ಧಾರವಾಡದಲ್ಲಿ ಜಪಾನ್ ನೈಡೆಕ್ ಕಂಪನಿಯ ₹600 ಕೋಟಿ ಆರ್ಚರ್ಡ್ ಹಬ್ ಉದ್ಘಾಟನೆ

ಧಾರವಾಡ ನ.15: ಇಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಶುಕ್ರವಾರ (ನ.14) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಡೆಕ್ ಕಂಪನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿಪೂಜೆ ನೆರವೇರಿಸಿದ್ದೆ. ಕಂಪನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪನಿಯು…

Read More

ಧಾರವಾಡದ ಗ್ರಾಮೀಣ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ: ಸಹನಾ ಮರಾಠಿ ಪ್ರಥಮ ಸ್ಥಾನ

ಧಾರವಾಡ ಸತ್ತೂರು:ಶ್ರೀ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ.) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಬಿ.ಎಡ್ ಕಾಲೇಜು, ಸತ್ತೂರು, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಇತ್ತೀಚೆಗೆ ಪ್ರಕಟಿಸಿದ 2024-25ರ ಬಿ.ಎಡ್ 4ನೇ ಸೆಮಿಸ್ಟರ್ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ತೋರಿದ ಈ ಶೈಕ್ಷಣಿಕ ಉತ್ಕೃಷ್ಟತೆಗೆ ಕಾಲೇಜು ಹೆಮ್ಮೆ ವ್ಯಕ್ತಪಡಿಸಿದೆ. ಕಾಲೇಜಿನ ವಿದ್ಯಾರ್ಥಿಗಳು ಶೇಕಡಾವಾರು ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಸಹನಾ ಮರಾಠಿ ಅವರು ಶೇ. 94.83ರಷ್ಟು ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನವನ್ನು…

Read More

ಮತ್ತಿಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ–ಶಿಕ್ಷಕರ ಮಹಾಸಭೆ

ಮತ್ತಿಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ–ಶಿಕ್ಷಕರ ಮಹಾಸಭೆ ಕುಂದಗೋಳ, ನ.14:ಮತ್ತಿಗಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (14-11-2025) ಮಕ್ಕಳ ದಿನಾಚರಣೆಯನ್ನು ಆಚರಿಸುವ ಭಾಗವಾಗಿ ಪೋಷಕ–ಶಿಕ್ಷಕರ ಮಹಾಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ವೇಳೆ ಶಿಕ್ಷಣದ ಹಕ್ಕು, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ, ಸಮನ್ವಯ ಶಿಕ್ಷಣ, ದಾಖಲಾತಿ ಆಂದೋಲನ, ಹಾಜರಾತಿ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಕುರಿತ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಗುರುಮಾತೆಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು…

Read More

ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ

ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರದಂದು ನಡೆದ ಪೋಷಕ–ಶಿಕ್ಷಕರ ಮಹಾಸಭೆ ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಪ್ರತಿಯೊಬ್ಬ ಪಾಲಕರಿಗೂ ಲೇಖನಿಯನ್ನು ನೀಡಿ ಸ್ವಾಗತಿಸುವ ವಿಶೇಷ ಕಾರ್ಯಕ್ರಮದೊಂದಿಗೆ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮವು ಉತ್ತಮ ಸಂಯೋಜನೆಯಲ್ಲೇ ಯಶಸ್ವಿಯಾಗಿ ನೆರವೇರಿತು. ಶಾಲೆಯ ಶಿಕ್ಷಕರಾದ ಜಿ.ವಿ. ಪಾಟೀಲ ಗುರುಗಳು ಸರ್ಕಾರದ ವಿವಿಧ ಕಲ್ಯಾಣ ಮತ್ತು ಶಿಕ್ಷಣ ಸಂಬಂಧಿತ ಯೋಜನೆಗಳ ಬಗ್ಗೆ ಪಾಲಕರಿಗೆ ವಿವರವಾಗಿ ತಿಳಿಸಿದರು. ಅತಿಥಿ ಶಿಕ್ಷಕರಾದ ಬಾಪು…

Read More

ಜಿಲ್ಲಾ ಪೊಲೀಸ್ ಕಚೇರಿಗೆ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ ವಿಕಾಸ್ ಭೇಟಿ

ಜಿಲ್ಲಾ ಪೊಲೀಸ್ ಕಚೇರಿಗೆ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ ವಿಕಾಸ್ ಭೇಟಿ ಧಾರವಾಡ: ನ.14 ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣೆಯ ಅಂಗವಾಗಿ, ನಿನ್ನೆ (ನ.13) ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ ವಿಕಾಸ್ ಕುಮಾರ ವಿಕಾಸ್ ಅವರು ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಗೌರವ ರಕ್ಷೆಯನ್ನು ಸ್ವೀಕರಿಸಿದರು. ನಂತರ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ಇಲಾಖೆಗಳ ಕಡತಗಳನ್ನು ಪರಿಶೀಲಿಸಿದರು. ಜಿಲ್ಲಾ ವಿಶೇಷ ಘಟಕ ಹಾಗೂ ಜಿಲ್ಲೆಯ ಸಾಮಾಜಿಕ…

Read More

ಮಕ್ಕಳ ದಿನಾಚರಣೆ ಅಂಗವಾಗಿ ಜರುಗಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಣೆ: ಧಾರವಾಡದಲ್ಲಿ ಸಂಭ್ರಮ ಕಾರ್ಯಕ್ರಮ

ಧಾರವಾಡ ನ.14:ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಜಿಲ್ಲಾ ಬಾಲಭವನ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 12ರಂದು ಮಕ್ಕಳ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಲವು ಸ್ಪರ್ಧೆಗಳು ಜರುಗಿದ್ದು, ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭವನ್ನು ವೈಭವವಾಗಿ ಆಚರಿಸಲಾಯಿತು. ಮಕ್ಕಳಿಗಾಗಿ ಸೃಜನಾತ್ಮಕ ಕಲೆ, ಬರವಣಿಗೆ, ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ,…

Read More

ಪ್ರವಾಸೋದ್ಯಮ ಇಲಾಖೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: ನ.14: ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸಿ ಮಾರ್ಗದರ್ಶನ ತರಬೇತಿ: ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಹಾಗೂ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಪ್ರವಾಸಿ ಮಾರ್ಗದರ್ಶನ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆತಿಥ್ಯ ಕ್ಷೇತ್ರದಲ್ಲಿ…

Read More

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ದತ್ತು ಮಾಸಾಚರಣೆ: ಧಾರವಾಡದಲ್ಲಿ ಕಾನೂನು ಅರಿವು–ನೆರವು ಕಾರ್ಯಕ್ರಮ

ಧಾರವಾಡ, ನ.14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ. ಬಿ.ಆರ್. ಅಂಬೇಡ್ಕರ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ರಾಷ್ಟ್ರೀಯ ದತ್ತು ಮಾಸಾಚರಣೆ–2025 ಅಂಗವಾಗಿ ಕಾನೂನು ಅರಿವು–ನೆರವು ಕಾರ್ಯಕ್ರಮವನ್ನು ಬುದ್ಧ ರಕ್ಷೀತ ವಸತಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ್ ಎಫ್. ದೊಡ್ಡಮನಿ…

Read More

ನವಭಾರತ ನಿರ್ಮಾಣಕ್ಕೆ ನೆಹರು ಅವರ ಕೊಡುಗೆ ಅನನ್ಯ: ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ

ಧಾರವಾಡ, ನ.14: ದೇಶದ ಮೊದಲ ಪ್ರಧಾನಿಯಾಗಿರುವ ಪಂಡಿತ ಜವಾಹರಲಾಲ ನೆಹರು ಅವರು ನವ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಿದ ದೀರ್ಘದೃಷ್ಟಿಯ ನಾಯಕರು. ಅವರ ಆದರ್ಶಗಳು ಸದಾಕಾಲ ನಮ್ಮೆಲ್ಲರಿಗೂ ಪ್ರೇರಣೆ. ಮಕ್ಕಳನ್ನು ಅಪಾರವಾಗಿ ಪ್ರೀತಿಸಿದ್ದ ನೆಹರು ಅವರು ತಮ್ಮ ಜನ್ಮದಿನವನ್ನು ದೇಶದ ಮಕ್ಕಳಿಗಾಗಿ ಸಮರ್ಪಿಸಿದರು. ಮಕ್ಕಳೇ ನಾಡಿನ ನಾಳಿನ ಭವಿಷ್ಯ, ಆಶಾಕಿರಣ. ಅವರ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸದಾ ಬದ್ಧವಾಗಿದೆ,” ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ಅವರು ಶುಕ್ರವಾರದಂದು (ನ.14) ಕರ್ನಾಟಕ…

Read More

ಕುಂದಗೋಳದಲ್ಲಿ ನಾಳೆ ತಾಲೂಕು 6ನೇ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ

ಕುಂದಗೋಳ: ಕಲ್ಯಾಣಪುರ ಬಸವಣ್ಣಜ್ಜನವರ ಕಲ್ಯಾಣ ಮಂಟಪದಲ್ಲಿ ತಾಲೂಕು 6ನೇ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನವೆಂಬರ್ 15ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಗಾಳಿ ಮರೆಮ್ಮ ದೇವಾಲಯದಿಂದ ಆರಂಭವಾಗುವ ಭುವನೇಶ್ವರಿದೇವಿಯ ಭಾವಚಿತ್ರ ಮೆರವಣಿಗೆಗೆ ಮಾಜಿ ಶಾಸಕ ಹಾಗೂ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಅಕ್ಕಿ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಕಚುಸಾಪ ಅಧ್ಯಕ್ಷ ವೈ.ಡಿ. ಹೊಸೂರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಕನ್ನಡ ತೇರಿನ ಮೆರವಣಿಗೆಯು ಕಲ್ಯಾಣ ಮಂಟಪಕ್ಕೆ ಆಗಮಿಸಿದ ಬಳಿಕ ಸಮ್ಮೇಳನದ…

Read More