ಸಂಶಿ: ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ಸಲ್ಲಿಕೆ ನಿಜವಾದ ಪುಣ್ಯ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ
ಕುಂದಗೋಳ: ಇಂದಿನ ದಿನಗಳಲ್ಲಿ ನಿಸ್ವಾರ್ಥಭಾವದಿಂದ ಸೇವೆ ಸಲ್ಲಿಸಿ ಸತ್ಕಾರದಲ್ಲಿ ತೊಡಗಿರುವ ವಿದ್ಯಾರ್ಥಿ ಬಳಗ ಅಪರೂಪ. ಅಂತಹ ವಿದ್ಯಾರ್ಥಿಗಳು ತಂದೆ ತಾಯಿ, ಗುರು-ಹಿರಿಯರನ್ನು ಗೌರವಿಸಿ, ಅವರ ಸೇವಾ ಮನೋಭಾವವನ್ನು ಕಂಡು ಗೌರವಿಸಿ ಸತ್ಕರಿಸುತ್ತಿರುವುದು ನಿಜಕ್ಕೂ ಪುಣ್ಯದ ಕಾರ್ಯ ಎಂದು ಸಂಸ್ಥಾನಮಠ ಶಿರಹಟ್ಟಿಯ ಉತ್ತರಾಧಿಕಾರಿ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಭಾನುವಾರದಂದು ಸಂಶಿ ಗ್ರಾಮದ ಶ್ರೀ ಜ.ಫಕೀರ ಶೀವಜೋಗೀಶ್ವರ ಪ್ರೌಢಶಾಲೆಯಲ್ಲಿ ನಡೆದ 2002-03ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಗುರುವಂದನಾ ಹಾಗೂ ಸ್ನೇಹ ಸಮ್ಮೀಲನ ಸಮಾರಂಭದಲ್ಲಿ ಆಶೀರ್ವಚನ ನೀಡಿ…

