ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ: ನವೆಂಬರ್ 17 – ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಾಗಿ ಆಹ್ವಾನಿಸಿರುವ ಪ್ರಶಸ್ತಿಗಳ ವಿವರ ಹೀಗಿದೆ: ಏಕಲವ್ಯ ಪ್ರಶಸ್ತಿ–2024, ಜೀವಮಾನ ಸಾಧನೆ ಪ್ರಶಸ್ತಿ–2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ–2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ–2024, ಗುರಿ–ಓಲಂಪಿಕ್ ಪದಕ 2025–2026, ನಗದು ಪುರಸ್ಕಾರ 2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ 2025–26, ಕ್ರೀಡಾ ವಿದ್ಯಾರ್ಥಿವೇತನ 2025–26….

Read More

ಆನ್‌ಲೈನ್ ವಂಚನೆ, ಸೈಬರ್ ಕ್ರೈಂ ಬಗ್ಗೆ ಸರಕಾರಿ ನೌಕರರು ಜಾಗೃತರಾಗಿರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಇತ್ತೀಚೆಗೆ ಆನ್‌ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಅಪರಾಧಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಸರ್ಕಾರಿ ನೌಕರರು, ಅವರ ಕುಟುಂಬದವರು ಮತ್ತು ಪಿಂಚಣಿದಾರರು ತೀವ್ರ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು. ನವೆಂಬರ್ 17 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಂಬೆ ಸೆಬಿ (SEBI) ಆಯೋಜಿಸಿದ್ದ ಪ್ರಾದೇಶಿಕ ಹೂಡಿಕೆದಾರರ ಜಾಗೃತಿ ಹಾಗೂ ಆನ್‌ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಕ್ರೈಂಗಳ ಬಗ್ಗೆ ಸರ್ಕಾರಿ ನೌಕರರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಮುಖ್ಯ ವೈದ್ಯಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಿರಾ? ಕುಂದಗೋಳ ಆಸ್ಪತ್ರೆಯಲ್ಲಿ ಡೀಸೆಲ್‌ ಕಳ್ಳಾಟ, ಜನರ ಜೀವಕ್ಕೆ ಬೆಲೆಯಿಲ್ಲ!

ಕುಂದಗೋಳ, ಆಡಳಿತದ ಅಧಃಪತನ:ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಕಡಿತವಾದಾಗ ಪರ್ಯಾಯ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದ್ದರಿಂದ, ತುರ್ತು ಚಿಕಿತ್ಸೆಗೆ ಬಂದ ರೋಗಿಗಳಿಗೆ ವೈದ್ಯರು ಸಂಬಂಧಿಕರ ಮೊಬೈಲ್ ಫೋನ್ ಟಾರ್ಚ್ ಬೆಳಕಿನಲ್ಲಿ ಹೊಲಿಗೆ ಹಾಕಿದ ಘಟನೆಯು ರಾಜ್ಯದ ಆರೋಗ್ಯ ಇಲಾಖೆಯ ಮುಖಕ್ಕೆ ಮಸಿ ಬಳಿದಿದೆ. ಕೋಟ್ಯಂತರ ರೂಪಾಯಿ ಅನುದಾನ ಪಡೆಯುವ ಆಸ್ಪತ್ರೆಯಲ್ಲಿ ಕನಿಷ್ಠ 20 ಲೀಟರ್ ಡೀಸೆಲ್ ಸಂಗ್ರಹಿಸಿಡಲು ಸಾಧ್ಯವಾಗದಿರುವುದು, ಸಾರ್ವಜನಿಕರ ಜೀವದ ಹಕ್ಕನ್ನು ತುಳಿದು ನಡೆದ ನಾಚಿಕೆಗೇಡಿನ ನಡೆಯಾಗಿರುವ ಅಧಿಕಾರಿಗಳ ಕರ್ತವ್ಯ ಲೋಪದ…

Read More

(ಕೆಯುಡಬ್ಲ್ಯೂಜೆ) ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಶನಿವಾರ ಹುಬ್ಬಳ್ಳಿಯ ಪ್ರಜಾವಾಣಿ ಕಾರ್ಯಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನೂತನ ಪದಾಧಿಕಾರಿಗಳ ಸನ್ಮಾನ:ಸಂಘದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹುಬ್ಬಳ್ಳಿ ಆವೃತ್ತಿಯ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಸಹಾಯಕ ಸುದ್ದಿ ಸಂಪಾದಕರಾದ ಶ್ರೀ ಬಸವರಾಜ (ರಾಜು) ಬಿಜಾಪುರ ಅವರನ್ನು ಗೌರವಿಸಲಾಯಿತು. ಅದೇ ರೀತಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಉಪಸಂಪಾದಕರಾದ ಶ್ರೀಮತಿ ರೂಪಾ ಕೊಡದ ಹಾಗೂ ಕಲಘಟಗಿ…

Read More

2025-26 ನೇ ಸಾಲಿನ ಬಿಳಿ ಜೋಳ ಖರೀದಿಗೆ ನೋಂದಣಿ ಪ್ರಾರಂಭ

ಧಾರವಾಡ: 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಳಿ ಜೋಳ (ಹೈಬ್ರಿಡ್) ಪ್ರತಿ ಕ್ವಿಂಟಲ್‌ಗೆ ರೂ. 3,699 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ ರೂ. 3,749 ರಂತೆ ದರ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ನವಲಗುಂದ,…

Read More

ಧಾರವಾಡದಲ್ಲಿ ಜಪಾನ್ ನೈಡೆಕ್ ಕಂಪನಿಯ ₹600 ಕೋಟಿ ಆರ್ಚರ್ಡ್ ಹಬ್ ಉದ್ಘಾಟನೆ

ಧಾರವಾಡ ನ.15: ಇಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಶುಕ್ರವಾರ (ನ.14) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಡೆಕ್ ಕಂಪನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿಪೂಜೆ ನೆರವೇರಿಸಿದ್ದೆ. ಕಂಪನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪನಿಯು…

Read More

ಧಾರವಾಡದ ಗ್ರಾಮೀಣ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ: ಸಹನಾ ಮರಾಠಿ ಪ್ರಥಮ ಸ್ಥಾನ

ಧಾರವಾಡ ಸತ್ತೂರು:ಶ್ರೀ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ.) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಬಿ.ಎಡ್ ಕಾಲೇಜು, ಸತ್ತೂರು, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಇತ್ತೀಚೆಗೆ ಪ್ರಕಟಿಸಿದ 2024-25ರ ಬಿ.ಎಡ್ 4ನೇ ಸೆಮಿಸ್ಟರ್ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ತೋರಿದ ಈ ಶೈಕ್ಷಣಿಕ ಉತ್ಕೃಷ್ಟತೆಗೆ ಕಾಲೇಜು ಹೆಮ್ಮೆ ವ್ಯಕ್ತಪಡಿಸಿದೆ. ಕಾಲೇಜಿನ ವಿದ್ಯಾರ್ಥಿಗಳು ಶೇಕಡಾವಾರು ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಸಹನಾ ಮರಾಠಿ ಅವರು ಶೇ. 94.83ರಷ್ಟು ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನವನ್ನು…

Read More

ಮತ್ತಿಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ–ಶಿಕ್ಷಕರ ಮಹಾಸಭೆ

ಮತ್ತಿಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ–ಶಿಕ್ಷಕರ ಮಹಾಸಭೆ ಕುಂದಗೋಳ, ನ.14:ಮತ್ತಿಗಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (14-11-2025) ಮಕ್ಕಳ ದಿನಾಚರಣೆಯನ್ನು ಆಚರಿಸುವ ಭಾಗವಾಗಿ ಪೋಷಕ–ಶಿಕ್ಷಕರ ಮಹಾಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ವೇಳೆ ಶಿಕ್ಷಣದ ಹಕ್ಕು, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ, ಸಮನ್ವಯ ಶಿಕ್ಷಣ, ದಾಖಲಾತಿ ಆಂದೋಲನ, ಹಾಜರಾತಿ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಕುರಿತ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಗುರುಮಾತೆಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು…

Read More

ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ

ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರದಂದು ನಡೆದ ಪೋಷಕ–ಶಿಕ್ಷಕರ ಮಹಾಸಭೆ ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಪ್ರತಿಯೊಬ್ಬ ಪಾಲಕರಿಗೂ ಲೇಖನಿಯನ್ನು ನೀಡಿ ಸ್ವಾಗತಿಸುವ ವಿಶೇಷ ಕಾರ್ಯಕ್ರಮದೊಂದಿಗೆ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮವು ಉತ್ತಮ ಸಂಯೋಜನೆಯಲ್ಲೇ ಯಶಸ್ವಿಯಾಗಿ ನೆರವೇರಿತು. ಶಾಲೆಯ ಶಿಕ್ಷಕರಾದ ಜಿ.ವಿ. ಪಾಟೀಲ ಗುರುಗಳು ಸರ್ಕಾರದ ವಿವಿಧ ಕಲ್ಯಾಣ ಮತ್ತು ಶಿಕ್ಷಣ ಸಂಬಂಧಿತ ಯೋಜನೆಗಳ ಬಗ್ಗೆ ಪಾಲಕರಿಗೆ ವಿವರವಾಗಿ ತಿಳಿಸಿದರು. ಅತಿಥಿ ಶಿಕ್ಷಕರಾದ ಬಾಪು…

Read More

ಜಿಲ್ಲಾ ಪೊಲೀಸ್ ಕಚೇರಿಗೆ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ ವಿಕಾಸ್ ಭೇಟಿ

ಜಿಲ್ಲಾ ಪೊಲೀಸ್ ಕಚೇರಿಗೆ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ ವಿಕಾಸ್ ಭೇಟಿ ಧಾರವಾಡ: ನ.14 ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣೆಯ ಅಂಗವಾಗಿ, ನಿನ್ನೆ (ನ.13) ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ ವಿಕಾಸ್ ಕುಮಾರ ವಿಕಾಸ್ ಅವರು ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಗೌರವ ರಕ್ಷೆಯನ್ನು ಸ್ವೀಕರಿಸಿದರು. ನಂತರ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ಇಲಾಖೆಗಳ ಕಡತಗಳನ್ನು ಪರಿಶೀಲಿಸಿದರು. ಜಿಲ್ಲಾ ವಿಶೇಷ ಘಟಕ ಹಾಗೂ ಜಿಲ್ಲೆಯ ಸಾಮಾಜಿಕ…

Read More