ಧಾರವಾಡ:ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ: ನ. 06 ಕೊನೆಯ ದಿನ

ಧಾರವಾಡ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುವಂತೆ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ೨೦೨೫–೨೬ ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನವೆಂಬರ್ 06,2025 ರೊಳಗಾಗಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶೇಷ ಡಿಇಡಿ (D.Ed) ಅಥವಾ ಬಿಇಡಿ (B.Ed) ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ನೇರಗುತ್ತಿಗೆ ಆಧಾರದ ಮೇಲೆ ಆಯ್ಕೆಯಾದ ಈ ಸಮನ್ವಯ…

Read More

ಕುಂದಗೋಳ: ‘ಸ್ವಸ್ಥ ನಾರಿ ಸಶಕ್ತ ಪರಿವಾರ’ದಿಂದ ಸದೃಢ ಭಾರತ ನಿರ್ಮಾಣ ಸಾಧ್ಯ: ಶಾಸಕ ಎಂ.ಆರ್. ಪಾಟೀಲ

ಕುಂದಗೋಳ:ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಂ.ಆರ್. ಪಾಟೀಲ ಅವರು ಹೇಳಿದರು. ಅವರು ಬುಧುವಾರದಂದು ಪಟ್ಟಣದ ಶಿವಾನಂದ ಮಠದ ಸಭಾಭವನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಧಾರವಾಡದ ನೇತೃತ್ವದಲ್ಲಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು…

Read More

🛣️ ಕಳಪೆ ಗೋವಿನಜೋಳದ ಬೀಜ ವಿತರಣೆ ವಿರೋಧಿಸಿ ಹೆದ್ದಾರಿ ತಡೆ!ಎಕರೆಗೆ 50 ಸಾವಿರ ರೂ. ಪರಿಹಾರ ಹಾಗೂ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲು ಮಹಾದಾಯಿ, ಮಲಪ್ರಭಾ ರೈತ ಹೋರಾಟ ಒಕ್ಕೂಟ ಆಗ್ರಹ

ನವಲಗುಂದ: ತಾಲ್ಲೂಕಿನಾದ್ಯಂತ ರೈತರಿಗೆ ಕಳಪೆ ಗುಣಮಟ್ಟದ ಗೋವಿನಜೋಳದ ಬೀಜಗಳನ್ನು ಪೂರೈಸಿ ಭಾರೀ ನಷ್ಟ ಉಂಟು ಮಾಡಿದ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮಹಾದಾಯಿ, ಮಲಪ್ರಭಾ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ವತಿಯಿಂದ ಮಂಗಳವಾರ ಹುಬ್ಬಳ್ಳಿ-ಸೋಲಾಪೂರ ರಾಷ್ಟ್ರೀಯ ಹೆದ್ದಾರಿಯನ್ನು ಕೆಲ ಕಾಲ ತಡೆದು ಪ್ರತಿಭಟನೆ ನಡೆಸಲಾಯಿತು. ಕಳಪೆ ಬೀಜ ವಿತರಣೆಯಿಂದ ರೈತರಿಗೆ ಉಂಟಾದ ಹಾನಿಗೆ ಸರ್ಕಾರ ಮಧ್ಯ ಪ್ರವೇಶಿಸಿ, ಆ ಕಂಪನಿಯಿಂದ ಎಕರೆಗೆ ತಲಾ 50,000 ರೂ.ಗಳ ಪರಿಹಾರ ನೀಡಲು ಸೂಚಿಸಬೇಕು. ಜೊತೆಗೆ, ಸಾರ್ವಜನಿಕರಿಗೆ…

Read More

ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಚಿವ ಲಾಡ್ ತೀವ್ರ ತರಾಟೆ!ಜಾತಿ-ಆದಾಯ ಪ್ರಮಾಣಪತ್ರ ವಿತರಣೆ ವಿಳಂಬ, ಆಸ್ತಿ ಕಡತಗಳ ಬಾಕಿ ಉಳಿಸಿಕೊಂಡಿದ್ದಕ್ಕೆ ಸಚಿವರು ಗರಂ; ಅಮಾನತಿಗೆ ಸೂಚನೆ

ಕಲಘಟಗಿ: ಜಾತಿ ಹಾಗೂ ಆದಾಯ ಪ್ರಮಾಣಪತ್ರ ವಿತರಣೆಯಲ್ಲಿನ ವಿಳಂಬ ಮತ್ತು ಆಸ್ತಿ ಕಡತಗಳನ್ನು ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಂದಾಯ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಕಲಘಟಗಿ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರದಂದು ಜಿಲ್ಲಾಡಳಿತದಿಂದ ಆಯೋಜಿಸಲಾದ 18ನೇ ಜಿಲ್ಲಾಮಟ್ಟದ ಜನಸಂಪರ್ಕ ಸಭೆ (ಜನತಾ ದರ್ಶನ) ಯಲ್ಲಿ ಈ ಘಟನೆ…

Read More

ಬೀದಿ ಬದಿ ವ್ಯಾಪಾರಿಗಳಿಗೆ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆ ಅನುಮತಿ ಕೋರಿ ಮನವಿರಾಮ ರಹೀಮ ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ಶಾಸಕ ಕೋನರಡ್ಡಿ ಮೂಲಕ ತಹಶೀಲ್ದಾರರಿಗೆ ಮನವಿ

ನವಲಗುಂದ: ಸ್ಥಳೀಯ ಬಸ್ ನಿಲ್ದಾಣದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕಡಲೆಕಾಯಿ, ಶೇಂಗಾ, ಲಿಂಬಿಹುಳಿ, ಹಣ್ಣು ಇತ್ಯಾದಿಗಳನ್ನು ವ್ಯಾಪಾರ ಮಾಡಲು ಅನುಮತಿಯನ್ನು ನೀಡುವಂತೆ ಆಗ್ರಹಿಸಿ ರಾಮ ರಹೀಮ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳವಾರ ಶಾಸಕ ಎನ್.ಹೆಚ್. ಕೋನರಡ್ಡಿ ಹಾಗೂ ಶಿರೇಸ್ತದಾರ ಗಣೇಶ ಚಳ್ಳಕೆರೆ ಅವರ ಮುಖಾಂತರ ತಹಶೀಲ್ದಾರವರಿಗೆ ಮನವಿ ಸಲ್ಲಿಸಲಾಯಿತು. ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಅನುಕೂಲವಾಗುವಂತೆ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಸಂಘವು ಮನವಿ ಪತ್ರದಲ್ಲಿ ಒತ್ತಾಯಿಸಿದೆ. ಈ ಮನವಿ ಸಲ್ಲಿಸುವ ಸಂದರ್ಭದಲ್ಲಿ…

Read More

ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

ಧಾರವಾಡ: ಅ.28: ರಾಜ್ಯ ಸರ್ಕಾರವು ನೀಡುವ ಸಹಕಾರ ರತ್ನ 2025ನೇ ಸಾಲಿನ ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಧಾರವಾಡ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಅಕ್ಟೋಬರ್ 30, 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕ…

Read More

ನವೆಂಬರ್ 1 ರಂದು 70ನೇ ಕರ್ನಾಟಕ ರಾಜ್ಯೋತ್ಸವ: ಧಾರವಾಡದಲ್ಲಿ ಭವ್ಯ ಧ್ವಜಾರೋಹಣ ಕಾರ್ಯಕ್ರಮ

ಧಾರವಾಡ :ಜಿಲ್ಲಾಡಳಿತವು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭವ್ಯ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವ ಸಂದೇಶ ನೀಡುವರು. ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವರಾದ ಪ್ರಲ್ಹಾದ ಜೋಶಿ, ಹಾಗೂ…

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಅಭಿಮಾನಿ ಪ್ರಶಸ್ತಿ, ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆ ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು…

Read More

ಬದುಕಿನ ಮೌಲ್ಯಗಳನ್ನು ತಮ್ಮ ಸಾಹಿತ್ಯದ ಮೂಲಕ ಗಾಢವಾಗಿ ತೋರಿಸಿದವರು ಬೇಂದ್ರೆ: ಡಾ. ಮಲ್ಲಿಕಾ ಘಂಟಿ

ಧಾರವಾಡ: “ಒಬ್ಬ ಕವಿ ಕಾಲಾನಂತರದಲ್ಲಿಯೂ ಇಂದಿನ ಯುವಕರು ಕಥೆ, ಕಾವ್ಯಗಳನ್ನು ಕಟ್ಟುವ ರೀತಿಯಲ್ಲಿ ಬದುಕಿದ್ದರು. ಅವರ ಎಲ್ಲ ಪ್ರಸಂಗಗಳು ಮಾನವೀಯ ನೆಲೆಯೊಳಗೆ ನೆಲೆಸಿರುವಂತವುಗಳು. ಬದುಕಿನ ಮೌಲ್ಯಗಳನ್ನು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿದವರು ದ.ರಾ.ಬೇಂದ್ರೆಯವರು,” ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿದರು. ಅವರು ಮಂಗಳವಾರದಂದು ರಂದು ಧಾರವಾಡದ ಡಾ. ದ.ರಾ. ಬೇಂದ್ರೆ ಭವನದಲ್ಲಿ, ಧಾರವಾಡ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ವರಕವಿ ಡಾ. ದ.ರಾ. ಬೇಂದ್ರೆಯವರ…

Read More

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಲೋಕಾಯುಕ್ತ ಎಸ್.ಪಿ.

ನವಲಗುಂದ: ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯನಿಷ್ಠೆಯನ್ನು ಉತ್ತೇಜಿಸುವುದರೊಂದಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಉದ್ದೇಶದಿಂದ, ನವಲಗುಂದದ ಶಂಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕರ್ನಾಟಕ ಲೋಕಾಯುಕ್ತ ಧಾರವಾಡ ವಿಭಾಗದ ವತಿಯಿಂದ ಜಂಟಿಯಾಗಿ “ಭ್ರಷ್ಟಾಚಾರ ನಿಗ್ರಹ ಜಾಗೃತಿ ಅರಿವು ಸಪ್ತಾಹ–2025” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಲೋಕಾಯುಕ್ತ ಎಸ್‌ಪಿ ಪ್ರಭುಲಿಂಗಯ್ಯ ಹಿರೇಮಠ ಅವರು, ಭ್ರಷ್ಟಾಚಾರವು ಸಮಾಜದ ಪ್ರಗತಿಗೆ ದೊಡ್ಡ ಅಡ್ಡಿಯಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ಎಚ್ಚರದಿಂದಿದ್ದು, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಾಗ ಮಾತ್ರ ದೇಶವನ್ನು ಭ್ರಷ್ಟಾಚಾರ…

Read More