ಕುಂದಗೋಳ: ‘ಭ್ರಷ್ಟಾಚಾರಕ್ಕೆ ಒಳಗಾಗದೆ, ನಿಷ್ಠೆಯಿಂದ ಕೆಲಸ ನಿರ್ವಹಿಸಿ’ – ಲೋಕಾಯುಕ್ತ ಇನ್ಸ್ಪೆಕ್ಟರ್ ಬಸವರಾಜ ಬುದ್ನಿ ಕರೆ
ಕುಂದಗೋಳ: ಲೋಕಾಯುಕ್ತ ಕಾಯ್ದೆಯ ವ್ಯಾಪ್ತಿ ಹೆಚ್ಚಾಗಿದ್ದು, ಸರ್ಕಾರಿ ಅಧಿಕಾರಿಗಳು ಮೈಯೆಲ್ಲ ಕಣ್ತ ತುಂಬಿಕೊಂಡು ಕೆಲಸ ನಿರ್ವಹಿಸಬೇಕು. ಯಾವುದೇ ಸಮಯದಲ್ಲಿ ಏನೆಲ್ಲಾ ಆಗಬಹುದು ಎಂದು ಊಹಿಸಲು ಸಾಧ್ಯವಿಲ್ಲ, ಮತ್ತು ಸಣ್ಣ ತಪ್ಪುಗಳೂ ಸಹ ವೇಗವಾಗಿ ಪ್ರಚಾರಗೊಳ್ಳುವ ಸಾಧ್ಯತೆ ಇದೆ ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಬಸವರಾಜ ಬುದ್ನಿ ಅವರು ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬುಧವಾರದಂದು ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ಇವರ ವತಿಯಿಂದ ಆಯೋಜಿಸಲಾಗಿದ್ದ ‘ಭ್ರಷ್ಟಾಚಾರ ನಿಗ್ರಹ ಜಾಗೃತಿ ಅರಿವು ಸಪ್ತಾಹ–೨೦೨೫’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು…

