ಪೊಲೀಸರ ಒತ್ತಡಕ್ಕೆ ಕ್ರೀಡೆ, ವ್ಯಾಯಾಮ ಪರಿಹಾರ : ಪ್ರತಿ ದಿನ ಹೊಸ ಚೈತನ್ಯ ನೀಡುತ್ತದೆ — ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ

ಧಾರವಾಡ, ನ.20: “ಪೊಲೀಸರು ದಿನವೂ ಒತ್ತಡಭರಿತ ಪರಿಸ್ಥಿತಿಗಳನ್ನು ಎದುರಿಸುವುದು ಸಾಮಾನ್ಯ. ಇಂತಹ ಒತ್ತಡವನ್ನು ಕಡಿಮೆ ಮಾಡುವ ಉತ್ತಮ ಮಾರ್ಗಗಳಲ್ಲಿ ಕ್ರೀಡೆ ಹಾಗೂ ವ್ಯಾಯಾಮಗಳು ಪ್ರಮುಖ. ಕ್ರೀಡೆಗಳು ಪ್ರತಿದಿನ ಮನಸ್ಸಿಗೆ ಹೊಸ ಚೈತನ್ಯ ಮತ್ತು ಸಂತಸ ನೀಡುತ್ತವೆ,” ಎಂದು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ಹೇಳಿದರು. ಅವರು ಬುಧವಾರ ಬೆಳಿಗ್ಗೆ ಧಾರವಾಡ ಪೊಲೀಸ್ ಹೆಡ್‌ಕ್ವಾರ್ಟರ್ಸ್‌ನ ಡಿಎಆರ್ ಪರೇಡ್ ಮೈದಾನದಲ್ಲಿ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು…

Read More

ಕೃಷಿ ವಿಶ್ವವಿದ್ಯಾಲಯದಲ್ಲಿ ದಲಿತ ನೌಕರರಿಗೆ ಕಿರುಕುಳ: ದಲಿತ ಸಂಘರ್ಷ ಸಮಿತಿ ಖಂಡನೆ, ವಜಾಗೆ ಒಂದು ವಾರ ಗಡುವು

ಧಾರವಾಡ: ವಿದ್ಯಾಕಾಶಿ ಎಂದೇ ಪ್ರಸಿದ್ಧವಾದ ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಲ್ಲಿ (ಎಯುಡಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಶೋಷಿತ ವರ್ಗದ ನೌಕರರನ್ನು ಗುರಿಯಾಗಿಸಿಕೊಂಡು ನಿರಂತರ ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡುತ್ತಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ರವಿಕುಮಾರ ಮಾಳಿಗೇರ ಅವರ ಗೂಂಡಾವರ್ತನೆ ಮತ್ತು ಹಿಟ್ಲರ್ ಸಂಸ್ಕೃತಿಯನ್ನು ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ತೀವ್ರವಾಗಿ ಖಂಡಿಸಿದೆ. ​ಆರೋಪಿ ರವಿಕುಮಾರ ಮಾಳಿಗೇರ ಅವರು ಶೋಷಿತ ವರ್ಗದ…

Read More

ಕನ್ನಡದ ಮೊಟ್ಟ ಮೊದಲ ಸಾಹಿತ್ಯಕ ಪತ್ರಿಕೆ ‘ವಾಗ್ಭೂಷಣ’ ಪುನರಾರಂಭ ಸಂಘದ ಹೆಗ್ಗಳಿಕೆ: ಶಂಕರ ಹಲಗತ್ತಿ

ಧಾರವಾಡ: ಕನ್ನಡದ ಮೊಟ್ಟಮೊದಲ ಸಾಹಿತ್ಯಕ ಪತ್ರಿಕೆಯಾಗಿ 1896ರಲ್ಲಿ ಪ್ರಾರಂಭಗೊಂಡ ‘ವಾಗ್ಭೂಷಣ’ ಪತ್ರಿಕೆಯನ್ನು ಕಾಲಾಂತರದಲ್ಲಿ ನಿಂತುಹೋಗಿದ್ದರೂ ಮತ್ತೆ ಪ್ರಾರಂಭಿಸಿದ್ದು ಕರ್ನಾಟಕ ವಿದ್ಯಾವರ್ಧಕ ಸಂಘದ (ಕವಿವ ಸಂಘ) ವಿನೂತನ ಸಾಧನೆಯಾಗಿದೆ ಎಂದು ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ 18ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ​ವಾಗ್ಭೂಷಣ ಪತ್ರಿಕೆ ಮೂವತ್ತೈದು ವರ್ಷಗಳ ಕಾಲ ಪ್ರಕಟಣೆಗೊಂಡು ಕನ್ನಡ ಸಾಹಿತ್ಯ ಲೋಕದಲ್ಲಿ ಮೈಲುಗಲ್ಲಾಗಿ ನಿಂತಿದೆ. ಹಿಂದಿನ ವಾಗ್ಭೂಷಣ ಪತ್ರಿಕೆಗಳನ್ನು…

Read More

ನಿರ್ದಿಷ್ಟ ಗುರಿ, ಛಲದಿಂದ ಜಗತ್ತನ್ನೇ ಗೆಲ್ಲಲು ಸಾಧ್ಯ: ಪ್ರೊ. ಎಂ.ವೈ. ಸಾವಂತ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ನಿರ್ದಿಷ್ಟ ಗುರಿಯೊಂದಿಗೆ ಜೀವನದಲ್ಲಿ ಸಫಲತೆಯನ್ನು ಸಾಧಿಸಬಹುದು ಎಂದು ಖ್ಯಾತ ಮೋಡಿ ಲಿಪಿ ತಜ್ಞರಾದ ಪ್ರೊ. ಎಂ. ವೈ. ಸಾವಂತ ಅವರು ಅಭಿಪ್ರಾಯಪಟ್ಟರು. ಬುದುವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘ (ಕ.ವಿ.ವ ಸಂಘ)ದಲ್ಲಿ ಆಯೋಜಿಸಲಾಗಿದ್ದ “ಧರೆಗೆ ದೊಡ್ಡವರು” ಕಾರ್ಯಕ್ರಮದಲ್ಲಿ ಕಿಟೆಲ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ​ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಸುಮ್ಮನೆ ಸಿಗುವುದಿಲ್ಲ. ಅದಕ್ಕೆ ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ ಹಾಗೂ ನಿರಂತರತೆ…

Read More

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ: ಮಿದುಳು ತಿನ್ನುವ ಅಮೀಬಾ ಕುರಿತ ಆರೋಗ್ಯ ಇಲಾಖೆಯ ಮುನ್ನೆಚ್ಚರಿಕೆ ಮಾರ್ಗಸೂಚಿ

ಧಾರವಾಡ, ನ.19: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಎಂಬ ಮಿದುಳನ್ನು ದಾಳಿ ಮಾಡುವ ಅಮೀಬಾದಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಶಬರಿಮಲೆ ಯಾತ್ರೆಗೆ ತೆರಳುವ ರಾಜ್ಯದ ಭಕ್ತರು ಹೆಚ್ಚಿದ ಜಾಗ್ರತೆ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಎಚ್ಚರಿಕೆ ಜಾರಿ ಮಾಡಿದೆ. ನೇಗ್ಲೇರಿಯಾ ಫೌಲೇರಿ ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ನಿಂತ ನೀರು, ಕೊಳಗಳು, ಈಜುಕೊಳಗಳು ಮತ್ತು ಕೆರೆಗಳು…

Read More

ನ:20 ರಿಂದ 22 ರವರೆಗೆ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಆಯೋಜನೆ

ಧಾರವಾಡ ನ.19: ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 20 ರಿಂದ 22, 2025 ರವರೆಗೆ ಧಾರವಾಡ ಪೊಲೀಸ್ ಹೆಡ್‌ಕ್ವಾರ್ಟರ್ಸ್‌ನ ಡಿಎಆರ್ ಕೇಂದ್ರಸ್ಥಾನದ ಪರೇಡ್ ಮೈದಾನದಲ್ಲಿ ಭವ್ಯವಾಗಿ ನಡೆಸಲಾಗುತ್ತಿದೆ. ನವೆಂಬರ್ 20ರಂದು ಬೆಳಿಗ್ಗೆ 8:30ಕ್ಕೆ ಇದೇ ಪರೇಡ್ ಮೈದಾನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ಅವರು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಲಿದ್ದು, ಜಿಲ್ಲೆಯ ವಿವಿಧ ವಿಭಾಗಗಳ ಪೊಲೀಸ್ ಸಿಬ್ಬಂದಿ…

Read More

ರೇಣುಕಾ ಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಧಾರವಾಡ ನ.19: ಮಲಪ್ರಭಾ ಯೋಜನಾ ವಲಯದಡಿಯಲ್ಲಿ ಬರುವ ರೇಣುಕಾ ಸಾಗರ ಜಲಾಶಯ ನವಿಲುತೀರ್ಥದಿಂದ ನವೆಂಬರ್ 11, 2025ರಿಂದ ಮಲಪ್ರಭಾ ಬಲದಂಡೆ ಕಾಲುವೆ, ನರಗುಂದ ಶಾಖಾ ಕಾಲುವೆ, ಕೊಳಚಿ ಬಲದಂಡೆ ಕಾಲುವೆ ಹಾಗೂ ಏತ ನೀರಾವರಿ ಯೋಜನೆಗಳ ಮೂಲಕ ಕೃಷಿ ಉದ್ದೇಶಕ್ಕಾಗಿ ನೀರು ಹರಿಸಲಾಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಲಘು ನೀರಾವರಿ ಬೆಳೆಗಳನ್ನು ಮಾತ್ರ (ತಮ್ಮ ಕ್ಷೇತ್ರದ 60 ಪ್ರತಿಶತ ಭಾಗದಲ್ಲಿ) ಬೆಳೆಸಲು ಹಾಗೂ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಸೂಚಿಸಲಾಗಿದೆ. ಜೊತೆಗೆ, ಮುಖ್ಯ ಕಾಲುವೆ ದಡದಲ್ಲಿ ಈಜಾಡಲು,…

Read More

ವಾಯುಮಿತ್ರ ಕೌಶಲ್ಯ ಅಭಿವೃದ್ಧಿ ಯೋಜನೆ: ವಿಂಡ್ ಫಾರ್ಮ್ ಎಂಜಿನಿಯರ್ ತರಬೇತಿಗೆ ನೋಂದಣಿ ಪ್ರಾರಂಭ

ಧಾರವಾಡ.19: ಚೆನ್ನೈಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವಿಂಡ್ ಎನರ್ಜಿ ಮಾನ್ಯತೆ ಪಡೆದ ಮಿಟ್ಕಾನ್ ಕನ್ಸಲ್ಟೆನ್ಸಿ ಮತ್ತು ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯು ವಾಯುಮಿತ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ‘ವಿಂಡ್ ಫಾರ್ಮ್ ಎಂಜಿನಿಯರ್ (ಹಂತ–5)’ ತರಬೇತಿ ಕಾರ್ಯಕ್ರಮವನ್ನು ಡಿಸೆಂಬರ್ 2025ರಲ್ಲಿ ಬೆಳಗಾವಿಯ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ವೇಗವಾಗಿ ಬೆಳೆಯುತ್ತಿರುವ ನವೀಕರಿಸಬಹುದಾದ ಇಂಧನದ ವಿಂಡ್ ಎನರ್ಜಿ ಕ್ಷೇತ್ರದಲ್ಲಿ ವೃತ್ತಿ ಬೆಳೆಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಹಾಗೂ ಸುವರ್ಣಾವಕಾಶವಾಗಿದೆ….

Read More

‘ಹಾಡಿರೇ ರಾಗಗಳ–ತೂಗಿರೇ ದೀಪಗಳ’: ತಳಸಮುದಾಯದ ಕಲಾವಿದರಿಗೆ ಪ್ರೋತ್ಸಾಹಿಸಲು ವಿಶೇಷ ಘಟಕ ಯೋಜನೆ

ಧಾರವಾಡ ನ.19: ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ವಿಶೇಷ ಘಟಕ ಯೋಜನೆ ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು. ಅವರು ಧಾರವಾಡದ ಡಾ. ದ.ರಾ. ಬೇಂದ್ರೆ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘ಹಾಡಿರೇ ರಾಗಗಳ–ತೂಗಿರೇ ದೀಪಗಳ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂತಹ ಯೋಜನೆಗಳಿಂದ ಗ್ರಾಮೀಣ ಹಾಗೂ ತಳ ಸಮುದಾಯದ ಜಾನಪದ ಕಲಾವಿದರಿಗೆ ಹೆಚ್ಚಿನ ವೇದಿಕೆಗಳು…

Read More

ಯುವನಿಧಿ ಯೋಜನೆಯ ಸದುಪಯೋಗ ಪಡೆಯಲು ಕರೆ: ಎಂ.ಎಂ. ಕುದುರಗೊಂಡ

ನವಲಗುಂದ: ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಯುವನಿಧಿ’ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನವಲಗುಂದದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು. ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ (ನವಲಗುಂದ), ಜಿಲ್ಲಾ ಉದ್ಯೋಗ ಮಾಹಿತಿ ಕೇಂದ್ರ (ಹುಬ್ಬಳ್ಳಿ) ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ 18 ನವೆಂಬರ್ 2025 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಚಿಲಕವಾಡ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುಳಾ ಕಲ್ಯಾಣಿ…

Read More