ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿ ಕಮ್ ಕ್ರಷ್ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲೆಯ ಆರು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 42 ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ನಗರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕುಗಳ ವಿವಿಧ ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಲ್ಲಿ ಈ ಹುದ್ದೆಗಳು ಭರ್ತಿಯಾಗಲಿವೆ. ಕುಂದಗೋಳ ತಾಲೂಕಿನ ಕಳಸ, ಕುಂದಗೋಳ,…

Read More

ಕುಂದಗೋಳ ಬಳಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಶಿರೂರ ಗ್ರಾಮದ ಐಟಿಐ ವಿದ್ಯಾರ್ಥಿಯ ರುಂಡ ಕತ್ತರಿಸಿ ಸ್ಥಳದಲ್ಲೇ ದಾರುಣ ಸಾವು!

​ಕುಂದಗೋಳ: ಪಟ್ಟಣದ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿ ಬುಧವಾರ ಸಂಜೆ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐಟಿಐ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾನೆ. ಶಿರೂರ ಗ್ರಾಮದ ನಿವಾಸಿಯಾದ, ಐಟಿಐ ಓದುತ್ತಿದ್ದ ಫಕ್ಕೀರೇಶ ಚನ್ನಯ್ಯ ಮುತ್ತಳ್ಳಿಮಠ (ಅಂದಾಜು 17 ವರ್ಷ) ಎಂಬಾತನೇ ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ​ಸಂಜೆ ಸುಮಾರು 5 ಗಂಟೆಯ ವೇಳೆಗೆ ಲಕ್ಷ್ಮೇಶ್ವರ ಡಿಪೋಗೆ ಸೇರಿದ ಕೆ.ಎ. 26 ಎಫ್-1039 ನಂಬರಿನ…

Read More

ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ: ಧಾರವಾಡ ಜಿಲ್ಲೆಯಲ್ಲಿ ಶೇ.0.92 ಏಣಿಕೆ ನಮೂನೆಗಳ ವಿತರಣೆ

ಧಾರವಾಡ, ಜೂ.30: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಧಾರವಾಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಏಣಿಕೆ, ಗಣತಿ ನಮೂನೆಗಳ ವಿತರಣೆಯನ್ನು ಆರಂಭಿಸಿದ್ದಾರೆ. ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಈ ಅಭಿಯಾನದ ಮೊದಲ ದಿನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.0.92ರಷ್ಟು ಏಣಿಕೆ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು, ಶೇ.0.02ರಷ್ಟು ಭರ್ತಿ ಮಾಡಿದ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಲಾಗಿದೆ. ಕ್ಷೇತ್ರವಾರು…

Read More

ಎಸ್‌ಸಿ-ಎಸ್‌ಟಿ, ಫೋಕ್ಸೊ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಿ: ಎಫ್.ಎಚ್. ಜಕ್ಕಪ್ಪನವರ

ಧಾರವಾಡ, ಜೂ.30: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳು, ಫೋಕ್ಸೊ ಪ್ರಕರಣಗಳು ಸೇರಿದಂತೆ ನ್ಯಾಯಾಲಯ ಹಾಗೂ ತನಿಖಾ ಹಂತದಲ್ಲಿರುವ ಎಲ್ಲ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಮಂಗಳವಾರ ನಡೆದ 2026ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ…

Read More

ಧಾರವಾಡ:ಅಂತರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

ಧಾರವಾಡ, ಜೂ. 29: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಹಾಗೂ ಕಿಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ಕಿಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ, ಮಾದಕ…

Read More

ಧಾರವಾಡ:ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಜಾಗೃತಿ ಜಾಥಾ: ಅರ್ಹ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿ – ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ

ಧಾರವಾಡ, ಜೂ. 29: ಭಾರತ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಜಾಗೃತಿ ಜಾಥಾವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಆರ್. ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಭುವನೇಶ ಪಾಟೀಲ ಅವರು ಆಕಾಶಕ್ಕೆ ಬಲೂನ್‌ಗಳನ್ನು…

Read More

ವಿಭಾಗ ಮಟ್ಟದ ಉದ್ಯೋಗ ಮೇಳ ಶೀಘ್ರ: ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತು – ಕಾಂತಾ ನಾಯಕ

ಧಾರವಾಡ, ಜೂ.24: ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಿದರೆ ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರಗಳು ಕೈಗಾರಿಕಾ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ…

Read More

ಅಣ್ಣಿಗೇರಿ ಬಳಿ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಮೇಲೆ ಅಬಕಾರಿ ದಾಳಿ: ಇಬ್ಬರು ಆರೋಪಿಗಳ ಬಂಧನ

ಧಾರವಾಡ, ಜೂ.24: ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದ ಸ್ಥಳದ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತರು, ಅಬಕಾರಿ ಜಂಟಿ ಆಯುಕ್ತರು, ಧಾರವಾಡ ಅಬಕಾರಿ ಉಪ ಆಯುಕ್ತರು ಹಾಗೂ ಅಬಕಾರಿ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜೂನ್ 22ರಂದು ನವಲಗುಂದ ವಲಯ ವ್ಯಾಪ್ತಿಯ ಅಣ್ಣಿಗೇರಿ ಶರಹದ್ದಿನ ಕಣಗಲ್ಲ ಹಳ್ಳದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು. ಅಬಕಾರಿ ನಿರೀಕ್ಷಕ ರಾಮು ಆರೆನ್ನವರ, ಉಪ ನಿರೀಕ್ಷಕಿ ಅನುರಾಧ ಓಲೇಕಾರ ಹಾಗೂ ಸಿಬ್ಬಂದಿ ತಂಡವು…

Read More

ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ರೈತರಿಗೆ ಸರ್ಕಾರದ ಭದ್ರತಾ ಕವಚ

ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ರೈತರಿಗೆ ಸರ್ಕಾರದ ಭದ್ರತಾ ಕವಚ ಧಾರವಾಡ: 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ರಾಜ್ಯ ಸರ್ಕಾರ ಘೋಷಿಸಿದ್ದು, ಧಾರವಾಡ ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಈ ಯೋಜನೆಯಡಿ ಹಸಿಮೆಣಸಿನಕಾಯಿ ಹಾಗೂ ಮಾವು ಬೆಳೆಗಳನ್ನು ಒಳಪಡಿಸಲಾಗಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಭಾವಿ, ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯಿತಿಗಳನ್ನು…

Read More

ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು: ಮಹಿಳಾ ಆರೋಪಿತೆ ಬಂಧನ, ₹4.70 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಧಾರವಾಡ: ಜಿಲ್ಲೆಯ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಹಿಳಾ ಆರೋಪಿತೆಯನ್ನು ಬಂಧಿಸಿ, ಕಳುವಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನವಲಗುಂದ ಪೊಲೀಸ್ ಠಾಣೆಯ ಗುನ್ನಾ ಸಂಖ್ಯೆ 94/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 305ರ ಅನ್ವಯ ಪ್ರಕರಣ ದಾಖಲಾಗಿತ್ತು. ಬಳ್ಳೂರ ಗ್ರಾಮದ ಶೈಲಾ ಕೋಂ ಸಿದ್ದಯ್ಯ ಹಿರೇಮಠ ಅವರು ತಮ್ಮ ಮನೆಯಲ್ಲಿ ಕಳ್ಳತನ ನಡೆದಿರುವ ಕುರಿತು ಜೂನ್ 12ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು….

Read More