ನಶೆ ಮುಕ್ತ ಅವಳಿ ನಗರಕ್ಕೆ ಪೊಲೀಸ್ ಸಮರ: ಡ್ರಗ್ಸ್ ಸೇವನೆಕೋರರಿಗೆ ಬಿಗ್ ಶಾಕ್!

​ವರದಿ: ವಿನಾಯಕ ಗುಡ್ಡದಕೇರಿ ಧಾರವಾಡ/ಹುಬ್ಬಳ್ಳಿ: ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಪೊಲೀಸ್ ಇಲಾಖೆಯು ‘ಆಪರೇಷನ್ ಕ್ಲೀನ್’ (Operation Clean) ಆರಂಭಿಸಿದೆ. ಇತ್ತಿಚ್ಚಿಗೆ ನಗರದಾದ್ಯಂತ ಪೊಲೀಸ್ ಇಲಾಖೆ ನಡೆಸಿದ ಬಿಗಿ ಡ್ರಿಲ್ ಕಾರ್ಯಾಚರಣೆಯು ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುತ್ತಿದ್ದವರ ನಿದ್ದೆಗೆಡಿಸಿದೆ. ​💉 ನೂರಾರು ಶಂಕಿತರಿಗೆ ಮೆಡಿಕಲ್ ಟೆಸ್ಟ್ ​ಅವಳಿ ನಗರದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಡ್ರಗ್ಸ್ ಸೇವನೆ ಅಥವಾ ಮಾರಾಟದ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನ ಹೊಂದಿರುವವರನ್ನು ಪೊಲೀಸರು ಮುಂಜಾನೆಯೇ ವಶಕ್ಕೆ…

Read More

ರೌಡಿಶೀಟರ್‌ಗಳ ಜೊತೆ ಪಿಎಸ್‌ಐ ಬರ್ತಡೇ ಆಚರಣೆ: ವಿಶ್ವಾಸಾರ್ಹತೆ ಕುರಿತು ತೀವ್ರ ಚರ್ಚೆ

​ಧಾರವಾಡ: ನಗರದ ಉಪನಗರ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ರುದ್ರಪ್ಪ ಗುಡದರಿ ಅವರು ರೌಡಿಶೀಟರ್‌ಗಳು ಮತ್ತು ಎನ್‌ಡಿಪಿಎಸ್ (ಮಾದಕ ವಸ್ತುಗಳ ಕಾಯಿದೆ) ಪ್ರಕರಣಗಳ ಆರೋಪಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆಯ ವಿಶ್ವಾಸಾರ್ಹತೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ​ಕೃಷಿ ವಿಶ್ವವಿದ್ಯಾಲಯದ ಸಮೀಪವಿರುವ ಒಂದು ಖಾಸಗಿ ಹೋಟೆಲ್‌ನಲ್ಲಿ ಈ ಜನ್ಮದಿನದ ಆಚರಣೆ ನಡೆದಿದೆ ಎಂದು ವರದಿಯಾಗಿದೆ. ಸಮಾಜದಲ್ಲಿ ಶಾಂತಿ…

Read More

ಮನಸ್ಸಿನ ಆರೋಗ್ಯಕ್ಕೆ ಸಂಗೀತ ಅಗತ್ಯ: ಡಾ. ಎಂ. ಎಸ್. ಪಾಟೀಲ

ಧಾರವಾಡ: ಮನಸ್ಸಿನ ಖಿನ್ನತೆ ಮತ್ತು ಆತಂಕವನ್ನು ನಿವಾರಿಸಿ, ಮನಸ್ಸನ್ನು ಆರೋಗ್ಯದಾಯಕವಾಗಿಡಲು ಸಂಗೀತವು ಅತ್ಯಗತ್ಯವಾಗಿದೆ. ಸಂಗೀತ ಹಾಗೂ ನೃತ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕೃಷಿ ವಿಜ್ಞಾನಿ ಡಾ. ಎಂ. ಎಸ್. ಪಾಟೀಲ ಅವರು ಅಭಿಪ್ರಾಯಪಟ್ಟರು. ​ಅವರು ಗುರುವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಗೀತಕ್ಕೆ ಇತ್ತೀಚಿನದಲ್ಲದ ೫ ಸಾವಿರ ವರ್ಷಗಳ ಸುದೀರ್ಘ ಇತಿಹಾಸವಿದೆ. ಸಾಮವೇದದಲ್ಲಿಯೂ ಸಂಗೀತದ ಉಲ್ಲೇಖವಿದ್ದು, ಮನುಷ್ಯನ ಮನರಂಜನೆಗೆ ಇದು ಬೇಕೇಬೇಕು. ನಾಗರಿಕತೆ ಪ್ರಾರಂಭವಾದಾಗಲೇ ಸಂಗೀತವು…

Read More

ವಿಕಲಚೇತನರ ದಿನಾಚರಣೆ–2025: ನ.27 ಮತ್ತು 28ರಂದು ಮಕ್ಕಳಿಗೆ, ಪುನರ್ವಸತಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಕ್ರೀಡಾಕೂಟ

ಧಾರವಾಡ, ನ.20: ವಿಶ್ವ ವಿಕಲಚೇತನರ ದಿನಾಚರಣೆ–2025 ಅಂಗವಾಗಿ ಧಾರವಾಡ ಜಿಲ್ಲೆಯ ವಿಕಲಚೇತನ ಮಕ್ಕಳಿಗೆ, ಪುನರ್ವಸತಿ ಕಾರ್ಯಕರ್ತರಿಗೆ ಹಾಗೂ ವಿಕಲಚೇತನ ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷ ಶಾಲೆಗಳ ಮಕ್ಕಳಿಗಾಗಿ ಕ್ರೀಡಾಕೂಟವನ್ನು ನವೆಂಬರ್ 27, 2025ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಹಾಗೂ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರು ಮತ್ತು ವಿಕಲಚೇತನ ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ನವೆಂಬರ್ 28, 2025ರಂದು ಇದೇ ವೇಳೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಎರಡೂ ದಿನಗಳ…

Read More

ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ಅಳವಡಿಸಿಕೊಂಡು ಎಲ್ಲರೂ ವರ್ಗಾವಣೆ ಆಗಬೇಕು: ಕೇಂದ್ರ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ

ಧಾರವಾಡ, ನ.20: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ‘ಡಿಜಿಟಲ್ ಇಂಡಿಯಾ’ ಅಭಿಯಾನವನ್ನು ಜೀವನ ಮತ್ತು ವ್ಯವಹಾರಗಳಲ್ಲಿ ಎಲ್ಲರೂ ಅಳವಡಿಸಿಕೊಂಡಾಗ ಮಾತ್ರ ಅದು ನಿಜಾರ್ಥದಲ್ಲಿ ಯಶಸ್ವಿಯಾಗುತ್ತದೆ ಎಂದು ಕೇಂದ್ರ ಸರ್ಕಾರದ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ ಹೇಳಿದರು. ನಗರದ ಭಾರತೀಯ ಸ್ಟೇಟ್ ಬ್ಯಾಂಕ್ ಮುಖ್ಯಶಾಖೆಯಲ್ಲಿ ನಿವೃತ್ತಿದಾರರಿಗಾಗಿ ಕೇಂದ್ರ ಸರ್ಕಾರದಿಂದ ಪರಿಚಯಿಸಲ್ಪಟ್ಟ ನೂತನ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಈಗ ಜನರು ಎಲ್ಲಿಂದಲಾದರೂ ರೈಲ್ವೆ ಟಿಕೆಟ್ ಬುಕ್…

Read More

ಪೊಲೀಸರ ಒತ್ತಡಕ್ಕೆ ಕ್ರೀಡೆ, ವ್ಯಾಯಾಮ ಪರಿಹಾರ : ಪ್ರತಿ ದಿನ ಹೊಸ ಚೈತನ್ಯ ನೀಡುತ್ತದೆ — ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ

ಧಾರವಾಡ, ನ.20: “ಪೊಲೀಸರು ದಿನವೂ ಒತ್ತಡಭರಿತ ಪರಿಸ್ಥಿತಿಗಳನ್ನು ಎದುರಿಸುವುದು ಸಾಮಾನ್ಯ. ಇಂತಹ ಒತ್ತಡವನ್ನು ಕಡಿಮೆ ಮಾಡುವ ಉತ್ತಮ ಮಾರ್ಗಗಳಲ್ಲಿ ಕ್ರೀಡೆ ಹಾಗೂ ವ್ಯಾಯಾಮಗಳು ಪ್ರಮುಖ. ಕ್ರೀಡೆಗಳು ಪ್ರತಿದಿನ ಮನಸ್ಸಿಗೆ ಹೊಸ ಚೈತನ್ಯ ಮತ್ತು ಸಂತಸ ನೀಡುತ್ತವೆ,” ಎಂದು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ಹೇಳಿದರು. ಅವರು ಬುಧವಾರ ಬೆಳಿಗ್ಗೆ ಧಾರವಾಡ ಪೊಲೀಸ್ ಹೆಡ್‌ಕ್ವಾರ್ಟರ್ಸ್‌ನ ಡಿಎಆರ್ ಪರೇಡ್ ಮೈದಾನದಲ್ಲಿ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು…

Read More

ಕೃಷಿ ವಿಶ್ವವಿದ್ಯಾಲಯದಲ್ಲಿ ದಲಿತ ನೌಕರರಿಗೆ ಕಿರುಕುಳ: ದಲಿತ ಸಂಘರ್ಷ ಸಮಿತಿ ಖಂಡನೆ, ವಜಾಗೆ ಒಂದು ವಾರ ಗಡುವು

ಧಾರವಾಡ: ವಿದ್ಯಾಕಾಶಿ ಎಂದೇ ಪ್ರಸಿದ್ಧವಾದ ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಲ್ಲಿ (ಎಯುಡಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಶೋಷಿತ ವರ್ಗದ ನೌಕರರನ್ನು ಗುರಿಯಾಗಿಸಿಕೊಂಡು ನಿರಂತರ ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡುತ್ತಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ರವಿಕುಮಾರ ಮಾಳಿಗೇರ ಅವರ ಗೂಂಡಾವರ್ತನೆ ಮತ್ತು ಹಿಟ್ಲರ್ ಸಂಸ್ಕೃತಿಯನ್ನು ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ತೀವ್ರವಾಗಿ ಖಂಡಿಸಿದೆ. ​ಆರೋಪಿ ರವಿಕುಮಾರ ಮಾಳಿಗೇರ ಅವರು ಶೋಷಿತ ವರ್ಗದ…

Read More

ಕನ್ನಡದ ಮೊಟ್ಟ ಮೊದಲ ಸಾಹಿತ್ಯಕ ಪತ್ರಿಕೆ ‘ವಾಗ್ಭೂಷಣ’ ಪುನರಾರಂಭ ಸಂಘದ ಹೆಗ್ಗಳಿಕೆ: ಶಂಕರ ಹಲಗತ್ತಿ

ಧಾರವಾಡ: ಕನ್ನಡದ ಮೊಟ್ಟಮೊದಲ ಸಾಹಿತ್ಯಕ ಪತ್ರಿಕೆಯಾಗಿ 1896ರಲ್ಲಿ ಪ್ರಾರಂಭಗೊಂಡ ‘ವಾಗ್ಭೂಷಣ’ ಪತ್ರಿಕೆಯನ್ನು ಕಾಲಾಂತರದಲ್ಲಿ ನಿಂತುಹೋಗಿದ್ದರೂ ಮತ್ತೆ ಪ್ರಾರಂಭಿಸಿದ್ದು ಕರ್ನಾಟಕ ವಿದ್ಯಾವರ್ಧಕ ಸಂಘದ (ಕವಿವ ಸಂಘ) ವಿನೂತನ ಸಾಧನೆಯಾಗಿದೆ ಎಂದು ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ 18ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ​ವಾಗ್ಭೂಷಣ ಪತ್ರಿಕೆ ಮೂವತ್ತೈದು ವರ್ಷಗಳ ಕಾಲ ಪ್ರಕಟಣೆಗೊಂಡು ಕನ್ನಡ ಸಾಹಿತ್ಯ ಲೋಕದಲ್ಲಿ ಮೈಲುಗಲ್ಲಾಗಿ ನಿಂತಿದೆ. ಹಿಂದಿನ ವಾಗ್ಭೂಷಣ ಪತ್ರಿಕೆಗಳನ್ನು…

Read More

ನಿರ್ದಿಷ್ಟ ಗುರಿ, ಛಲದಿಂದ ಜಗತ್ತನ್ನೇ ಗೆಲ್ಲಲು ಸಾಧ್ಯ: ಪ್ರೊ. ಎಂ.ವೈ. ಸಾವಂತ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ನಿರ್ದಿಷ್ಟ ಗುರಿಯೊಂದಿಗೆ ಜೀವನದಲ್ಲಿ ಸಫಲತೆಯನ್ನು ಸಾಧಿಸಬಹುದು ಎಂದು ಖ್ಯಾತ ಮೋಡಿ ಲಿಪಿ ತಜ್ಞರಾದ ಪ್ರೊ. ಎಂ. ವೈ. ಸಾವಂತ ಅವರು ಅಭಿಪ್ರಾಯಪಟ್ಟರು. ಬುದುವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘ (ಕ.ವಿ.ವ ಸಂಘ)ದಲ್ಲಿ ಆಯೋಜಿಸಲಾಗಿದ್ದ “ಧರೆಗೆ ದೊಡ್ಡವರು” ಕಾರ್ಯಕ್ರಮದಲ್ಲಿ ಕಿಟೆಲ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ​ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಸುಮ್ಮನೆ ಸಿಗುವುದಿಲ್ಲ. ಅದಕ್ಕೆ ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ ಹಾಗೂ ನಿರಂತರತೆ…

Read More

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ: ಮಿದುಳು ತಿನ್ನುವ ಅಮೀಬಾ ಕುರಿತ ಆರೋಗ್ಯ ಇಲಾಖೆಯ ಮುನ್ನೆಚ್ಚರಿಕೆ ಮಾರ್ಗಸೂಚಿ

ಧಾರವಾಡ, ನ.19: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಎಂಬ ಮಿದುಳನ್ನು ದಾಳಿ ಮಾಡುವ ಅಮೀಬಾದಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಶಬರಿಮಲೆ ಯಾತ್ರೆಗೆ ತೆರಳುವ ರಾಜ್ಯದ ಭಕ್ತರು ಹೆಚ್ಚಿದ ಜಾಗ್ರತೆ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಎಚ್ಚರಿಕೆ ಜಾರಿ ಮಾಡಿದೆ. ನೇಗ್ಲೇರಿಯಾ ಫೌಲೇರಿ ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ನಿಂತ ನೀರು, ಕೊಳಗಳು, ಈಜುಕೊಳಗಳು ಮತ್ತು ಕೆರೆಗಳು…

Read More