ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭರವಸೆ

ಧಾರವಾಡ: ಜಿಲ್ಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ಇಂದು ಧಾರವಾಡ ನಗರದ ಶ್ರೀ ರಾಮ ಎಚ್‍ಪಿ ಗ್ಯಾಸ್ ಏಜನ್ಸಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬುಕ್ಕಿಂಗ್ ಮಾಡಿದವರಿಗೆ ಎರಡು ಮೂರು ದಿನ ವಿಳಂಬವಾದರೂ ನಿಯಮಾನುಸಾರ ಎಲ್ಲರಿಗೂ ಸಿಲಿಂಡರ್ ಪೂರೈಸಲಾಗುವುದು ಎಂದು ಸ್ಪಷ್ಟಪಡಿಸಿದರು. ವದಂತಿಗಳಿಗೆ ಮಣಿದು ಅನವಶ್ಯಕವಾಗಿ ಮುಂಗಡ ಬುಕ್ಕಿಂಗ್ ಮಾಡುವುದರಿಂದ ವಿತರಣಾ ವ್ಯವಸ್ಥೆಯ ಮೇಲೆ ಅನಗತ್ಯ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ತಾಲ್ಲೂಕು ಮುಂಚೂಣಿ: ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಶ್ಲಾಘನೆ

​ಧಾರವಾಡ: ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಧಾರವಾಡ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅರವಿಂದ ಏಗನಗೌಡರ ಅವರು ಸೂಚನೆ ನೀಡಿದ್ದಾರೆ. ಇಂದು ಧಾರವಾಡದ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಅಡಿಯಲ್ಲಿ ಜಾರಿಯಾಗುತ್ತಿರುವ ಯೋಜನೆಗಳ ಸಮಗ್ರ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ​ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ…

Read More

​ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಟೋ ಟಿಪ್ಪರ್ ಚಾಲಕರಿಗೆ ಗುರುತಿನ ಚೀಟಿ ವಿತರಣೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಟೋ ಟಿಪ್ಪರ್ ಚಾಲಕರಿಗೆ ಸೋಮವಾರದಂದು ಅಧಿಕೃತ ಗುರುತಿನ ಚೀಟಿ (ID Card) ವಿತರಿಸುವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ನಗರದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚಾಲಕರಿಗೆ ಪಾಲಿಕೆ ವತಿಯಿಂದ ಈ ಗುರುತಿನ ಚೀಟಿಗಳನ್ನು ನೀಡಲಾಯಿತು. ​,ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ (ಶ್ರಮೀಕ ವರ್ಗ) ರಾಜ್ಯ ಅಧ್ಯಕ್ಷ ಮುದುಕೇಶ್ವರ್ ಮಾದರ, ಹಾಗೂ ಮಮತಾ ಬೆಳಗಾಂಕರ್ ಅವರು ಚಾಲಕರಿಗೆ ಗುರುತಿನ ಚೀಟಿ ವಿತರಿಸಿ, ಅವರ ಸೇವೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ…

Read More

ಧಾರವಾಡದಲ್ಲಿ ಮಾರ್ಚ್ 28ರಂದು ವಿಶ್ವ ರಂಗಭೂಮಿ ದಿನಾಚರಣೆ: ಮಾಲತಿ ಕುಂದಾಪುರ ಅವರಿಗೆ ‘ರಂಗ ಸ್ನೇಹಿತ’ ಪ್ರಶಸ್ತಿ ಪ್ರದಾನ

ಧಾರವಾಡ: ನಗರದ ಸ್ನೇಹಿತರು ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ವಿಶೇಷ ಸಮಾರಂಭವನ್ನು ಮಾರ್ಚ್ 28ರಂದು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 5:30ಕ್ಕೆ ಧಾರವಾಡದ ಜಿಲ್ಲಾ ಸಾಹಿತ್ಯ ಪರಿಷತ್ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಹುಬ್ಬಳ್ಳಿಯ ಹಿರಿಯ ವೃತ್ತಿ ರಂಗಭೂಮಿ ಕಲಾವಿದೆ ಶ್ರೀಮತಿ ಮಾಲತಿ ಕುಂದಾಪುರ ಅವರಿಗೆ ಪ್ರತಿಷ್ಠಿತ ‘ರಂಗ ಸ್ನೇಹಿತ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ವಿಜಯೀಂದ್ರ ಅರ್ಚಕ…

Read More

​ಧಾರವಾಡ ಜಿಲ್ಲೆಯಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಬ್ಬ: 105 ಕೇಂದ್ರಗಳಲ್ಲಿ 29,568 ವಿದ್ಯಾರ್ಥಿಗಳಿಂದ ಪರೀಕ್ಷೆ

ಧಾರವಾಡ: ಜಿಲ್ಲೆಯಲ್ಲಿ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಜರುಗಲಿದ್ದು, ಸುಗಮ ಹಾಗೂ ಪಾರದರ್ಶಕ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯ ಒಟ್ಟು 105 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಇದರಲ್ಲಿ 26,171 ಹೊಸ ವಿದ್ಯಾರ್ಥಿಗಳು, 960 ಬಾಹ್ಯ ಅಭ್ಯರ್ಥಿಗಳು ಹಾಗೂ 2,437 ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ಗಂಟೆಯವರೆಗೆ…

Read More

ಧಾರವಾಡ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಹೊಸ ‘ಗ್ರಾಮ ಒನ್’ ಕೇಂದ್ರಗಳ ಸ್ಥಾಪನೆ: ಅರ್ಜಿ ಆಹ್ವಾನ

ಧಾರವಾಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಜನಸಂಖ್ಯೆ ಮತ್ತು ಗ್ರೇಡ್‌ಗಳ ವರ್ಗೀಕರಣದ ಆಧಾರದ ಮೇಲೆ ಹೆಚ್ಚುವರಿ ‘ಗ್ರಾಮ ಒನ್’ ಕೇಂದ್ರಗಳನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಇ.ಡಿ.ಸಿ.ಎಸ್ ನಿರ್ದೇಶಕರ ಸೂಚನೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿಗಳ ವಿವರಗಳನ್ನು ನವೀಕರಿಸಿದೆ. ಈ ನವೀಕರಣದ ಅನ್ವಯ ಕೆಲವು ಗ್ರಾಮ ಪಂಚಾಯತಿಗಳು ಗ್ರೇಡ್-2 ರಿಂದ ಗ್ರೇಡ್-1 ಕ್ಕೆ ಮೇಲ್ದರ್ಜೆಗೇರಿವೆ. ಇಂತಹ ಉನ್ನತೀಕರಿಸಿದ ಹಾಗೂ ಹೊಸದಾಗಿ ಸೇರ್ಪಡೆಯಾದ ಪಂಚಾಯತಿಗಳಲ್ಲಿ…

Read More

ಜಿಲ್ಲೆಯಲ್ಲಿ ಗೃಹಬಳಕೆ ಸಿಲೆಂಡರ್ ಕೊರತೆ ಇಲ್ಲ; ವದಂತಿಗಳಿಗೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಜಿಲ್ಲೆಯ ಸಾರ್ವಜನಿಕರು ಹಾಗೂ ಗೃಹಬಳಕೆ ಅಡಿಗೆ ಅನಿಲ (ಎಲ್‌ಪಿಜಿ) ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಜಿಲ್ಲೆಯಲ್ಲಿ ಗೃಹಬಳಕೆ ಸಿಲೆಂಡರ್‌ಗಳ ಸಾಕಷ್ಟು ದಾಸ್ತಾನು ಲಭ್ಯವಿದ್ದು ಯಾವುದೇ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶಾದ್ಯಂತ ಎಲ್‌ಪಿಜಿ ಉತ್ಪಾದನೆ ಹಾಗೂ ಬಾಟಲಿಂಗ್ ಪ್ರಮಾಣ ಹೆಚ್ಚಿರುವುದರಿಂದ ಸಿಲೆಂಡರ್‌ಗಳ ಸರಬರಾಜು ಸಮರ್ಪಕವಾಗಿದ್ದು ಗ್ರಾಹಕರು ಗಾಬರಿಗೊಳ್ಳುವ ಅಗತ್ಯವಿಲ್ಲ. ಹೆಚ್ಚುವರಿಯಾಗಿ ಸಿಲೆಂಡರ್‌ಗಳನ್ನು ಸಂಗ್ರಹಿಸಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಹೆಚ್ಚಿನ…

Read More

ಹೆದ್ದಾರಿಯಲ್ಲೇ ಅಡುಗೆ, ಟ್ರ್ಯಾಕ್ಟರ್ ನಿಲ್ಲಿಸಿ ರೈತರ ಬೃಹತ್ ಪ್ರತಿಭಟನೆ: 300 ಕೋಟಿ ಅನುದಾನಕ್ಕೆ ಕುಂದಗೋಳ ರೈತರ ಪಟ್ಟು

ಕುಂದಗೋಳ: ತಾಲ್ಲೂಕಿನ ಜಿಗಳೂರು ಕ್ರಾಸ್ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲೇ ರೈತರು ತಮ್ಮ ಎತ್ತು, ಚಕ್ಕಡಿ, ಟ್ರ್ಯಾಕ್ಟರ್ ಹಾಗೂ ನೀರಿನ ಟ್ಯಾಂಕರ್‌ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರೈತರು ಹೆದ್ದಾರಿಯಲ್ಲೇ ಅಡುಗೆ ಪಾತ್ರೆಗಳನ್ನಿಟ್ಟು ಅಡುಗೆ ಮಾಡುವ ಮೂಲಕ ತಮ್ಮ ಹೋರಾಟದ ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಹೊಸೂರಿನಿಂದ ಉದ್ಭವವಾಗುವ ಹಳ್ಳದಿಂದ ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಿನ ಅಕ್ಕಪಕ್ಕದ ಸಾವಿರಾರು ಎಕರೆ ಜಮೀನುಗಳು ಮಳೆಯಾದಾಗ ಜಲಾವೃತಗೊಂಡು ಸಂಪೂರ್ಣ ಹಾಳಾಗುತ್ತಿವೆ….

Read More

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗಿ ಸಾಧನೆ ಮಾಡಲಿ: ಮಾಜಿ ಶಾಸಕಿ ಕುಸುಮಾವತಿ ಚ ಶಿವಳ್ಳಿ ಕರೆ

​ಕುಂದಗೋಳ: ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಅಪ್ರತಿಮ ಸಾಧನೆ ಮಾಡುತ್ತಿದ್ದು, ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು. ​ಪಟ್ಟಣದ ಮರಾಠಾ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಹಾಗೂ ವಿವಿಧ ವೃಂದಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಹಾಗೂ ‘ಮಹಿಳಾ ಸಬಲೀಕರಣ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಇಂದು ಕೇವಲ ಮನೆಗೆ ಸೀಮಿತವಾಗದೆ ಭಾರತೀಯ ಸೇನೆ, ಪೊಲೀಸ್ ಇಲಾಖೆ,…

Read More