ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಚಿವ ಲಾಡ್ ತೀವ್ರ ತರಾಟೆ!ಜಾತಿ-ಆದಾಯ ಪ್ರಮಾಣಪತ್ರ ವಿತರಣೆ ವಿಳಂಬ, ಆಸ್ತಿ ಕಡತಗಳ ಬಾಕಿ ಉಳಿಸಿಕೊಂಡಿದ್ದಕ್ಕೆ ಸಚಿವರು ಗರಂ; ಅಮಾನತಿಗೆ ಸೂಚನೆ
ಕಲಘಟಗಿ: ಜಾತಿ ಹಾಗೂ ಆದಾಯ ಪ್ರಮಾಣಪತ್ರ ವಿತರಣೆಯಲ್ಲಿನ ವಿಳಂಬ ಮತ್ತು ಆಸ್ತಿ ಕಡತಗಳನ್ನು ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಂದಾಯ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಕಲಘಟಗಿ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರದಂದು ಜಿಲ್ಲಾಡಳಿತದಿಂದ ಆಯೋಜಿಸಲಾದ 18ನೇ ಜಿಲ್ಲಾಮಟ್ಟದ ಜನಸಂಪರ್ಕ ಸಭೆ (ಜನತಾ ದರ್ಶನ) ಯಲ್ಲಿ ಈ ಘಟನೆ…

