ಎಸ್.ಸಿ/ಎಸ್.ಟಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಶಿಕ್ಷಕಿ ಚಂದ್ರಿಕಾ ಎಸ್ ಜೆ ಆಯ್ಕೆ
ಕುಂದಗೋಳ : ಕರ್ನಾಟಕ ರಾಜ್ಯ ಎಸ್.ಸಿ ಮತ್ತು ಎಸ್.ಟಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ (ರಿ) ರಾಜ್ಯ ಸಂಘಟನೆಯ ಮಹಿಳಾ ಉಪಾಧ್ಯಕ್ಷರಾಗಿ ಕುಂದಗೋಳ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಚಂದ್ರಿಕಾ ಪರಶುರಾಮ (ಎಸ್.ಜೆ) ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ವೃತ್ತಿಯಲ್ಲಿ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಶ್ರೀಮತಿ ಚಂದ್ರಿಕಾ ಎಸ್.ಜೆ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾ ನಿಷ್ಠತೆ ಮತ್ತು ಸಂಘಟನಾ ಸಾಮರ್ಥ್ಯವನ್ನು ಗುರುತಿಸಿ ಈ ಮಹತ್ವದ ಹುದ್ದೆಗೆ…

