ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭರವಸೆ
ಧಾರವಾಡ: ಜಿಲ್ಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ಇಂದು ಧಾರವಾಡ ನಗರದ ಶ್ರೀ ರಾಮ ಎಚ್ಪಿ ಗ್ಯಾಸ್ ಏಜನ್ಸಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬುಕ್ಕಿಂಗ್ ಮಾಡಿದವರಿಗೆ ಎರಡು ಮೂರು ದಿನ ವಿಳಂಬವಾದರೂ ನಿಯಮಾನುಸಾರ ಎಲ್ಲರಿಗೂ ಸಿಲಿಂಡರ್ ಪೂರೈಸಲಾಗುವುದು ಎಂದು ಸ್ಪಷ್ಟಪಡಿಸಿದರು. ವದಂತಿಗಳಿಗೆ ಮಣಿದು ಅನವಶ್ಯಕವಾಗಿ ಮುಂಗಡ ಬುಕ್ಕಿಂಗ್ ಮಾಡುವುದರಿಂದ ವಿತರಣಾ ವ್ಯವಸ್ಥೆಯ ಮೇಲೆ ಅನಗತ್ಯ…

