ಕುಂದಗೋಳ: ‘ಸ್ವಸ್ಥ ನಾರಿ ಸಶಕ್ತ ಪರಿವಾರ’ದಿಂದ ಸದೃಢ ಭಾರತ ನಿರ್ಮಾಣ ಸಾಧ್ಯ: ಶಾಸಕ ಎಂ.ಆರ್. ಪಾಟೀಲ
ಕುಂದಗೋಳ:ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಂ.ಆರ್. ಪಾಟೀಲ ಅವರು ಹೇಳಿದರು. ಅವರು ಬುಧುವಾರದಂದು ಪಟ್ಟಣದ ಶಿವಾನಂದ ಮಠದ ಸಭಾಭವನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಧಾರವಾಡದ ನೇತೃತ್ವದಲ್ಲಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು…

