ಪಂ. ಜಾಲೀಹಾಳ ಶ್ರೀನಿವಾಸಾಚಾರ್ಯರ ಪುಣ್ಯ ಸ್ಮರಣೆ: ಕಾಶಿಯಿಂದ 3 ದಿನಗಳ ಆನ್‌ಲೈನ್ ಗೀತಾ ಜ್ಞಾನ ಯಜ್ಞ

​ಧಾರವಾಡ:ಪಂಡಿತರಾಜ ಜಾಲೀಹಾಳ ಶ್ರೀನಿವಾಸಾಚಾರ್ಯರ 45ನೇ ವರ್ಷದ ಪುಣ್ಯತಿಥಿ ಹಾಗೂ ಶ್ರೀ ಗೀತಾ ಜಯಂತಿ ನಿಮಿತ್ತ ಮೂರು ದಿನಗಳ ಕಾಲ ‘ಶ್ರೀ ಭಗವದ್ಗೀತಾ ಜ್ಞಾನ ಯಜ್ಞ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾಶೀ ಕ್ಷೇತ್ರದ ವಾರಣಾಸಿಯ ಪಂ. ಸುಕೇಶಾಚಾರ್ಯ ಜಾಲೀಹಾಳ ಅವರು ನಾಳೆಯಿಂದ (ನವೆಂಬರ್ 30) ಡಿಸೆಂಬರ್ 2 ರವರೆಗೆ ಆನ್‌ಲೈನ್ ಮೂಲಕ ಉಪನ್ಯಾಸ ನೀಡಲಿದ್ದಾರೆ. ​ಈ ಮೂರು ದಿನಗಳ ಕಾಲ ಪ್ರತಿದಿನ ಸಾಯಂಕಾಲ 6:30 ರಿಂದ 7:30 ರವರೆಗೆ ಶ್ರೀ ಭಗವದ್ಗೀತೆಯ ಸಾರ ಮತ್ತು ಶ್ರೀ ಗುರು ವೈಭವ ಕಾವ್ಯ…

Read More

ಡಾ. ಎಂ.ಎಂ. ಕಲಬುರ್ಗಿ ಬದುಕು ಎಲ್ಲರಿಗಾಗಿ ಸಮರ್ಪಣೆ: ಪ್ರಾಚಾರ್ಯ ಡಾ. ಕಲ್ಲನಗೌಡರ ಅಭಿಮತ

ಧಾರವಾಡ: ಎಲ್ಲರಂತೆ ಬದುಕದೇ, ಎಲ್ಲರಿಗಾಗಿ ಬದುಕಿದ ಸಾರ್ಥಕ ಬದುಕು ಡಾ. ಎಂ.ಎಂ. ಕಲಬುರ್ಗಿಯವರದಾಗಿತ್ತು. ನಿಸ್ವಾರ್ಥ ಮನೋಭಾವದ ಅವರ ಹೃದಯ ಶ್ರೀಮಂತಿಕೆ ಎಷ್ಟು ದೊಡ್ಡದಾಗಿತ್ತೆಂದರೆ, ‘ವಿದ್ಯಾರ್ಥಿಗಳೇ ನನ್ನ ನಿಜವಾದ ವಾರಸುದಾರರು’ ಎಂಬ ಉದಾತ್ತ ಭಾವನೆಯನ್ನು ಅವರು ಹೊಂದಿದ್ದರು” ಎಂದು ಮುಳಗುಂದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಆರ್.ಎಂ. ಕಲ್ಲನಗೌಡರ ಅವರು ಅಭಿಪ್ರಾಯಪಟ್ಟರು. ​ಅವರು ಶುಕ್ರವಾರ ಧಾರವಾಡದ ಕಲ್ಯಾಣ ನಗರದ ಹಿರೇಮಲ್ಲೂರ ಈಶ್ವರನ್ ಪದವಿ ಪೂರ್ವ ಕಾಲೇಜಿನಲ್ಲಿ, ಧಾರವಾಡದ ಕವಿವ ಸಂಘವು ಆಯೋಜಿಸಿದ್ದ ಡಾ. ಎಂ.ಎಂ. ಕಲಬುರ್ಗಿ…

Read More

ಮುಂಗಾರು ಹಾನಿ: 14.24 ಲಕ್ಷ ರೈತರ ಖಾತೆಗಳಿಗೆ ₹1033.60 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆಗೆ ಸಿಎಂ ಚಾಲನೆ

ಬೆಂಗಳೂರು: ಪ್ರಸಕ್ತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ನೆರವಾಗಲು ರಾಜ್ಯ ಸರ್ಕಾರವು ಘೋಷಿಸಿದ್ದ ₹1033.60 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರದಂದು (ನ.27) ಚಾಲನೆ ನೀಡಿದರು. ಈ ಹೆಚ್ಚುವರಿ ಪರಿಹಾರ ಮೊತ್ತವನ್ನು ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಜಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ​ಸರ್ಕಾರವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ…

Read More

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಜನ್ಮದಿನ: ನೂರಕ್ಕೂ ಹೆಚ್ಚು ನಿರ್ಗತಿಕರಿಗೆ ಅಗತ್ಯ ವಸ್ತುಗಳ ವಿತರಣೆ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ ಜನ್ಮದಿನಾಚರಣೆಯ ಅಂಗವಾಗಿ ಗುರುವಾರದಂದು (ನ.27) ಹುಬ್ಬಳ್ಳಿ ನಗರದ ವಿವಿಧ ಭಾಗಗಳಲ್ಲಿ 100ಕ್ಕೂ ಹೆಚ್ಚು ಬಡ ನಿರ್ಗತಿಕರಿಗೆ ಅಗತ್ಯ ವಸ್ತುಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ​ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಈ ಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿಯ ಹಳೆಯ ಕೋರ್ಟ್ ಪಕ್ಕದಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಆವರಣ ಮತ್ತು ಶ್ರೀ ಸಿದ್ದಾರೂಢ…

Read More

ಡಾ. ಎಂ.ಎಂ. ಕಲಬುರ್ಗಿ ಸಂಸ್ಮರಣಾ ಉಪನ್ಯಾಸ ನಾಳೆ ಧಾರವಾಡದಲ್ಲಿ ಆಯೋಜನೆ

ಧಾರವಾಡ, ನವೆಂಬರ್ 27: ಕನ್ನಡದ ಶ್ರೇಷ್ಠ ಸಂಶೋಧಕ, ವಿದ್ವಾಂಸ ಡಾ. ಎಂ.ಎಂ. ಕಲಬುರ್ಗಿ ಅವರ ಸಂಸ್ಮರಣೆಯ ದತ್ತಿ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘವು ನವೆಂಬರ್ 28, 2025 ರಂದು ಹಮ್ಮಿಕೊಂಡಿದೆ. ಈ ದತ್ತಿ ಉಪನ್ಯಾಸ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಕಲ್ಯಾಣನಗರದಲ್ಲಿರುವ ಡಾ. ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ​ಪ್ರೊ. ಶಶಿಧರ ತೋಡಕರ ಅವರು ಸಂಘದಲ್ಲಿ ಸ್ಥಾಪಿಸಿದ ದತ್ತಿಯ ಅಂಗವಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ, ಮುಳಗುಂದದ ಶ್ರೀ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ…

Read More

ವಿಕಲಚೇತನತೆ ದೌರ್ಬಲ್ಯವಲ್ಲ, ವಿಶೇಷ ಚೈತನ್ಯ: ಡಾ. ಕಮಲಾ ಬೈಲೂರ

ಧಾರವಾಡ: ವಿಕಲಚೇತನತೆಯು ದೌರ್ಬಲ್ಯವಲ್ಲ, ಬದಲಿಗೆ ಅವರಲ್ಲಿ ವಿಶೇಷ ಚೈತನ್ಯ ಮತ್ತು ಕೌಶಲ್ಯ ಅಡಗಿದೆ. ಅವರು ಆತ್ಮಸ್ಥೈರ್ಯದಿಂದ ಸಾಧನೆಗೆ ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಅವರು ಕರೆ ನೀಡಿದರು. ​ಅವರು ಗುರುವಾರದಂದು (ನ.27) ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರ ಕ್ರೀಡಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹು-ಧಾ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ…

Read More

ರೈತರಿಗೆ ಬಿಗ್ ರಿಲೀಫ್: ಪರಿಹಾರ ಮೊತ್ತವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಡಿ – ಬ್ಯಾಂಕ್‌ಗಳಿಗೆ ಡಿಸಿ ದಿವ್ಯ ಪ್ರಭು ಖಡಕ್ ಸೂಚನೆ

ಧಾರವಾಡ: ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ಹಾನಿಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ರೈತರ ಖಾತೆಗಳಿಗೆ ಜಮೆಯಾಗುವ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ​ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ ಮತ್ತು ಆಲಿಕಲ್ಲು ಮಳೆಯಂತಹ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿ ಅನುಭವಿಸಿದ ಅರ್ಹ ರೈತ ಫಲಾನುಭವಿಗಳಿಗೆ ನಿಯಮಾನುಸಾರ ಬರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ…

Read More

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧನಸಹಾಯಕ್ಕೆ ಅರ್ಜಿ ಆಹ್ವಾನ: ಡಿ. 30 ಕೊನೆಯ ದಿನ

ಧಾರವಾಡ: ರಾಜ್ಯಾದ್ಯಂತ ಮತ್ತು ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸಲು ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಧನಸಹಾಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ​ಅಲ್ಲದೆ, ಸ್ಥಳೀಯ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ, ಮತ್ತು ಚಿತ್ರಕಲೆ, ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡುವ ಉದ್ದೇಶದಿಂದಲೂ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಈ ಎಲ್ಲ ಸಹಾಯಧನ ಯೋಜನೆಗಳಿಗೆ 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ…

Read More

ಸಂವಿಧಾನ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ

​ಧಾರವಾಡ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಧಾರವಾಡ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಭಿಯೋಜನೆ ಇಲಾಖೆ ಹಾಗೂ ಧಾರವಾಡ ವಕೀಲರ ಸಂಘದ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಬುದುವಾರದಂದು (ನವೆಂಬರ್ 26) ನಡೆದ ಸಂವಿಧಾನ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ​ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು….

Read More

ಧಾರವಾಡ ಜಿಲ್ಲೆಯ ರೈತರಿಗೆ ಸಿಎಂ ವಿಶೇಷ ಪ್ಯಾಕೇಜ್ ಬಂಪರ್: ₹63.77 ಕೋಟಿ ಪರಿಹಾರ ಡಿಬಿಟಿ ಮೂಲಕ ಜಮೆ

ಧಾರವಾಡ: ಆಗಸ್ಟ್ 2025ರ ಮಾಹೆಯಲ್ಲಿ ಅತಿವೃಷ್ಠಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಬೃಹತ್ ಪರಿಹಾರವನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಇಂದೇ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಪ್ರತಿ ಹೆಕ್ಟೇರ್‌ಗೆ…

Read More