ವಿಕಲಚೇತನತೆ ದೌರ್ಬಲ್ಯವಲ್ಲ, ವಿಶೇಷ ಚೈತನ್ಯ: ಡಾ. ಕಮಲಾ ಬೈಲೂರ

ಧಾರವಾಡ: ವಿಕಲಚೇತನತೆಯು ದೌರ್ಬಲ್ಯವಲ್ಲ, ಬದಲಿಗೆ ಅವರಲ್ಲಿ ವಿಶೇಷ ಚೈತನ್ಯ ಮತ್ತು ಕೌಶಲ್ಯ ಅಡಗಿದೆ. ಅವರು ಆತ್ಮಸ್ಥೈರ್ಯದಿಂದ ಸಾಧನೆಗೆ ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಅವರು ಕರೆ ನೀಡಿದರು. ​ಅವರು ಗುರುವಾರದಂದು (ನ.27) ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರ ಕ್ರೀಡಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹು-ಧಾ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ…

Read More

ರೈತರಿಗೆ ಬಿಗ್ ರಿಲೀಫ್: ಪರಿಹಾರ ಮೊತ್ತವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಡಿ – ಬ್ಯಾಂಕ್‌ಗಳಿಗೆ ಡಿಸಿ ದಿವ್ಯ ಪ್ರಭು ಖಡಕ್ ಸೂಚನೆ

ಧಾರವಾಡ: ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ಹಾನಿಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ರೈತರ ಖಾತೆಗಳಿಗೆ ಜಮೆಯಾಗುವ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ​ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ ಮತ್ತು ಆಲಿಕಲ್ಲು ಮಳೆಯಂತಹ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿ ಅನುಭವಿಸಿದ ಅರ್ಹ ರೈತ ಫಲಾನುಭವಿಗಳಿಗೆ ನಿಯಮಾನುಸಾರ ಬರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ…

Read More

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧನಸಹಾಯಕ್ಕೆ ಅರ್ಜಿ ಆಹ್ವಾನ: ಡಿ. 30 ಕೊನೆಯ ದಿನ

ಧಾರವಾಡ: ರಾಜ್ಯಾದ್ಯಂತ ಮತ್ತು ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸಲು ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಧನಸಹಾಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ​ಅಲ್ಲದೆ, ಸ್ಥಳೀಯ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ, ಮತ್ತು ಚಿತ್ರಕಲೆ, ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡುವ ಉದ್ದೇಶದಿಂದಲೂ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಈ ಎಲ್ಲ ಸಹಾಯಧನ ಯೋಜನೆಗಳಿಗೆ 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ…

Read More

ಸಂವಿಧಾನ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ

​ಧಾರವಾಡ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಧಾರವಾಡ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಭಿಯೋಜನೆ ಇಲಾಖೆ ಹಾಗೂ ಧಾರವಾಡ ವಕೀಲರ ಸಂಘದ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಬುದುವಾರದಂದು (ನವೆಂಬರ್ 26) ನಡೆದ ಸಂವಿಧಾನ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ​ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು….

Read More

ಧಾರವಾಡ ಜಿಲ್ಲೆಯ ರೈತರಿಗೆ ಸಿಎಂ ವಿಶೇಷ ಪ್ಯಾಕೇಜ್ ಬಂಪರ್: ₹63.77 ಕೋಟಿ ಪರಿಹಾರ ಡಿಬಿಟಿ ಮೂಲಕ ಜಮೆ

ಧಾರವಾಡ: ಆಗಸ್ಟ್ 2025ರ ಮಾಹೆಯಲ್ಲಿ ಅತಿವೃಷ್ಠಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಬೃಹತ್ ಪರಿಹಾರವನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಇಂದೇ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಪ್ರತಿ ಹೆಕ್ಟೇರ್‌ಗೆ…

Read More

ಸಂಚಾರಿ ನಿಯಮ ಉಲ್ಲಂಘನೆ ದಂಡದಲ್ಲಿ ಶೇ. 50 ರಿಯಾಯಿತಿ ಸೌಲಭ್ಯ ಬಳಸಿಕೊಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ

. 12 ರವರೆಗೆ ಅವಕಾಶ; ಬಾಕಿ ಇರುವ ಪ್ರಕರಣ ಇತ್ಯರ್ಥಕ್ಕೆ ಸಾರ್ವಜನಿಕರಿಗೆ ಮನವಿ ​ಧಾರವಾಡ: ನವೆಂಬರ್ 26: ವಿವಿಧ ರೀತಿಯ ಸಂಚಾರ ವಾಹನಗಳ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ವಿಧಿಸಿದ ದಂಡದ ಮೊತ್ತದಲ್ಲಿ ರಾಜ್ಯ ಸರ್ಕಾರವು ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು, ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವವರು ಈ ಅವಕಾಶವನ್ನು ಬಳಸಿಕೊಂಡು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ಗಳಲ್ಲಿನ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ ಅವರು…

Read More

ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವೇ ನಮ್ಮ ಸಂವಿಧಾನದ ಅಡಿಪಾಯ: ಸಭಾಪತಿ ಬಸವರಾಜ ಹೊರಟ್ಟಿ

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕರೆ; ಸಂವಿಧಾನ ನಮ್ಮ ದೇಶದ ಆತ್ಮ, ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕು ​ಧಾರವಾಡ: ನವೆಂಬರ್ 26: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದಾಗಿದ್ದು, ಅದು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ರಚನೆಯಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ​ಅವರು ಬುದುವಾರದಂದು (ನ.26) ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ…

Read More

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 42 ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಸೆಂಬರ್ 2 ಮತ್ತು 3 ರಂದು ನೇರ ಸಂದರ್ಶನ; ಕಂಪ್ಯೂಟರ್ ಸಾಕ್ಷರತಾ ಪ್ರಮಾಣಪತ್ರ ಕಡ್ಡಾಯ ​ಧಾರವಾಡ: ನವೆಂಬರ್ 26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಖಾಲಿ ಉಳಿದಿರುವ ಮತ್ತು 2025-26 ನೇ ಸಾಲಿನ ಆರ್.ಓ.ಪಿ. (ROP) ಯಲ್ಲಿ ಅನುಮೋದನೆಯಾಗಿರುವ ಒಟ್ಟು 42 ತಾತ್ಕಾಲಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ರಾಷ್ಟ್ರೀಯ ಆರೋಗ್ಯ ಅಭಿಯಾನದ…

Read More

ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ: ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ

​ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ನೇಮಕಾತಿ; ಡಿ. 12 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ ​ಧಾರವಾಡ: ನವೆಂಬರ್ 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹುಬ್ಬಳ್ಳಿ-ಧಾರವಾಡ (ಶಹರ) ದಲ್ಲಿ ತೆರವಾದ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಈ ನೇಮಕಾತಿ ಪ್ರಕ್ರಿಯೆ…

Read More

ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ: ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ

ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ನೇಮಕಾತಿ; ಡಿ. 12 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ ​ಧಾರವಾಡ: ನವೆಂಬರ್ 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹುಬ್ಬಳ್ಳಿ-ಧಾರವಾಡ (ಶಹರ) ದಲ್ಲಿ ತೆರವಾದ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಈ ನೇಮಕಾತಿ ಪ್ರಕ್ರಿಯೆ…

Read More