ಕುಂದಗೋಳ ತಾ.ಪಂ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿ ಬೇಕೇ?ಚರಂಡಿಗಿಂತ ಕಡೆಯಾದ ಸರ್ಕಾರಿ ಕಚೇರಿಗಳ ಸ್ಥಿತಿ ಕಂಡು ಸಾರ್ವಜನಿಕರ ಆಕ್ರೋಶ!
ಕುಂದಗೋಳ:ತಾಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ಸಂಕೀರ್ಣ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ಹಾಗೂ ಅಲ್ಲಿಗೆ ಬರುವ ಸಾರ್ವಜನಿಕರು ಕಲುಷಿತ ನೀರಿನಿಂದ ರೋಗಪೀಡಿತರಾಗುವ ಭೀತಿಯಲ್ಲಿದ್ದಾರೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಭವ್ಯ ಕಟ್ಟಡವು, ಸಮರ್ಪಕ ನಿರ್ವಹಣೆಯಿಲ್ಲದೆ ಇದೀಗ ರೋಗಗಳ ಕಾರ್ಖಾನೆಯಾಗಿ ಪರಿವರ್ತನೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾದ ತಾಲೂಕು ಪಂಚಾಯಿತಿ ವ್ಯಾಪ್ತಿಯ ಈ ಸರ್ಕಾರಿ ಸಂಕೀರ್ಣದಲ್ಲಿ ಅರಣ್ಯ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ…

