ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ: ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗೆ ಅರ್ಜಿ ಆಹ್ವಾನ

​ಧಾರವಾಡ; ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ವಿಜ್ಞಾನದಲ್ಲಿ ಆಸಕ್ತಿಯನ್ನು ಮೂಡಿಸುವ ಉದ್ದೇಶದಿಂದ ಪ್ರೌಢಶಾಲಾ ಮತ್ತು ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಸ್ಪರ್ಧೆಗಳ ವಿಷಯವು “ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂದಾಗಿದೆ. ​ಈ ಸ್ಪರ್ಧೆಗಳನ್ನು ನವೆಂಬರ್ 26, 2025 ರಂದು ಅಕಾಡೆಮಿಯ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ರಾಜ್ಯದ ಎಲ್ಲ ಪ್ರೌಢಶಾಲಾ ಹಾಗೂ ವಿಜ್ಞಾನ ಪದವಿ ವಿದ್ಯಾರ್ಥಿಗಳನ್ನು ಭಾಗವಹಿಸಲು…

Read More

ಮಕ್ಕಳ ಅಹವಾಲು ಆಲಿಕೆ, ಪರಿಹಾರಗಳಿಗೆ ಮಕ್ಕಳ ಗ್ರಾಮಸಭೆ ಮುಖ್ಯ ವೇದಿಕೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ:ಭವಿಷ್ಯತ್ತಿನ ಬೆಳಕಾಗಿರುವ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯ ಹಾಗೂ ಸೂಕ್ತ ಪರಿಸರ ಸೃಷ್ಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಕಾಪಾಡುವುದರೊಂದಿಗೆ ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದು ಗ್ರಾಮದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದೂ ಅವರು ಅಭಿಪ್ರಾಯಪಟ್ಟರು. ​ಅವರು ಮಂಗಳವಾರದಂದು (ನವೆಂಬರ್ 18) ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ, ಗ್ರಾಮ ಪಂಚಾಯತ್‌ನಿಂದ ಸರಕಾರಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಮಾದನಭಾವಿ ಗ್ರಾಮ ಪಂಚಾಯತ್ ಮಕ್ಕಳ…

Read More

ಹದಗೆಟ್ಟ ಮುಮ್ಮಿಗಟ್ಟಿ–ಗರಗ–ಬೈಲಹೊಂಗಲ ರಸ್ತೆ: ದುರಸ್ತಿಗೆ ಸಾಮಾಜಿಕ ಹೋರಾಟಗಾರ ಭೀಮಪ್ಪ ಕಾಸಾಯಿ ಆಗ್ರಹ

ಧಾರವಾಡ :ತಾಲೂಕಿನ ಮುಮ್ಮಿಗಟ್ಟಿ ಕ್ರಾಸ್‌ನಿಂದ ಗರಗ ಮಾರ್ಗವಾಗಿ ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಹಾಗೂ ತಡಕೋಡ ಗ್ರಾಮ ಪಂಚಾಯತ್ ಸದಸ್ಯ ಭೀಮಪ್ಪ ಯ. ಕಾಸಾಯಿ ಅವರು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಕೆಲಸ ಆರಂಭಿಸದೇ ಇದ್ದಲ್ಲಿ ರಸ್ತೆ ತಡೆದು ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಅವರಿಗೆ ಮನವಿ ಸಲ್ಲಿಸಿದ ಭೀಮಪ್ಪ ಕಾಸಾಯಿ…

Read More

ವಿಮಾನ ನಿಲ್ದಾಣಗಳಿಗೆ ಕನ್ನಡ ಮಹನೀಯರ ಹೆಸರಿಡಲು ನವೆಂಬರ್ 30 ರ ಗಡುವು: ಸಂಗೊಳ್ಳಿ ರಾಯಣ್ಣ ಸಮಿತಿಯಿಂದ ಬೃಹತ್ ಪ್ರತಿಭಟನೆಗೆ ಕರೆ

ಕುಂದಗೋಳ: ನವ್ಹಂಬರ 30 ರ ಒಳಗಾಗಿ ರಾಜ್ಯದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರತಿಭಟನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಮಾಜಿ ಸಚಿವ ದಿ.ಸಿ.ಎಸ್. ಶಿವಳ್ಳಿಯವರ ಸಮಾಧಿ ಪಕ್ಕದ ಜಮೀನಿನಲ್ಲಿ ನಡೆದ ಈ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಮನಸೂರುಮಠದ ಶ್ರೀಗಳಾದ ಬಸವರಾಜ ದೇವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿಗೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ…

Read More

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಧಾರವಾಡ:ನ.17: 2025–26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ, ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಧನಶ್ರೀ ಯೋಜನೆಗಳಡಿ ಅರ್ಜಿ ಸಲ್ಲಿಸುವವರು ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ…

Read More

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ: ನವೆಂಬರ್ 17 – ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಾಗಿ ಆಹ್ವಾನಿಸಿರುವ ಪ್ರಶಸ್ತಿಗಳ ವಿವರ ಹೀಗಿದೆ: ಏಕಲವ್ಯ ಪ್ರಶಸ್ತಿ–2024, ಜೀವಮಾನ ಸಾಧನೆ ಪ್ರಶಸ್ತಿ–2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ–2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ–2024, ಗುರಿ–ಓಲಂಪಿಕ್ ಪದಕ 2025–2026, ನಗದು ಪುರಸ್ಕಾರ 2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ 2025–26, ಕ್ರೀಡಾ ವಿದ್ಯಾರ್ಥಿವೇತನ 2025–26….

Read More

ಆನ್‌ಲೈನ್ ವಂಚನೆ, ಸೈಬರ್ ಕ್ರೈಂ ಬಗ್ಗೆ ಸರಕಾರಿ ನೌಕರರು ಜಾಗೃತರಾಗಿರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಇತ್ತೀಚೆಗೆ ಆನ್‌ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಅಪರಾಧಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಸರ್ಕಾರಿ ನೌಕರರು, ಅವರ ಕುಟುಂಬದವರು ಮತ್ತು ಪಿಂಚಣಿದಾರರು ತೀವ್ರ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು. ನವೆಂಬರ್ 17 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಂಬೆ ಸೆಬಿ (SEBI) ಆಯೋಜಿಸಿದ್ದ ಪ್ರಾದೇಶಿಕ ಹೂಡಿಕೆದಾರರ ಜಾಗೃತಿ ಹಾಗೂ ಆನ್‌ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಕ್ರೈಂಗಳ ಬಗ್ಗೆ ಸರ್ಕಾರಿ ನೌಕರರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಮುಖ್ಯ ವೈದ್ಯಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಿರಾ? ಕುಂದಗೋಳ ಆಸ್ಪತ್ರೆಯಲ್ಲಿ ಡೀಸೆಲ್‌ ಕಳ್ಳಾಟ, ಜನರ ಜೀವಕ್ಕೆ ಬೆಲೆಯಿಲ್ಲ!

ಕುಂದಗೋಳ, ಆಡಳಿತದ ಅಧಃಪತನ:ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಕಡಿತವಾದಾಗ ಪರ್ಯಾಯ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದ್ದರಿಂದ, ತುರ್ತು ಚಿಕಿತ್ಸೆಗೆ ಬಂದ ರೋಗಿಗಳಿಗೆ ವೈದ್ಯರು ಸಂಬಂಧಿಕರ ಮೊಬೈಲ್ ಫೋನ್ ಟಾರ್ಚ್ ಬೆಳಕಿನಲ್ಲಿ ಹೊಲಿಗೆ ಹಾಕಿದ ಘಟನೆಯು ರಾಜ್ಯದ ಆರೋಗ್ಯ ಇಲಾಖೆಯ ಮುಖಕ್ಕೆ ಮಸಿ ಬಳಿದಿದೆ. ಕೋಟ್ಯಂತರ ರೂಪಾಯಿ ಅನುದಾನ ಪಡೆಯುವ ಆಸ್ಪತ್ರೆಯಲ್ಲಿ ಕನಿಷ್ಠ 20 ಲೀಟರ್ ಡೀಸೆಲ್ ಸಂಗ್ರಹಿಸಿಡಲು ಸಾಧ್ಯವಾಗದಿರುವುದು, ಸಾರ್ವಜನಿಕರ ಜೀವದ ಹಕ್ಕನ್ನು ತುಳಿದು ನಡೆದ ನಾಚಿಕೆಗೇಡಿನ ನಡೆಯಾಗಿರುವ ಅಧಿಕಾರಿಗಳ ಕರ್ತವ್ಯ ಲೋಪದ…

Read More

(ಕೆಯುಡಬ್ಲ್ಯೂಜೆ) ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಶನಿವಾರ ಹುಬ್ಬಳ್ಳಿಯ ಪ್ರಜಾವಾಣಿ ಕಾರ್ಯಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನೂತನ ಪದಾಧಿಕಾರಿಗಳ ಸನ್ಮಾನ:ಸಂಘದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹುಬ್ಬಳ್ಳಿ ಆವೃತ್ತಿಯ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಸಹಾಯಕ ಸುದ್ದಿ ಸಂಪಾದಕರಾದ ಶ್ರೀ ಬಸವರಾಜ (ರಾಜು) ಬಿಜಾಪುರ ಅವರನ್ನು ಗೌರವಿಸಲಾಯಿತು. ಅದೇ ರೀತಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಉಪಸಂಪಾದಕರಾದ ಶ್ರೀಮತಿ ರೂಪಾ ಕೊಡದ ಹಾಗೂ ಕಲಘಟಗಿ…

Read More

2025-26 ನೇ ಸಾಲಿನ ಬಿಳಿ ಜೋಳ ಖರೀದಿಗೆ ನೋಂದಣಿ ಪ್ರಾರಂಭ

ಧಾರವಾಡ: 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಳಿ ಜೋಳ (ಹೈಬ್ರಿಡ್) ಪ್ರತಿ ಕ್ವಿಂಟಲ್‌ಗೆ ರೂ. 3,699 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ ರೂ. 3,749 ರಂತೆ ದರ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ನವಲಗುಂದ,…

Read More