ಧಾರವಾಡ ಹೈಕೋರ್ಟ್ನಲ್ಲಿ ರಾಷ್ಟ್ರೀಯ ಲೋಕ ಅದಾಲತ್: 366 ಪ್ರಕರಣ ಇತ್ಯರ್ಥ, ₹16.62 ಕೋಟಿ ಪರಿಹಾರಕ್ಕೆ ರಾಜಿ
ಧಾರವಾಡ: ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಜುಲೈ 11ರಂದು ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ ಅವರ ನೇತೃತ್ವದಲ್ಲಿ ದ್ವಿತೀಯ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ನಡೆಯಿತು. ನ್ಯಾಯಮೂರ್ತಿಗಳಾದ ಸಚಿನ್ ಶಂಕರ ಮಗದುಮ್, ಸಿ.ಎಂ. ಪೂನಚ್ಚ ಹಾಗೂ ಗೀತಾ ಕೆ.ಬಿ. ಅವರೊಂದಿಗೆ ಲೋಕ ಅದಾಲತ್ ಸದಸ್ಯರಾದ ಕೆ.ಎಲ್. ಪಾಟೀಲ, ಸಾಜಿದ್ ಗೂಡವಾಲಾ, ಎಂ.ಎಸ್. ಹಳ್ಳಿಕೇರಿ ಮತ್ತು ವಿದ್ಯಾವತಿ ಕೊಟ್ಟೂರಶೆಟ್ಟರ್ ಪಾಲ್ಗೊಂಡಿದ್ದು, ಒಟ್ಟು ನಾಲ್ಕು ಪೀಠಗಳನ್ನು ರಚಿಸಲಾಗಿತ್ತು. ಲೋಕ ಅದಾಲತ್ನಲ್ಲಿ ಒಟ್ಟು 1,037 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು,…

