ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಡಿಜಿ ಮತ್ತು ಐಜಿಪಿ ಅವರಿಂದ ಪ್ರಗತಿ ಪರಿಶೀಲನಾ ಸಭೆ: ಜನಸ್ನೇಹಿ ಸೇವೆಗೆ ಒತ್ತು
ಧಾರವಾಡ:ರಾಜ್ಯದ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರು ಭಾನುವಾರ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಸೇವೆಯು ಜನಸ್ನೇಹಿಯಾಗಿರಬೇಕು. ಸಾರ್ವಜನಿಕರ ರಕ್ಷಣೆ ನಮ್ಮ ಪ್ರಥಮ ಆದ್ಯತೆಯಾಗಿರಬೇಕು. ಅಲ್ಲದೆ, ಇಲಾಖೆ ಜಾರಿಗೆ ತಂದಿರುವ ‘ಮನೆ ಮನೆಗೆ ಪೊಲೀಸ್’ ಉಪಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದು, ಅಭಾದಿತ ಮತ್ತು ನೊಂದ ವ್ಯಕ್ತಿಗಳ ಪರವಾಗಿ ಪೊಲೀಸರು ಇನ್ನೂ ಉತ್ತಮ ಕರ್ತವ್ಯ…

