ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಎಚ್. ಕೆ. ಪಾಟೀಲ
ಅಣ್ಣಿಗೇರಿ: “ಗ್ರಾಮಗಳು ನಮ್ಮ ದೇಶದ ಆತ್ಮಗಳಿದ್ದಂತೆ. ಗ್ರಾಮಗಳ ಅಭಿವೃದ್ಧಿಯಾಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಿಲ್ಲ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಹೇಳಿದರು. ತಾಲೂಕಿನ ನಲವಡಿ ಗ್ರಾಮದಲ್ಲಿ ಶನಿವಾರ ನೂತನವಾಗಿ ನಿರ್ಮಿಸಲಾದ ಗ್ರಾಮ ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ತಮಗಿರುವ ವಿಶೇಷ ಆಸಕ್ತಿಯನ್ನು ವ್ಯಕ್ತಪಡಿಸಿದ ಸಚಿವರು, “ಪಂಚಾಯತಿ ಎಂದರೆ ನನಗೆ ಪ್ರೀತಿ ಮತ್ತು ಪ್ರಾಣವಿದ್ದಂತೆ. ರಾಜ್ಯದಲ್ಲಿರುವ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾನೂನು ಯಶಸ್ವಿಯಾಗಿ…

