ಪೊಲೀಸರ ಒತ್ತಡಕ್ಕೆ ಕ್ರೀಡೆ, ವ್ಯಾಯಾಮ ಪರಿಹಾರ : ಪ್ರತಿ ದಿನ ಹೊಸ ಚೈತನ್ಯ ನೀಡುತ್ತದೆ — ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ
ಧಾರವಾಡ, ನ.20: “ಪೊಲೀಸರು ದಿನವೂ ಒತ್ತಡಭರಿತ ಪರಿಸ್ಥಿತಿಗಳನ್ನು ಎದುರಿಸುವುದು ಸಾಮಾನ್ಯ. ಇಂತಹ ಒತ್ತಡವನ್ನು ಕಡಿಮೆ ಮಾಡುವ ಉತ್ತಮ ಮಾರ್ಗಗಳಲ್ಲಿ ಕ್ರೀಡೆ ಹಾಗೂ ವ್ಯಾಯಾಮಗಳು ಪ್ರಮುಖ. ಕ್ರೀಡೆಗಳು ಪ್ರತಿದಿನ ಮನಸ್ಸಿಗೆ ಹೊಸ ಚೈತನ್ಯ ಮತ್ತು ಸಂತಸ ನೀಡುತ್ತವೆ,” ಎಂದು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ಹೇಳಿದರು. ಅವರು ಬುಧವಾರ ಬೆಳಿಗ್ಗೆ ಧಾರವಾಡ ಪೊಲೀಸ್ ಹೆಡ್ಕ್ವಾರ್ಟರ್ಸ್ನ ಡಿಎಆರ್ ಪರೇಡ್ ಮೈದಾನದಲ್ಲಿ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು…

