ಕೆಐಎಡಿಬಿ ಬಹುಕೋಟಿ ಹಗರಣ: ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆಯೇ ಸರ್ಕಾರ? ಸಾಮಾಜಿಕ ಹೋರಾಟಗಾರ ಬಸವರಾಜ ಕೋರವರ ಪ್ರಶ್ನೆ

​ಧಾರವಾಡ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಡೆದಿದೆ ಎನ್ನಲಾದ ಭೂಪರಿಹಾರ ಹಗರಣದ ಕುರಿತು ಜನಜಾಗೃತಿ ಸಂಘದ ಬಸವರಾಜ ಕೋರವರ ಅವರು ಮಾಧ್ಯಮದೊಂದಿಗೆ ಮಾತನಾಡಿ ಗಂಭೀರ ಆರೋಪಗಳನ್ನು ಮಾಡಿದ್ದು, ಸರ್ಕಾರದ ಮೌನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಜಾರಿ ನಿರ್ದೇಶನಾಲಯ (ಇ.ಡಿ) ಈಗಾಗಲೇ ದೋಷಾರೋಪಣ ಪಟ್ಟಿಯಲ್ಲಿ ಹಗರಣದ ಭೀಭತ್ಸ ರೂಪವನ್ನು ಬಯಲಿಗೆಳೆದಿದ್ದರೂ, ಕೆಐಎಡಿಬಿಯ ಹಿರಿಯ ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಗರಣದ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಅವರು ದೂರಿದ್ದಾರೆ. ಈ ಹಗರಣದಲ್ಲಿ ದಯಾನಂದ ಭಂಡಾರಿ ಅವರಿಗೆ…

Read More

ಯಶಸ್ಸಿಗೆ ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸ ಅತೀ ಅಗತ್ಯ: ಮಡಿವಾಳಗೌಡ್ರು ಪಾಟೀಲ ಅಭಿಮತ

ಧಾರವಾಡ: ಗರಗ :ವಿದ್ಯಾರ್ಥಿಗಳ ಜೀವನದಲ್ಲಿ ಯಶಸ್ಸು ಎಂಬುದು ಆಕಸ್ಮಿಕವಾಗಿ ಸಿಗುವಂಥದ್ದಲ್ಲ; ಅದಕ್ಕೆ ನಿರಂತರ ಪ್ರಯತ್ನ, ಅಚಲ ಆತ್ಮವಿಶ್ವಾಸ ಹಾಗೂ ಶ್ರದ್ಧೆ ಅತ್ಯಂತ ಮುಖ್ಯ ಎಂದು ಗರಗದ ಎಸ್.ಜಿ.ಎಂ. ಟ್ರಸ್ಟ್ ಅಧ್ಯಕ್ಷ ಮಡಿವಾಳಗೌಡ್ರು ಪಾಟೀಲ ತಿಳಿಸಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ತಾಲೂಕಿನ ಗರಗದ ಎಸ್.ಜಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಪರೀಕ್ಷೆಗಳು ಅಂದು-ಇಂದು’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ವಿನಾಕಾರಣ ಭಯಪಡುವ ಅಗತ್ಯವಿಲ್ಲ. ಅತಿಯಾದ ಭಯವು ಏಕಾಗ್ರತೆಯನ್ನು…

Read More

ಶಲವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ರಥೋತ್ಸವ ವಿಜೃಂಭಣೆ: ಭಕ್ತಸಾಗರದಲ್ಲಿ ಜರುಗಿದ ಸಡಗರ

ನವಲಗುಂದ: ತಾಲೂಕಿನ ಸಮೀಪದ ಶಲವಡಿ ಗ್ರಾಮದ ಪ್ರಸಿದ್ಧ ಹಾಗೂ ಐತಿಹಾಸಿಕ ಶ್ರೀ ವೀರಭದ್ರೇಶ್ವರ ದೇವಾಲಯದ ವಾರ್ಷಿಕ ರಥೋತ್ಸವವು ಮಂಗಳವಾರ ಭಕ್ತಾದಿಗಳ ಅಪಾರ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಥೋತ್ಸವದ ಅಂಗವಾಗಿ ಬೆಳ್ಳಂಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಪುನಸ್ಕಾರಗಳು, ರುದ್ರಾಭಿಷೇಕ ಹಾಗೂ ಪುಷ್ಪಾಲಂಕಾರ ಸೇವೆಗಳು ಶಾಸ್ತ್ರೋಕ್ತವಾಗಿ ನೆರವೇರಿದವು. ಸಂಜೆ ಸಕಲ ವಾದ್ಯಗೋಷ್ಠಿಗಳೊಂದಿಗೆ ಆರಂಭವಾದ ರಥೋತ್ಸವಕ್ಕೆ ವಿರಕ್ತಮಠದ ಶ್ರೀ ಗುರುಶಾಂತೇಶ್ವರ ಸ್ವಾಮಿಗಳು ಚಾಲನೆ ನೀಡಿ ಆಶೀರ್ವಚನ ನೀಡಿದರು. ​ಹೂವುಗಳಿಂದ ಹಾಗೂ ರಂಗುರಂಗಿನ ಬಟ್ಟೆಗಳಿಂದ ಸಿಂಗಾರಗೊಂಡ ಭವ್ಯ ರಥದಲ್ಲಿ…

Read More

ಧಾರವಾಡ: ಭಾವೈಕ್ಯತೆಯ ಬೆಸುಗೆಯಾಗಿ ಮೂಡಿಬಂದ ‘ಕನ್ನಡ ಗಾನ ಕೌಸ್ತುಭ-2025’ ಸಂಗೀತ ಸಂಭ್ರಮ

ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಜೊತೆಗೆ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಧಾರವಾಡ ಕರೋಕೆ ತಂಡದ ಸೇವೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಬೇಲೂರು ಶಿವಾನಂದ ಮಠದ ಶ್ರೀ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧಾರವಾಡ ಕರೋಕೆ ತಂಡ ಹಮ್ಮಿಕೊಂಡಿದ್ದ ‘ಕನ್ನಡ ಗಾನ ಕೌಸ್ತುಭ-2025’ ರ ಏಳನೇ ಆವೃತ್ತಿಯ ಕನ್ನಡ ಗೀತೆಗಳ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಒಂದು…

Read More

ನವಲಗುಂದ ಪ್ರಾಧ್ಯಾಪಕ ಬಸವರಾಜ ಸೂಡಿ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ

ನವಲಗುಂದ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ಏಳು ವರ್ಷಗಳ ಕಾಲ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸವರಾಜ ಜಿ. ಸೂಡಿ ಅವರು ಪ್ರತಿಷ್ಠಿತ ಪಿಎಚ್.ಡಿ ಪದವಿಗೆ ಭಾಜನರಾಗಿದ್ದಾರೆ. ಮಧ್ಯಪ್ರದೇಶದ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯವು ಇವರ ಸಂಶೋಧನಾ ಪ್ರಬಂಧವನ್ನು ಅಂಗೀಕರಿಸಿ ಈ ಉನ್ನತ ಪದವಿಯನ್ನು ಪ್ರಧಾನ ಮಾಡಿದೆ. ​ಬಸವರಾಜ ಸೂಡಿ ಅವರು “ಕರ್ನಾಟಕದ ಧಾರವಾಡ ಜಿಲ್ಲೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆದಾರರ ವಿಶೇಷ ಉಲ್ಲೇಖದೊಂದಿಗೆ ಗ್ರಾಹಕರ…

Read More

ಧಾರವಾಡ ಜಿಲ್ಲೆಯ ಮೂರು ಗ್ರಾಮಗಳಲ್ಲಿ ‘ಗ್ರಾಮ-ಒನ್’ ಕೇಂದ್ರಕ್ಕೆ ಅರ್ಜಿ ಆಹ್ವಾನ: ಆಸಕ್ತರಿಗೆ ಸುವರ್ಣಾವಕಾಶ

​ ಧಾರವಾಡ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ತಲುಪಿಸುವ ಮಹತ್ವಾಕಾಂಕ್ಷೆಯ ‘ಗ್ರಾಮ-ಒನ್’ ಕೇಂದ್ರದ ಫ್ರಾಂಚೈಸಿಗಳನ್ನು ಸ್ಥಾಪಿಸಲು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯು ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಆಯ್ದ ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಈ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ​ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಮತ್ತು ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಗ್ರಾಮ-ಒನ್ ಕೇಂದ್ರಗಳ…

Read More

ಧಾರವಾಡ: ಕೃಷಿ ಇಲಾಖೆಗಳ ಯೋಜನೆಗಳ ಕುರಿತು ಸೋಷಿಯೋ ಎಕನಾಮಿಕ್ ಅಧ್ಯಯನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ; ಅನುದಾನ ಲ್ಯಾಪ್ಸ್ ಆಗದಂತೆ ಅಧಿಕಾರಿಗಳಿಗೆ ಎಚ್ಚರಿಕೆ

ಧಾರವಾಡ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಅಡಿ ಬಿಡುಗಡೆಯಾಗಿರುವ ಅನುದಾನವು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು ಮತ್ತು ಯಾವುದೇ ಕಾರಣಕ್ಕೂ ಹಣ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನವೆಂಬರ್ ಅಂತ್ಯದವರೆಗಿನ ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ…

Read More

ಗುಡೇನಕಟ್ಟಿ ಸಾರಾಯಿ ದಂಧೆ: ‘ಶ್ರಾವ್ಯಾ ದಾಬಾ’ ಹೆಸರಿನಲ್ಲಿ ಕಾನೂನಿಗೆ ಸವಾಲು; ಅಧಿಕಾರಿಯ ಕೃಪಾಕಟಾಕ್ಷವೋ ಅಥವಾ ನಿರ್ಲಕ್ಷ್ಯವೋ?

ಕುಂದಗೋಳ: ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದ ಮಂಟೂರ–ಗುಡೇನಕಟ್ಟಿ ರಸ್ತೆಯ ಹೊರವಲಯದಲ್ಲಿರುವ ‘ಶ್ರಾವ್ಯಾ ದಾಬಾ’ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ದಂಧೆಯು ಸ್ಥಳೀಯ ಆಡಳಿತದ ವೈಫಲ್ಯವನ್ನು ಬಯಲು ಮಾಡಿದೆ. ಅಬಕಾರಿ ಇಲಾಖೆಯ ಪರವಾನಗಿ ಮಾತ್ರವಲ್ಲದೆ, ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ನಿಯಮಗಳಿಗೂ ತಲೆಬಾಗದೆ, ಸಕಲ ಕಾನೂನುಗಳನ್ನು ಗಾಳಿಗೆ ತೂರಿ ಈ ದಂಧೆ ರಾಜಾರೋಷವಾಗಿ ನಡೆಯುತ್ತಿರುವುದು ಇಡೀ ವ್ಯವಸ್ಥೆಯ ದಕ್ಷತೆ ಬಗ್ಗೆ ಗಂಭೀರ ಸಂಶಯ ಮೂಡಿಸಿದೆ. ದಂಧೆಕೋರರು ಹೊರಗಿನಿಂದ ಅಗ್ಗದ ಮದ್ಯ ತಂದು…

Read More

ಕೃಷಿ ಜಮೀನಿಗೆ ರಸ್ತೆ, ರೈತರಿಗೆ ಬೆಲೆ ಭದ್ರತೆ ಒದಗಿಸಿ: ಕುಂದಗೋಳ ಮತಕ್ಷೇತ್ರದ ಶಾಸಕ ಎಂ ಆರ್ ಪಾಟೀಲ್ ಸದನದಲ್ಲಿ ಬಲವಾದ ಆಗ್ರಹ

ಕುಂದಗೋಳ:ವಿಧಾನಸಭೆ ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ರೈತರ ಸಂಕಷ್ಟ ನಿವಾರಣೆ ಕುರಿತು ಕುಂದಗೋಳ ಶಾಸಕ ಎಮ್. ಆರ್. ಪಾಟೀಲ್ ಅವರು ಶುಕ್ರವಾರ ಚಳಿಗಾಲದ ಅಧಿವೇಶನದಲ್ಲಿಈ ಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಗಂಭೀರ ವಿಷಯಗಳನ್ನು ಪ್ರಸ್ತಾಪಿಸಿದರು. ರಸ್ತೆ ಕೊರತೆ, ಬೆಳೆ ನಷ್ಟದ ಸಂಕಷ್ಟಉತ್ತರ ಕರ್ನಾಟಕವು ಪ್ರಧಾನವಾಗಿ ಕೃಷಿ ಮತ್ತು ಉದ್ದಿಮೆ ಆಧಾರಿತ ಪ್ರದೇಶವಾಗಿದೆ. ಇಲ್ಲಿ ಕಪ್ಪು ಭೂಮಿ ಹೇರಳವಾಗಿದ್ದರೂ, ಉತ್ತಮ ಬೆಳೆ ಬಂದರೂ ಅದನ್ನು ಮಾರುಕಟ್ಟೆಗೆ ಸಾಗಿಸಲು ರಸ್ತೆಗಳು ಇಲ್ಲದಿರುವುದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಹಿಂದೆ ಇದ್ದ…

Read More

ಅಟಲ್‍ಜೀ ಜನಸ್ನೇಹಿ ಕೇಂದ್ರಗಳಿಗೆ ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕ: ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಅರ್ಜಿ ಆಹ್ವಾನ

​ಧಾರವಾಡ, ಡಿ. 12: ಧಾರವಾಡ ಜಿಲ್ಲೆಯ ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಡಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಪೂರೈಸಲು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಈ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ಕುರಿತು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ. ಅರ್ಹತೆ ಮತ್ತು ಆಸಕ್ತಿ ಇರುವ ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳು ಈ ಟೆಂಡರ್ ಪ್ರಕ್ರಿಯೆಯಲ್ಲಿ…

Read More