ಕನ್ನಡ ಜಾಗೃತಿ ಸಮಿತಿ ನೇಮಕ ಯಥಾಪ್ರಕಾರ ಮುಂದುವರಿಸಲು ಸಚಿವ ಸಂತೋಷ್ ಲಾಡ್ಗೆ ಮನವಿ
ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಧಾರವಾಡ ಜಿಲ್ಲಾ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ಕನ್ನಡ ಜಾಗೃತಿ ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ, ತಮ್ಮ ನೇಮಕಕ್ಕೆ ತಡೆ ಒಡ್ಡಿರುವ ಪತ್ರವನ್ನು ವಾಪಸ್ ಪಡೆದು, ಸಮಿತಿಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ಮನವಿ ಸಲ್ಲಿಸಿದರು. ಕನ್ನಡ ಸೇವೆ ಗುರುತಿಸಿ ನೇಮಕ: ಸಚಿವರನ್ನು ಭೇಟಿ ಮಾಡಿದ ಸದಸ್ಯರು, “ನಾವು ನಮ್ಮ ನಿತ್ಯದ ಕೆಲಸದ ಜೊತೆಗೆ ದಶಕಗಳಿಂದ ಕನ್ನಡ ಸೇವೆಯಲ್ಲಿ ತೊಡಗಿದ್ದೇವೆ. ನಮ್ಮಲ್ಲಿ ಕೆಲವರು…

