ಮಾ. 7 ರಂದು ಕಮಡೊಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಭೂಮಿ ಪೂಜೆ: ಗಣ್ಯರ ಉಪಸ್ಥಿತಿ
ಧಾರವಾಡ: ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಶ್ರೀಮತಿ ಆರ್.ಎಫ್.ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ಅದ್ದೂರಿಯಾಗಿ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕಟ್ಟಡದ ಭೂಮಿ ಪೂಜೆ ನೆರವೇರಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ…

