ಖಾಲಿ ಚೀಲದ ಕೊರತೆ: ಕುಂದಗೋಳದಲ್ಲಿ ಕಡಲೆ ಖರೀದಿ ಕೇಂದ್ರಗಳ ಅವ್ಯವಸ್ಥೆ – ರೈತರ ಅನ್ನಕ್ಕೆ ಕಲ್ಲು ಹಾಕುತ್ತಿರುವ ಅಧಿಕಾರಿಗಳ ಉದಾಸೀನ!

ಕುಂದಗೋಳ: ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಗಲೆಂದು ಸರ್ಕಾರ ಆರಂಭಿಸಿರುವ ಬೆಂಬಲ ಬೆಲೆ ಖರೀದಿ ಕೇಂದ್ರಗಳು, ಇಂದು ಅಧಿಕಾರಿಗಳ ಮತ್ತು ವ್ಯವಸ್ಥೆಯ ದಾರಿದ್ರ್ಯಕ್ಕೆ ಸಾಕ್ಷಿಯಾಗಿವೆ. ಕುಂದಗೋಳ ತಾಲೂಕಿನಾದ್ಯಂತ ಚೀಲಗಳ ಕೊರತೆಯಿಂದ ಕಡಲೆ ಖರೀದಿ ಪ್ರಕ್ರಿಯೆ ಹಳ್ಳ ಹಿಡಿದಿದ್ದು, ಅನ್ನದಾತ ಬೀದಿಯಲ್ಲಿ ನಿಂತು ಕಣ್ಣೀರು ಹಾಕುವಂತಾಗಿದೆ. ಬಿಸಿಲಿನಲ್ಲಿ ಬೆಂದ ರೈತ – ಟ್ರ್ಯಾಕ್ಟರ್ ಬಾಡಿಗೆಗೆ ಕುತ್ತು!ತಾಲೂಕಿನ ಕುಂದಗೋಳ, ಯಲಿವಾಳ, ಸಂಶಿ ಹಾಗೂ ಯರಗುಪ್ಪಿ ಖರೀದಿ ಕೇಂದ್ರಗಳಿಗೆ ರೈತರು ಸಾಲ-ಸೋಲ ಮಾಡಿ ಟ್ರ್ಯಾಕ್ಟರ್‌ಗಳಲ್ಲಿ ಕಡಲೆ ಹೊತ್ತು ತರುತ್ತಿದ್ದಾರೆ. ಆದರೆ,…

Read More

​ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರ ಪರ ನಿಂತ ಸಚಿವ ಸಂತೋಷ ಲಾಡ್: ಬೇಡಿಕೆ ಈಡೇರಿಸುವ ಭರವಸೆ

ಧಾರವಾಡ: ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ, ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ​ಜನಸಂಖ್ಯೆ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾಗೊಳಿಸುವ ಕ್ರಮವನ್ನು ಕೈಬಿಡಬೇಕು…

Read More

ಧಾರವಾಡ ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಸ್ವಯಂ ಜನಗಣತಿ ಕಾರ್ಯ ಆರಂಭ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ

ಧಾರವಾಡ: ಭಾರತದ 16ನೇ ಜನಗಣತಿಯ ಅಂಗವಾಗಿ ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ಸ್ವಯಂ ಗಣತಿ (Self Enumeration) ಕಾರ್ಯ ಜರುಗಲಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಜನಗಣತಿಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ​ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2027ರ ಭಾರತ ಜನಗಣತಿಯ ಮೊದಲ ಹಂತವಾಗಿ ಈ ಕಾರ್ಯ ನಡೆಯುತ್ತಿದೆ….

Read More

ಧಾರವಾಡ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ ಆರ್ಭಟ: ರೈತರ ಹಿತರಕ್ಷಣೆಗೆ ನಿಂತ ಸಚಿವ ಸಂತೋಷ್ ಲಾಡ್; ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಕಟ್ಟುನಿಟ್ಟಿನ ಆದೇಶ

ಧಾರವಾಡ: ಮಾರ್ಚ್ ಮೂರನೇ ವಾರದಲ್ಲಿ ಕಲಘಟಗಿ ಹಾಗೂ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ಆಗಿರುವ ಅನಿರೀಕ್ಷಿತ ಆಲಿಕಲ್ಲು ಮಳೆಯಿಂದ ಉಂಟಾಗಿರುವ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕು ಮತ್ತು ನಿಯಮಾನುಸಾರ ರೈತರಿಗೆ ಪರಿಹಾರ ನೀಡಲು ಕ್ರಮವಹಿಸಬೇಕೆಂದು ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ…

Read More

ಧಾರವಾಡ: ಅಕ್ರಮ ಚಟುವಟಿಕೆಗಳಿಗೆ ಪೊಲೀಸರ ಫಂಡಿಂಗ್ – ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸ್ಫೋಟಕ ಆರೋಪ

ಧಾರವಾಡ: ಕಿತ್ತೂರಿನ ಐ.ಬಿ.ಯಲ್ಲಿ ಮಂಗಳವಾರ ದಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ತೀವ್ರ ಸಂಚಲನಕ್ಕೆ ಕಾರಣವಾಯಿತು. ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ವೇಳೆ, ಧಾರವಾಡ ಗ್ರಾಮೀಣ ಭಾಗದ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರುವ ಮೂಲಕ ಅಧಿಕಾರಿಗಳಿಗೆ ಚಾಟಿ ಬೀಸಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಲಾಖೆಯ ಒಳಗಿನ ಕರಾಳ ಮುಖವನ್ನು…

Read More

​ಧಾರವಾಡ: ಅಕ್ರಮ ಚಟುವಟಿಕೆಗಳಿಗೆ ಪೊಲೀಸರ ಫಂಡಿಂಗ್ – ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸ್ಫೋಟಕ ಆರೋಪ

ಧಾರವಾಡ: ಕಿತ್ತೂರಿನ ಐ.ಬಿ.ಯಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ತೀವ್ರ ಸಂಚಲನಕ್ಕೆ ಕಾರಣವಾಯಿತು. ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ವೇಳೆ, ಧಾರವಾಡ ಗ್ರಾಮೀಣ ಭಾಗದ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರುವ ಮೂಲಕ ಅಧಿಕಾರಿಗಳಿಗೆ ಚಾಟಿ ಬೀಸಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಲಾಖೆಯ ಒಳಗಿನ ಕರಾಳ ಮುಖವನ್ನು ಸಭೆಯಲ್ಲಿ…

Read More

ಸಹಕಾರ ಕ್ಷೇತ್ರವು ಕೇವಲ ಲಾಭಕ್ಕಾಗಿ ಅಲ್ಲ, ಜನಸೇವೆಗಾಗಿ ಇದೆ: ಎ.ಬಿ. ಉಪ್ಪಿನ ಪ್ರತಿಪಾದನೆ

ಧಾರವಾಡ:ಸಹಕಾರ ಕ್ಷೇತ್ರವು ಕೇವಲ ಆರ್ಥಿಕ ಲಾಭ ಗಳಿಸುವ ಉದ್ದೇಶಕ್ಕೆ ಸೀಮಿತವಾಗಿಲ್ಲ, ಬದಲಿಗೆ ಅದು ಸಾಮಾನ್ಯ ಜನರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಇರುವ ಒಂದು ಅದ್ಭುತ ವೇದಿಕೆಯಾಗಿದೆ ಎಂದು ಸಂಶಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎ.ಬಿ. ಉಪ್ಪಿನ ಅಭಿಪ್ರಾಯಪಟ್ಟರು. ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ಶ್ರೀ ಮೃತ್ಯುಂಜಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ…

Read More

​ಕುಂದಗೋಳ ತಹಶೀಲ್ದಾರ್ ವಾಹನಕ್ಕೆ ಇಲ್ಲ ನಂಬರ್ ಪ್ಲೇಟ್:

ಕುಂದಗೋಳ: ಸಾರ್ವಜನಿಕರು ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಣ್ಣ ತಪ್ಪು ಮಾಡಿದರೂ ದಂಡ ವಿಧಿಸುವ ಅಧಿಕಾರಿಗಳು, ತಾವೇ ನಿಯಮ ಉಲ್ಲಂಘಿಸಿದರೆ ಕೇಳುವವರು ಯಾರು? ಕುಂದಗೋಳ ಪಟ್ಟಣದ ತಹಶೀಲ್ದಾರರಿಗೆ ಸರ್ಕಾರದಿಂದ ಹೊಸ ವಾಹನ ಮಂಜೂರಾಗಿ ಎರಡು-ಮೂರು ತಿಂಗಳು ಕಳೆದಿದ್ದರೂ, ಈವರೆಗೂ ಅದಕ್ಕೆ ಅಧಿಕೃತ ನೋಂದಣಿ ಸಂಖ್ಯೆ (Registration Number) ಸಿಕ್ಕಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ​ಆರ್.ಟಿ.ಓ ಅನುಮತಿ ಇಲ್ಲದೆ ಸಂಚಾರ: ಯಾವುದೇ ಹೊಸ ವಾಹನ ಶೋರೂಮ್‌ನಿಂದ ಹೊರಬಂದ ಮೇಲೆ ತಾತ್ಕಾಲಿಕ ನೋಂದಣಿ ಸಂಖ್ಯೆಯೊಂದಿಗೆ ಸಂಚರಿಸಲು ಕೇವಲ ಒಂದು ತಿಂಗಳ…

Read More

ಧಾರವಾಡದಲ್ಲಿ ಇಂಧನ ಅಭಾವವಿಲ್ಲ: ಸಾರ್ವಜನಿಕರು ಆತಂಕಪಡಬೇಡಿ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ

ಧಾರವಾಡ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬ ವದಂತಿಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸಾರ್ವಜನಿಕರಿಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಇಂಧನ ಅಭಾವವಿಲ್ಲ ಹಾಗೂ ಸಾರ್ವಜನಿಕರು ಸುಳ್ಳು ಸುದ್ದಿಗೆ ಕಿವಿಗೊಟ್ಟು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಕಳೆದ ಕೆಲವು ದಿನಗಳಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ಸುದ್ದಿಯಿಂದಾಗಿ ಸಾರ್ವಜನಿಕರು ಗಾಬರಿಗೊಂಡು ಪೆಟ್ರೋಲ್ ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವುದು ಕಂಡುಬರುತ್ತಿದೆ….

Read More

​ಮಾಜಿ ಶಾಸಕನ ಪುತ್ರನ ಭೀಕರ ಕೊಲೆ: ಕಾರಿನಲ್ಲೇ ಸುಟ್ಟು ಕರಕಲಾದ ರಾಜು ಬೋಳಶೆಟ್ಟಿ;

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ನಡೆದಿರುವ ಬೆಚ್ಚಿಬೀಳಿಸುವ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರು ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅತ್ಯಂತ ಪೈಶಾಚಿಕ ಹಾಗೂ ಪೂರ್ವಯೋಜಿತ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಈ ಕೃತ್ಯವನ್ನು ಜಿಲ್ಲೆಯ ಜನರು ಮತ್ತು ವಿವಿಧ ಸಂಘಟನೆಗಳು…

Read More