಕುಂದಗೋಳ: ತಾಲೂಕಿನ ಪಶುಪತಿಹಾಳ ಗ್ರಾಮ ಪಂಚಾಯಿತಿ ಆಡಳಿತ ವೈಫಲ್ಯದ ಕೇಂದ್ರವಾಗಿ ಪರಿಣಮಿಸಿದ್ದು, ಸಿಬ್ಬಂದಿಗಳ ಅನಗತ್ಯ ವಜಾ ಹಾಗೂ ಕರ್ತವ್ಯದ ಅವಧಿಯಲ್ಲಿ ಸಿಬ್ಬಂದಿಗಳ ಗೈರುಹಾಜರಿಯಿಂದ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ. ಪಂಚಾಯಿತಿ ಆಡಳಿತದ ಇಂತಹ ಬೇಜವಾಬ್ದಾರಿತನವನ್ನು ಖಂಡಿಸಿ ಗ್ರಾಮದ ತಿಪ್ಪಣ್ಣ ಎಂಬುವವರು ನೇರವಾಗಿ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿಸೆಂಬರ್ 16ರಂದು ಮಧ್ಯಾಹ್ನ 3.30 ಗಂಟೆಯಾದರೂ ಪಂಚಾಯಿತಿ ಕಚೇರಿಯಲ್ಲಿ ಬಹುತೇಕ ಕುರ್ಚಿಗಳು ಖಾಲಿ ಇರುವುದನ್ನು ಕಂಡು ಅಚ್ಚರಿಗೊಂಡ ತಿಪ್ಪಣ್ಣ, ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಸಿಬ್ಬಂದಿಗಳು…

Read More

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ: ಅರ್ಜಿ ಆಹ್ವಾನ

​ಧಾರವಾಡ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಜನವರಿ 1, 2026 ರಿಂದ ಪ್ರಾರಂಭವಾಗಲಿರುವ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಡಿ.ಸಿ.ಎಂ) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ​ಈ ತರಬೇತಿಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಶಿಷ್ಯವೇತನವನ್ನು ಸಹ ನೀಡಲಾಗುವುದು. ಈ ಡಿಪ್ಲೊಮಾ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಹೆಚ್ಚಿನ ಅವಕಾಶಗಳು ದೊರೆಯಲಿವೆ. ವಿಶೇಷವಾಗಿ ಅರ್ಬನ್…

Read More

ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿ ಮನೆಗೂ ಜಾಗೃತಿ ತಲುಪಲಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: “ಭಾರತ ಸರ್ಕಾರವು ಮುಂದಿನ ಹತ್ತು ವರ್ಷಗಳಲ್ಲಿ ದೇಶವನ್ನು ಬಾಲ್ಯ ವಿವಾಹ ಮುಕ್ತವನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಂದು ಗ್ರಾಮವೂ ಮೊದಲು ಬಾಲ್ಯ ವಿವಾಹ ಮುಕ್ತವಾಗಬೇಕು. ಇದಕ್ಕಾಗಿ ಹಮ್ಮಿಕೊಂಡಿರುವ ನೂರು ದಿನಗಳ ಜಾಗೃತಿ ಅಭಿಯಾನ ಜಿಲ್ಲೆಯ ಪ್ರತಿ ಮನೆಗೂ ತಲುಪಬೇಕು” ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು. ​ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ…

Read More

ಡಿಸೆಂಬರ್ 28 ರಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ

ಧಾರವಾಡ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆಗಳ ಸಭೆಯನ್ನು ಡಿಸೆಂಬರ್ 28 ರಂದು ಹಮ್ಮಿಕೊಳ್ಳಲಾಗಿದೆ. ​ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ಜರುಗಲಿದೆ. ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ. ​ಜಿಲ್ಲೆಯಾದ್ಯಂತ ಇರುವ ಪರಿಶಿಷ್ಟ…

Read More

ಜಿಲ್ಲೆಯ ಆರ್ಥಿಕ ಪ್ರಗತಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದು: ಸಿಇಓ ಭುವನೇಶ ಪಾಟೀಲ

ಧಾರವಾಡ: “ಜಿಲ್ಲೆಯ ಸಮಗ್ರ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ಜನಹಿತ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಬ್ಯಾಂಕ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ​ಕೃಷಿ, ಸಣ್ಣ ಉದ್ಯಮ, ಸ್ವ-ಉದ್ಯೋಗ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು ಕಾಲಮಿತಿಯಲ್ಲಿ ಲಭ್ಯವಾಗಬೇಕು…

Read More