ಕುಷ್ಠರೋಗ ಮುಕ್ತ ಜಿಲ್ಲೆಗೆ ಪಣ: ನ. 24 ರಿಂದ ಆರಂಭವಾಗಿ ಡಿ. 9 ರವರೆಗೆ ನಡೆಯುವ ಬೃಹತ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸೂಚನೆ
ಧಾರವಾಡ: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ-2025 ಅನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚನೆ ನೀಡಿದ್ದಾರೆ. ನಿನ್ನೆ (ಅ. 29) ರಂದು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು. 16 ದಿನಗಳ ಬೃಹತ್ ಸಮೀಕ್ಷೆಗೆ ಯೋಜನೆಧಾರವಾಡ ಜಿಲ್ಲೆಯಾದ್ಯಂತ ನವೆಂಬರ್ 24, 2025 ರಿಂದ ಡಿಸೆಂಬರ್ 9, 2025 ರವರೆಗೆ ಅಭಿಯಾನ ರೂಪದಲ್ಲಿ ಈ ಸಮೀಕ್ಷೆಯನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು….

