ಸಂಡೂರು ಪಿಐ ವಿರುದ್ಧ ಎಫ್‌ಐಆರ್ ದಾಖಲಿಸಿ: ಬಳ್ಳಾರಿ ಎಸ್‌ಪಿಗೆ ಹೈಕೋರ್ಟ್ ನಿರ್ದೇಶನ

ಧಾರವಾಡ: ಸಂಡೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ (ಪಿಐ) ವಿರುದ್ಧ ಹಲ್ಲೆ ಆರೋಪದ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿ, ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸುವಂತೆ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿದಾರ ಮತ್ತು ಪ್ರತಿವಾದಿಗಳ ವಾದಗಳನ್ನು ಆಲಿಸಿದ ನಂತರ ಈ ನಿರ್ದೇಶನ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದ ವಿ….

Read More

ಮೂರು ಪ್ರಮುಖ ತಂತ್ರಜ್ಞಾನ ನೀತಿಗಳೊಂದಿಗೆ ‘ಬೆಂಗಳೂರು ಟೆಕ್ ಶೃಂಗಸಭೆ-2025’ ಆರಂಭ: ಸಿಎಂ ಸಿದ್ದರಾಮಯ್ಯ

​ಬೆಂಗಳೂರು: ​ನವೆಂಬರ್ 18 ರಿಂದ 20, 2025 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆಯುತ್ತಿರುವ ‘ಬೆಂಗಳೂರು ಟೆಕ್ ಶೃಂಗಸಭೆ-2025’ (BTS) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಮೂರು ಪ್ರಮುಖ ತಂತ್ರಜ್ಞಾನ ನೀತಿಗಳನ್ನು ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ ಎಂದು ಹೇಳಿದರು. ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮೋದನೆಗಳು ಮತ್ತು ಪೂರಕ ವಾತಾವರಣವು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವನ್ನಾಗಿ ಮುಂದುವರೆಸಿದೆ ಎಂದು ಅವರು ಅಭಿಪ್ರಾಯಪಟ್ಟರು….

Read More

ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ನವೆಂಬರ್ 19ರಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ

​ಧಾರವಾಡ: ನಾಡಿನ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ-2025ರ ಅಂಗವಾಗಿ ನವೆಂಬರ್ 1 ರಿಂದ 30ರವರೆಗೆ ಒಂದು ತಿಂಗಳ ಪೂರ್ಣ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ, ದಿನಾಂಕ ನವೆಂಬರ್ 19, 2025 ರಂದು ಸಂಜೆ 5:30 ಗಂಟೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ​ಈ ಕಾರ್ಯಕ್ರಮಕ್ಕೆ ಧಾರವಾಡದ ಎಂ. ಎಸ್. ಪಾಟೀಲ ಅವರು ಚಾಲನೆ ನೀಡಲಿದ್ದಾರೆ. ನರೇಂದ್ರದ ಸಂಗೀತಗಾರರಾದ ಆನಂದ ಪಾಟೀಲ ಅವರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಇದರ ಜೊತೆಗೆ,…

Read More

ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ನವೆಂಬರ್ 19ರಂದು ‘ಧರೆಗೆ ದೊಡ್ಡವರು’ ಸಂವಾದ ಕಾರ್ಯಕ್ರಮ

​ ​ಧಾರವಾಡ: ನಾಡಿನ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ-2025ರ ಅಂಗವಾಗಿ ನವೆಂಬರ್ 1 ರಿಂದ 30ರವರೆಗೆ ಒಂದು ತಿಂಗಳ ಪೂರ್ಣ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ, ದಿನಾಂಕ ನವೆಂಬರ್ 19, 2025 ರಂದು ಬೆಳಿಗ್ಗೆ 11 ಗಂಟೆಗೆ ‘ಧರೆಗೆ ದೊಡ್ಡವರು’ ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ. ​ಈ ಕಾರ್ಯಕ್ರಮದಲ್ಲಿ ಧಾರವಾಡದ ಮೋಡಿಲಿಪಿ ತಜ್ಞರು ಮತ್ತು ವಿದ್ವಾಂಸರಾದ ಪ್ರೊ. ಎಂ.ವಾಯ್. ಸಾವಂತ ಅವರು ‘ಧರೆಗೆ ದೊಡ್ಡವ’ರಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ…

Read More

ಪಂ. ಬಸವರಾಜ ರಾಜಗುರು ಸ್ಮರಣೆಯಲ್ಲಿ ನ. 22 ಮತ್ತು 23ಕ್ಕೆ ವಚನ ಸಂಗೀತೋತ್ಸವ ಆಯೋಜನೆ

ಧಾರವಾಡ, ನ. 18: ಪದ್ಮಭೂಷಣ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ಅವರ ಸ್ಮರಣೆಯಲ್ಲಿ, ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ವಚನ ಸಂಗೀತೋತ್ಸವ–2025 ಕಾರ್ಯಕ್ರಮವನ್ನು ನವೆಂಬರ್ 22 ಮತ್ತು 23, 2025 ರಂದು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷರಾದ ಪಂ. ಕೈವಲ್ಯಕುಮಾರ ಗುರವ ಅವರು ಪ್ರಕಟಿಸಿದರು. ಅವರು ಮಂಗಳವಾರದಂದು(ನ. 18) ಸಂಜೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ…

Read More

ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ: ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗೆ ಅರ್ಜಿ ಆಹ್ವಾನ

​ಧಾರವಾಡ; ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ವಿಜ್ಞಾನದಲ್ಲಿ ಆಸಕ್ತಿಯನ್ನು ಮೂಡಿಸುವ ಉದ್ದೇಶದಿಂದ ಪ್ರೌಢಶಾಲಾ ಮತ್ತು ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಸ್ಪರ್ಧೆಗಳ ವಿಷಯವು “ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂದಾಗಿದೆ. ​ಈ ಸ್ಪರ್ಧೆಗಳನ್ನು ನವೆಂಬರ್ 26, 2025 ರಂದು ಅಕಾಡೆಮಿಯ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ರಾಜ್ಯದ ಎಲ್ಲ ಪ್ರೌಢಶಾಲಾ ಹಾಗೂ ವಿಜ್ಞಾನ ಪದವಿ ವಿದ್ಯಾರ್ಥಿಗಳನ್ನು ಭಾಗವಹಿಸಲು…

Read More

ಮಕ್ಕಳ ಅಹವಾಲು ಆಲಿಕೆ, ಪರಿಹಾರಗಳಿಗೆ ಮಕ್ಕಳ ಗ್ರಾಮಸಭೆ ಮುಖ್ಯ ವೇದಿಕೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ:ಭವಿಷ್ಯತ್ತಿನ ಬೆಳಕಾಗಿರುವ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯ ಹಾಗೂ ಸೂಕ್ತ ಪರಿಸರ ಸೃಷ್ಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಕಾಪಾಡುವುದರೊಂದಿಗೆ ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದು ಗ್ರಾಮದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದೂ ಅವರು ಅಭಿಪ್ರಾಯಪಟ್ಟರು. ​ಅವರು ಮಂಗಳವಾರದಂದು (ನವೆಂಬರ್ 18) ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ, ಗ್ರಾಮ ಪಂಚಾಯತ್‌ನಿಂದ ಸರಕಾರಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಮಾದನಭಾವಿ ಗ್ರಾಮ ಪಂಚಾಯತ್ ಮಕ್ಕಳ…

Read More

ಹದಗೆಟ್ಟ ಮುಮ್ಮಿಗಟ್ಟಿ–ಗರಗ–ಬೈಲಹೊಂಗಲ ರಸ್ತೆ: ದುರಸ್ತಿಗೆ ಸಾಮಾಜಿಕ ಹೋರಾಟಗಾರ ಭೀಮಪ್ಪ ಕಾಸಾಯಿ ಆಗ್ರಹ

ಧಾರವಾಡ :ತಾಲೂಕಿನ ಮುಮ್ಮಿಗಟ್ಟಿ ಕ್ರಾಸ್‌ನಿಂದ ಗರಗ ಮಾರ್ಗವಾಗಿ ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಹಾಗೂ ತಡಕೋಡ ಗ್ರಾಮ ಪಂಚಾಯತ್ ಸದಸ್ಯ ಭೀಮಪ್ಪ ಯ. ಕಾಸಾಯಿ ಅವರು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಕೆಲಸ ಆರಂಭಿಸದೇ ಇದ್ದಲ್ಲಿ ರಸ್ತೆ ತಡೆದು ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಅವರಿಗೆ ಮನವಿ ಸಲ್ಲಿಸಿದ ಭೀಮಪ್ಪ ಕಾಸಾಯಿ…

Read More

ವಿಮಾನ ನಿಲ್ದಾಣಗಳಿಗೆ ಕನ್ನಡ ಮಹನೀಯರ ಹೆಸರಿಡಲು ನವೆಂಬರ್ 30 ರ ಗಡುವು: ಸಂಗೊಳ್ಳಿ ರಾಯಣ್ಣ ಸಮಿತಿಯಿಂದ ಬೃಹತ್ ಪ್ರತಿಭಟನೆಗೆ ಕರೆ

ಕುಂದಗೋಳ: ನವ್ಹಂಬರ 30 ರ ಒಳಗಾಗಿ ರಾಜ್ಯದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರತಿಭಟನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಮಾಜಿ ಸಚಿವ ದಿ.ಸಿ.ಎಸ್. ಶಿವಳ್ಳಿಯವರ ಸಮಾಧಿ ಪಕ್ಕದ ಜಮೀನಿನಲ್ಲಿ ನಡೆದ ಈ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಮನಸೂರುಮಠದ ಶ್ರೀಗಳಾದ ಬಸವರಾಜ ದೇವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿಗೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ…

Read More

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಧಾರವಾಡ:ನ.17: 2025–26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ, ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಧನಶ್ರೀ ಯೋಜನೆಗಳಡಿ ಅರ್ಜಿ ಸಲ್ಲಿಸುವವರು ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ…

Read More