ಸಮಂಜಸ ಪ್ರಶ್ನೆಗಳೇ ಶಿಕ್ಷಣದಲ್ಲಿ ಬದಲಾವಣೆಗೆ ಮುನ್ನುಡಿ: ಡಾ. ಗಣೇಶ ದೇವಿ; ಪ್ರಜಾಪ್ರಭುತ್ವದ ಸೂಚ್ಯಂಕ ಕುಸಿತಕ್ಕೆ ಕಳವಳ
ಧಾರವಾಡ: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಸಮಂಜಸವಾದ ಪ್ರಶ್ನೆಗಳನ್ನು ಕೇಳಿದಾಗ ಮಾತ್ರ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರಬಹುದು. ಪ್ರಶ್ನೆ ಕೇಳುವುದರಿಂದ ತಾರ್ಕಿಕ ಶಕ್ತಿ ವೃದ್ಧಿಸುತ್ತದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಭಾಷಾ ತಜ್ಞರಾದ ಪ್ರೊ. ಗಣೇಶ ಎನ್. ದೇವಿ ಅವರು ಅಭಿಪ್ರಾಯಪಟ್ಟರು. ಅವರು ಸೋಮವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ–2025 ಅಂಗವಾಗಿ ಆಯೋಜಿಸಿದ್ದ ತಿಂಗಳಪೂರ್ಣ ಕಾರ್ಯಕ್ರಮದ ಅಡಿಯಲ್ಲಿ ನಡೆದ ‘ಧರೆಗೆ ದೊಡ್ಡವರು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನಗಣತಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಆತಂಕ…

