ಹಿಂದೂ ಸ್ವರಾಜ್ಯ ಸ್ಥಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರ ಕಾರ್ಯ ಸ್ಮರಣೀಯ: ನವಲಗುಂದದಲ್ಲಿ ಜನ ಜಾಗೃತಿ ಮಹಾ ಸಮಾವೇಶ
ನವಲಗುಂದ: ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ಮತಾಂತರದ ವಿರುದ್ಧ ಹೋರಾಡಲು ಸಾಮಾನ್ಯ ಜನರನ್ನು ಸಂಘಟಿಸಿ, ಅವರನ್ನು ಬಲಿಷ್ಠ ಸೈನಿಕರನ್ನಾಗಿ ಪರಿವರ್ತಿಸುವ ಮೂಲಕ 1674ರಲ್ಲಿ ‘ಹಿಂದೂ ಸ್ವರಾಜ್ಯ’ವನ್ನು ಸ್ಥಾಪಿಸಿದರು. ಇಡೀ ಹಿಂದೂ ಧರ್ಮವನ್ನು ಒಗ್ಗೂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಆರ್ಎಸ್ಎಸ್ ಮುಖಂಡ ವಿನಾಯಕ ಕೆಲಗೇರಿ ಹೇಳಿದರು. ತಾಲೂಕಿನ ಮೊರಬ, ತಲೆಮೊರಬ, ಗುಮ್ಮಗೋಳ, ಶಿರೂರ ಹಾಗೂ ಆಯಟ್ಟಿ ಗ್ರಾಮಗಳ ಸಂಯೋಗದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ಜನ ಜಾಗೃತಿ ಮಹಾ ಸಮಾವೇಶ’ದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡುತ್ತಿದ್ದರು. ಜಗತ್ತಿನ ನೂರಾರು ರಾಷ್ಟ್ರಗಳಿಗೆ…

