​ಧಾರವಾಡದಲ್ಲಿ ಬರ್ಬರ ಹತ್ಯೆ: ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಮನೆಗೆ ನುಗ್ಗಿ ಚಾಕು ಇರಿತ

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಕ್ತಪಾತ ನಡೆದಿದ್ದು, ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅತಿ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ಜಿಲ್ಲೆಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಭೀತಿ ಆವರಿಸಿದೆ. ​ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯು ಫೈರೋಜ್ ಪಠಾಣ್ ಅವರ ನಿವಾಸದಲ್ಲೇ ನಡೆದಿದೆ. ರಾತ್ರಿ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಫೈರೋಜ್ ಅವರ ಮೇಲೆ ಏಕಾಏಕಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ದಾಳಿ…

Read More

ಧಾರವಾಡ: ಏಪ್ರಿಲ್ 23 ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಅಭಿಯಾನ

ಧಾರವಾಡ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ದನ ಹಾಗೂ ಎಮ್ಮೆಗಳಿಗೆ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಂಬತ್ತನೇ ಸುತ್ತಿನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಮನೆ ಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ…

Read More

​ಧಾರವಾಡ: ಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಧಾರವಾಡ: ನಗರದ ಸಪ್ತಾಪೂರ ರಸ್ತೆಯಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಯುದ್ಧದಲ್ಲಿ ಮಡಿದ ಯೋಧರ ಹಾಗೂ ಮಾಜಿ ಸೈನಿಕರ ಪುತ್ರಿಯರಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ​ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಯರು ಹಾಗೂ ರಾಜ್ಯದ ಇತರ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. 5ನೇ ತರಗತಿಯಿಂದ ಪಿಯುಸಿ ದ್ವಿತೀಯ…

Read More

ಧಾರವಾಡ: ಎಲ್‍ಪಿಜಿ, ಸಿಎನ್‍ಜಿ ಬಂಕ್‌ಗಳಲ್ಲಿ ದರ–ದಾಸ್ತಾನು ಮಾಹಿತಿ ಫಲಕ ಕಡ್ಡಾಯ; ಪಾರದರ್ಶಕತೆ, ಸಹಕಾರದಿಂದ ಸಮಸ್ಯೆ ಪರಿಹಾರ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಏ.10: ಅನಿರೀಕ್ಷಿತ ಬೆಳವಣಿಗೆ ಹಾಗೂ ಪಾಶ್ಚಿಮಾತ್ಯ ದೇಶಗಳ ಯುದ್ಧಭೀತಿಯಿಂದ ಎಲ್‍ಪಿಜಿ, ಸಿಎನ್‍ಜಿ ಗ್ಯಾಸ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಿ, ಗ್ಯಾಸ್ ಬಳಕೆದಾರರಿಗೆ ಮತ್ತು ಬಂಕ್ ಮಾಲೀಕರಿಗೆ ಅಲ್ಪ ಮಟ್ಟಿಗೆ ತೊಂದರೆ ಕಂಡು ಬಂದಿದ್ದು, ಆಟೋ ಚಾಲಕರು ಚಿಂತಿಸದೆ, ಸಮಾಧಾನವಾಗಿ ನಿರ್ವಹಿಸಬೇಕು. ಧಾರವಾಡ ಜಿಲ್ಲೆಯಲ್ಲಿ 21 ಆಟೋ ಎಲ್‍ಪಿಜಿ ಹಾಗೂ 11 ಸಿಎನ್‍ಜಿ ಬಂಕ್‍ಗಳಿವೆ. ಹಂತ ಹಂತವಾಗಿ ದಾಸ್ತಾನು ಲಭ್ಯವಾಗುತ್ತಿದ್ದು, ವಿತರಣೆಯಲ್ಲಿ ವಿಳಂಬವಾಗುತ್ತಿದೆ. ಸ್ವಲ್ಪ ದಿನಗಳಲ್ಲಿ ಸಮಸ್ಯೆ ಪರಿಹಾರವಾಗಲಿದ್ದು, ಆಟೋ ಚಾಲಕರು ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ನೇಹಾಲ್…

Read More

ಕಳಪೆ ಬೀಜ ಮಾರಿ ರೈತನಿಗೆ ವಂಚಿಸಿದ ಕಂಪನಿಗೆ ₹5.60 ಲಕ್ಷ ದಂಡ: ಗ್ರಾಹಕ ಆಯೋಗದಿಂದ ಅನ್ನದಾತನಿಗೆ ನ್ಯಾಯ!

ಧಾರವಾಡ: ಬೆವರು ಸುರಿಸಿ ಭೂಮಿ ತಾಯಿಯನ್ನು ನಂಬಿ ಬದುಕುವ ರೈತನ ನಂಬಿಕೆಗೆ ದ್ರೋಹ ಬಗೆದು, ಕಳಪೆ ಬೀಜ ಮಾರಾಟ ಮಾಡಿದ ತೆಲಂಗಾಣ ಮೂಲದ ಸತ್ಯಕಾಮ್ ದುಡಿಗಳ್ಳ ಸಂಸ್ಥೆ ಹಾಗೂ ಸ್ಥಳೀಯ ವಿತರಕರಿಗೆ ಧಾರವಾಡ ಜಿಲ್ಲಾ ಗ್ರಾಹಕ ಆಯೋಗವು ಸರಿಯಾದ ಪಾಠ ಕಲಿಸಿದೆ. ಈ ಕಂಪನಿಗಳ ಸೇವಾ ನ್ಯೂನ್ಯತೆಯನ್ನು ತೀವ್ರವಾಗಿ ಖಂಡಿಸಿರುವ ಆಯೋಗವು, ಸಂಕಷ್ಟಕ್ಕೀಡಾದ ರೈತನಿಗೆ ಒಟ್ಟು 5 ಲಕ್ಷ ರೂಪಾಯಿ ಬೆಳೆ ನಷ್ಟ ಪರಿಹಾರ, 50 ಸಾವಿರ ರೂಪಾಯಿ ಮಾನಸಿಕ ದಂಡ ಹಾಗೂ 10 ಸಾವಿರ ರೂಪಾಯಿ…

Read More

ಕುಂದಗೋಳ: ನಿಗದಿತ ಸಮಯಕ್ಕೆ ಅಹವಾಲು ಸ್ವೀಕರಿಸದ ಜಿಲ್ಲಾಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ; ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಕುಂದಗೋಳ: ಜಿಲ್ಲಾಧಿಕಾರಿಗಳೇ ಖುದ್ದಾಗಿ ಸಮಯ ನಿಗದಿಪಡಿಸಿ, ಸಾರ್ವಜನಿಕರ ಅಹವಾಲು ಆಲಿಸುವ ಸಭೆಗೆ ಗೈರುಹಾಜರಾದ ಘಟನೆ ಕುಂದಗೋಳದಲ್ಲಿ ಇಂದು ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಧಾರವಾಡ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ಇಂದು ಬೆಳಿಗ್ಗೆ 11:00 ಗಂಟೆಗೆ ಸಾರ್ವಜನಿಕ ಸಂಪರ್ಕ ಅಹವಾಲು ಸಭೆಯನ್ನು ನಿಗದಿಪಡಿಸಿದ್ದರು. ತಮ್ಮ ಸಮಸ್ಯೆಗಳನ್ನು ಹೊತ್ತು ದೂರದೂರುಗಳಿಂದ ಆಗಮಿಸಿದ್ದ ನೂರಾರು ರೈತರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ತಹಶೀಲ್ದಾರ್ ಕಚೇರಿಗೆ ಹಾಜರಾಗಿದ್ದರು. ಆದರೆ, ಸಮಯ ಮೀರಿ ಗಂಟೆ ಕಳೆದರೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸದಿದ್ದರಿಂದ ಕಾದು ಕಾದು ಸುಸ್ತಾದ…

Read More

ಧಾರವಾಡದಲ್ಲಿ ಆಟೋ ಗ್ಯಾಸ್ ಅಭಾವ: ಕಿಲೋಮೀಟರ್‌ಗಟ್ಟಲೆ ಕ್ಯೂ ನಿಂತ ಚಾಲಕರು; ಬಂಕ್‌ಗಳ ಮುಂದೆ ಆಹಾಕಾರ!

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಆಟೋ ಎಲ್‌ಪಿಜಿ ಗ್ಯಾಸ್‌ಗೆ ತೀವ್ರ ಅಭಾವ ಸೃಷ್ಟಿಯಾಗಿದ್ದು, ಆಟೋ ರಿಕ್ಷಾ ಚಾಲಕರು ಗ್ಯಾಸ್‌ಗಾಗಿ ಹಗಲು-ರಾತ್ರಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಗರದ ಬಹುತೇಕ ಆಟೋ ಗ್ಯಾಸ್ ಬಂಕ್‌ಗಳು ಗ್ಯಾಸ್ ಪೂರೈಕೆಯಿಲ್ಲದೆ ಸಂಪೂರ್ಣವಾಗಿ ಬಂದ್ ಆಗಿರುವುದು ಚಾಲಕರ ಆತಂಕಕ್ಕೆ ಕಾರಣವಾಗಿದೆ. ​ನಗರದಾದ್ಯಂತ ಗ್ಯಾಸ್ ಸಿಗದ ಕಾರಣ ಚಾಲಕರು ರಾಯಾಪುರದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನತ್ತ ಮುಗಿಬಿದ್ದಿದ್ದಾರೆ. ಇಲ್ಲಿ ಮಾತ್ರ ಸದ್ಯಕ್ಕೆ ಗ್ಯಾಸ್ ಲಭ್ಯವಿದ್ದು, ಇಂಧನ ತುಂಬಿಸಿಕೊಳ್ಳಲು ಬೆಳಿಗ್ಗೆಯಿಂದಲೇ ಕಿಲೋಮೀಟರ್‌ಗಟ್ಟಲೆ ಉದ್ದದ ಸಾಲಿನಲ್ಲಿ ಆಟೋಗಳು ನಿಂತಿವೆ. ಒಂದು…

Read More

ಜಗತ್ತಿನಲ್ಲಿ ಶಾಂತಿ ನೆಲೆಸಲಿ: ಜಾತ್ರೆಯ ತೇರಿಗೆ ‘ಯುದ್ಧ ನಿಲ್ಲಲಿ’ ಎಂಬ ಸಂದೇಶದ ಬಾಳೆಹಣ್ಣು ಎಸೆದ ಯುವಕ

ಧಾರವಾಡ: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷದಿಂದ ಜಗತ್ತಿನಾದ್ಯಂತ ಅಶಾಂತಿ ಮೂಡಿರುವ ಬೆನ್ನಲ್ಲೇ, ಧಾರವಾಡದ ಯುವಕನೊಬ್ಬ ಜಾಗತಿಕ ಶಾಂತಿಗಾಗಿ ದೇವರಿಗೆ ವಿಶಿಷ್ಟವಾಗಿ ಮೊರೆ ಹೋಗುವ ಮೂಲಕ ಗಮನ ಸೆಳೆದಿದ್ದಾನೆ. ​ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗುರುವಾರ ಸಂಭ್ರಮದಿಂದ ಜರುಗಿದ ಶ್ರೀ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಈ ಅಪರೂಪದ ಘಟನೆ ಸಂಭವಿಸಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯಾದ ರಥೋತ್ಸವದ ವೇಳೆ ಭಕ್ತರು ಹಣ್ಣು-ಜವನ ಎಸೆಯುವುದು ವಾಡಿಕೆ. ಆದರೆ, ಈ ಯುವಕ ಮಾತ್ರ ಬಾಳೆಹಣ್ಣಿನ ಮೇಲೆ ‘ಯುದ್ಧ ನಿಲ್ಲಲಿ……

Read More

​ಕುಂದಗೋಳ: ನಾಳೆ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ

ಕುಂದಗೋಳ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಏಪ್ರಿಲ್ 4 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ​ತಾಲೂಕಿನ ರೈತ ಬಾಂಧವರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಈ ಸಭೆಯಲ್ಲಿ ಸಲ್ಲಿಸಬಹುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನೇರವಾಗಿ ಚರ್ಚಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಹಶೀಲ್ದಾರ್ ರಾಜು ಮಾವರಕರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Read More

ನನ್ನ ಗಣತಿ ದೇಶದ ಶಕ್ತಿ: ಸ್ವಯಂ ಗಣತಿಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ

ಧಾರವಾಡ: ದೇಶದ ಭವಿಷ್ಯದ ಯೋಜನೆಗಳು ಮತ್ತು ಅಭಿವೃದ್ಧಿಯ ದಿಕ್ಸೂಚಿಯಾಗಿರುವ 2027ರ ಜನಗಣತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಡಿಜಿಟಲ್ ಇಂಡಿಯಾ ಅಭಿಯಾನದಡಿ ಲಭ್ಯವಿರುವ ‘ಸ್ವಯಂ ಗಣತಿ’ (Self-Enumeration) ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ಕರೆ ನೀಡಿದ್ದಾರೆ. ​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಗಣತಿಯು ಕೇವಲ ಅಂಕಿ-ಅಂಶಗಳ ಸಂಗ್ರಹವಲ್ಲ, ಇದು ಸುಭದ್ರ ಭಾರತದ ನಿರ್ಮಾಣಕ್ಕೆ ನಾಗರಿಕರು ನೀಡುವ…

Read More