ಆನ್ಲೈನ್ ವಂಚನೆ, ಸೈಬರ್ ಕ್ರೈಂ ಬಗ್ಗೆ ಸರಕಾರಿ ನೌಕರರು ಜಾಗೃತರಾಗಿರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಇತ್ತೀಚೆಗೆ ಆನ್ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಅಪರಾಧಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಸರ್ಕಾರಿ ನೌಕರರು, ಅವರ ಕುಟುಂಬದವರು ಮತ್ತು ಪಿಂಚಣಿದಾರರು ತೀವ್ರ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು. ನವೆಂಬರ್ 17 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಂಬೆ ಸೆಬಿ (SEBI) ಆಯೋಜಿಸಿದ್ದ ಪ್ರಾದೇಶಿಕ ಹೂಡಿಕೆದಾರರ ಜಾಗೃತಿ ಹಾಗೂ ಆನ್ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಕ್ರೈಂಗಳ ಬಗ್ಗೆ ಸರ್ಕಾರಿ ನೌಕರರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

